Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಚಲನಚಿತ್ರೋತ್ಸವದಲ್ಲಿ ‘ಫೆಲೆಸ್ತೀನ್’...

ಚಲನಚಿತ್ರೋತ್ಸವದಲ್ಲಿ ‘ಫೆಲೆಸ್ತೀನ್’ ಸಿನೆಮಾಗಳಿಗೆ ನಿರ್ಬಂಧ ವಿಚಾರ: ಕವಿತೆ ವಾಚಿಸುವ ಮೂಲಕ ನಟ ಪ್ರಕಾಶ್ ರಾಜ್ ಪ್ರತಿರೋಧ

ವಾರ್ತಾಭಾರತಿವಾರ್ತಾಭಾರತಿ29 Jan 2026 9:48 PM IST
share
ಚಲನಚಿತ್ರೋತ್ಸವದಲ್ಲಿ ‘ಫೆಲೆಸ್ತೀನ್’ ಸಿನೆಮಾಗಳಿಗೆ ನಿರ್ಬಂಧ ವಿಚಾರ: ಕವಿತೆ ವಾಚಿಸುವ ಮೂಲಕ ನಟ ಪ್ರಕಾಶ್ ರಾಜ್ ಪ್ರತಿರೋಧ

ಬೆಂಗಳೂರು: ಹದಿನೇಳನೆಯ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಫೆಲೆಸ್ತೀನ್ ದೇಶದ ಸಿನೆಮಾಗಳಿಗೆ ನಿರ್ಬಂಧ ಹೇರಿರುವುದಕ್ಕೆ ಕಾರ್ಯಕ್ರಮದ ವೇದಿಕೆಯಲ್ಲಿಯೇ ತೀವ್ರ ಬೇಸರ ವ್ಯಕ್ತಪಡಿಸಿದ ಚಲನಚಿತ್ರೋತ್ಸವ ರಾಯಭಾರಿಯೂ ಆದ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು, ಫೆಲೆಸ್ತೀನ್ ಕವಿತೆ ವಾಚಿಸುವ ಮೂಲಕ ತಮ್ಮ ಪ್ರತಿರೋಧ ವ್ಯಕ್ತಪಡಿಸಿದರು.

ಗುರುವಾರ ವಿಧಾನಸೌಧದ ಮುಂಭಾಗದ ಪೂರ್ವದ್ವಾರದ ಮೆಟ್ಟಿಲುಗಳ ಮೇಲೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಚಲನಚಿತ್ರ ಅಕಾಡೆಮಿ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಜಂಟಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ 17ನೆ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭವನ್ನುದ್ದೇಶಿಸಿ ಅವರು ಮಾತನಾಡಿದರು.

16 ವರ್ಷದ ಹಿಂದೆಯೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವನ್ನು ಉದ್ಘಾಟನೆ ಮಾಡಿದ್ದೆ. ಅಂದಿನಿಂದ ಇದುವರೆಗೂ ಸಿನೆಮಾ ಕ್ಷೇತ್ರದ ವಿವಿಧ ಕೆಲಸಗಳಲ್ಲಿ ತೊಡಗಿಕೊಂಡಿದ್ದೇನೆ. ಆದರೆ, ಇತ್ತೀಚಿಗೆ ಚಲನಚಿತ್ರಗಳು ರಾಜಕೀಯ ಬಲೆಗೆ ಸಿಲುಕಿವೆ. ಅದರಲ್ಲೂ ಕೇಂದ್ರ ಸರಕಾರ ಫೆಲೆಸ್ತೀನ್ ದೇಶದ ಸಿನೆಮಾಗಳಿಗೆ ನಿರ್ಬಂಧಿಸಿರುವುದು ಅತ್ಯಂತ ನೋವಿನ ಸಂಗತಿ ಎಂದು ಪ್ರಕಾಶ್ ರಾಜ್ ಬೇಸರ ವ್ಯಕ್ತಪಡಿಸಿದರು.

ಕರ್ನಾಟಕವು ಶಾಂತಿಯ ತೋಟಕ್ಕೆ ಹೆಸರು ಮಾಡಿದೆ. ಇಲ್ಲಿನ ರಂಗನತಿಟ್ಟು, ವಿಜಯನಗರದ ಅಂಕ ಸಮುದ್ರಕ್ಕೆ ದೇಶ, ವಿದೇಶಗಳಿಂದ ಹಕ್ಕಿಗಳು ಬರುವಂತೆ ನಾವು ಸಹ ಬೇರೆ ದೇಶಗಳ ಸಿನೆಮಾ, ಭಾವನೆಗಳಿಗೆ ಸ್ಪಂದಿಸಬೇಕು. ನಮ್ಮದೇ ಕತೆಗಳಿಗೆ ಬೂಕರ್ ಪ್ರಶಸ್ತಿ ಸಿಕ್ಕಿದಾಗ ಸಂಭ್ರಮಿಸುವ ನಾವು, ಬೇರೆ ಸಿನೆಮಾಗಳಿಗೆ ವಿರೋಧ ಏಕೆ ಎಂದ ಅವರು, ರಾಜ್ಯ ಸರಕಾರ ಕೇರಳ ಮಾದರಿಯಲ್ಲಿಯೇ ಗಟ್ಟಿ ನಿಲುವು ತೆಗೆದುಕೊಂಡು ಫೆಲೆಸ್ತೀನ್ ದೇಶದ ಸಿನೆಮಾಗಳ ಮೇಲಿನ ನಿರ್ಬಂಧ ತೆಗೆಯಲು ಮುಂದಾಗಬೇಕು ಎಂದು ಪ್ರಕಾಶ್ ರಾಜ್ ಆಗ್ರಹಿಸಿದರು.

ಪ್ರಕಾಶ್ ರಾಜ್ ವಾಚಿಸಿದ ‘ಫೆಲೆಸ್ತೀನ್’ ಕವಿತೆ: ‘ಯುದ್ಧಗಳು ಕೊನೆಗೊಳ್ಳುತ್ತವೆ. ನಾಯಕರು ಕೈ ಕುಲುಕಿ ಹೊರಟು ಹೋಗುತ್ತಾರೆ. ಆದರೆ ಎಲ್ಲೋ, ವಯಸ್ಸಾದ ತಾಯಿ ಇನ್ನೂ ತನ್ನ ಮಗನಿಗಾಗಿ ಕಾಯುತ್ತಾಳೆ, ಹೆಂಡತಿ ತನ್ನ ಗಂಡನಿಗಾಗಿ ಕಾಯುತ್ತಾಳೆ ಮತ್ತು ಮಕ್ಕಳು ತಮ್ಮ ತಂದೆಗಾಗಿ ಕಾಯುತ್ತಾರೆ. ಅದು ಸತ್ಯ. ಈ ಭೂಮಿಯನ್ನು ಯಾರು ತ್ಯಜಿಸಿದರು ಎಂಬುದು ನಮಗೆ ತಿಳಿದಿಲ್ಲದಿರಬಹುದು, ಆದರೆ ಅದಕ್ಕೆ ಯಾರು ಬೆಲೆ ತೆರುತ್ತಿದ್ದಾರೆಂದು ನಮಗೆ ತಿಳಿದಿದೆ ಎಂದು 17ನೆ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಈ ಕವಿತೆಯನ್ನು ಪ್ರಕಾಶ್ ರಾಜ್ ವಾಚಿಸಿದರು.

Tags

Bengaluru International Film FestivalPrakash RajPalestine
share
ವಾರ್ತಾಭಾರತಿ
ವಾರ್ತಾಭಾರತಿ
Next Story
X