Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರಿನಲ್ಲಿ ‘ಸುರಂಗ ರಸ್ತೆ’ ಅಗತ್ಯತೆ...

ಬೆಂಗಳೂರಿನಲ್ಲಿ ‘ಸುರಂಗ ರಸ್ತೆ’ ಅಗತ್ಯತೆ ಕುರಿತು ರಾಜ್ಯ ಸರಕಾರಕ್ಕೆ ವರದಿ: ಎಂ.ಲಕ್ಷ್ಮಣ್

ವಾರ್ತಾಭಾರತಿವಾರ್ತಾಭಾರತಿ12 Nov 2025 12:15 AM IST
share
ಬೆಂಗಳೂರಿನಲ್ಲಿ ‘ಸುರಂಗ ರಸ್ತೆ’ ಅಗತ್ಯತೆ ಕುರಿತು ರಾಜ್ಯ ಸರಕಾರಕ್ಕೆ ವರದಿ: ಎಂ.ಲಕ್ಷ್ಮಣ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಉದ್ದೇಶಿಸಿರುವ ಸುರಂಗ ರಸ್ತೆಯ ಅಗತ್ಯತೆ ಮತ್ತು ಜನರಲ್ಲಿ ಜಾಗೃತಿ ಮೂಡಿಸಲು ಮುಂದಾಗಬೇಕೆಂದು ರಾಜ್ಯ ಸರಕಾರಕ್ಕೆ ಸಿವಿಲ್ ಇಂಜಿನಿಯರ್ ತಜ್ಞರ ತಂಡವು ವರದಿ ಸಲ್ಲಿಸಿದೆ ಎಂದು ಭಾರತೀಯ ಇಂಜಿನಿಯರ್ ಗಳ ಸಂಸ್ಥೆ(ಐಇಐ) ರಾಜ್ಯ ಕಾರ್ಯದರ್ಶಿ ಎಂ. ಲಕ್ಷ್ಮಣ್ ಹೇಳಿದ್ದಾರೆ.

ಮಂಗಳವಾರ ನಗರದ ಭಾರತೀಯ ಇಂಜಿನಿಯರ್ ಗಳ ಸಂಸ್ಥೆಯ ಕಚೇರಿಯಲ್ಲಿ ಆಯೋಜಿಸಿದ್ದ ಬೆಂಗಳೂರಿನಲ್ಲಿ ಸುರಂಗ ರಸ್ತೆಗಳ ಕುರಿತ ಚರ್ಚೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಸಮಸ್ಯೆ ವಿಶ್ವದಲ್ಲಿಯೇ ಸದ್ದು ಮಾಡಿದೆ. ಇಂತಹ ಸಂದರ್ಭದಲ್ಲಿ ಸುರಂಗ ಮಾರ್ಗ ನಿರ್ಮಾಣದಿಂದ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದರು.

ಈ ಸುರಂಗ ರಸ್ತೆಗಳಿಂದ ವಾಹನ ಸವಾರರಿಗೆ ಅನುಕೂಲವೇ ಹೆಚ್ಚಿದೆ. ಬೆಂಗಳೂರನ್ನು ಬಿಟ್ಟು ಹೊರಗಡೆ ಪ್ರಯಾಣ ಬೆಳೆಸುವವರ ಸಮಯವನ್ನು ಸುರಂಗ ರಸ್ತೆ ನಿರ್ಮಾಣದಿಂದ ಉಳಿಸಬಹುದಾಗಿದೆ. ಈಗಾಗಲೇ ದೇಶದಲ್ಲಿ ಹಲವು ಕಡೆ ಸುರಂಗ ರಸ್ತೆ ನಿರ್ಮಾಣಮಾಡಲಾಗಿದ್ದು, ಯಶಸ್ವಿಯೂ ಆಗಿದೆ. ಇಂತಹ ನೈಜ ಅಂಶಗಳು ನಮ್ಮ ಮುಂದೆ ಇದ್ದರೂ, ರಾಜಕೀಯ ಕಾರಣಗಳಿಂದ ವಿರೋಧ ವ್ಯಕ್ತವಾಗುತ್ತಿರುವುದು ಒಳ್ಳೆಯದಲ್ಲ ಎಂದು ಹೇಳಿದರು.

ರಾಜ್ಯ ಸರಕಾರ ಉದ್ದೇಶಿಸಿರುವ ಸುರಂಗ ರಸ್ತೆ ಬಗ್ಗೆ ಸಿವಿಲ್ ಇಂಜಿನಿಯರ್ ತಜ್ಞರು ಅಧ್ಯಯನ ನಡೆಸಿದ್ದಾರೆ. ಜನ ಸಮುದಾಯಕ್ಕೆ ತೊಂದರೆ ಆಗದಂತೆ ಭವಿಷ್ಯದಲ್ಲಿ ತುಂಬಾ ಅನುಕೂಲ ಆಗುವ ಅಂಶಗಳೇ ಇವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸುರಂಗ ರಸ್ತೆಗೆ ತಗಲುವ ವೆಚ್ಚ, ಸಮಯ, ಮಾರ್ಗಗಳು ಹೀಗೆ ಹಲವು ಅಂಶಗಳ ವರದಿಯನ್ನು ರಾಜ್ಯ ಸರಕಾರಕ್ಕೆ ಸಲ್ಲಿಸಿದ್ದು, ಸುರಂಗ ರಸ್ತೆ ಯೋಜನೆ ಕೈಬಿಡಬೇಡಿ ಎಂದು ಉಲ್ಲೇಖಿಸಲಾಗಿದೆ ಎಂದು ಅವರು ತಿಳಿಸಿದರು.

ಸುರಂಗ ರಸ್ತೆಯಿಂದ ಲಾಲ್‍ಬಾಗ್ ಸೇರಿದಂತೆ ಹಲವರ ಆಸ್ತಿಪಾಸ್ತಿ ಹಾನಿ ಆಗಲಿದೆ ಎಂದು ಅಪಪ್ರಚಾರ ಮಾಡಲಾಗುತ್ತದೆ. ವಾಸ್ತವದಲ್ಲಿ ಆಸ್ತಿ ಹಾನಿ ಆಗಲ್ಲವೆಂದು ನಾನು ನಂಬಿದ್ದೇನೆ. ಸುರಂಗ ಮಾರ್ಗವೂ ಭೂಮಿ ಒಳಗೆ ಇರಲಿದೆ ಹೊರತು, ಮೇಲೆ ಯಾವುದೇ ಚಟುವಟಿಕೆ ಕಂಡುಬರುವುದಿಲ್ಲ.ಈಗಾಗಲೇ ಮೆಟ್ರೋ ಕಾಮಗಾರಿ ಸಂದರ್ಭದಲ್ಲಿ ಸುರಂಗ ಕಾಮಗಾರಿ ನಡೆಸಲಾಗಿತ್ತು.ಹೀಗಾಗಿ, ಯಾರು ಆತಂಕ ವ್ಯಕ್ತಪಡಿಸುವ ಅಗತ್ಯವಿಲ್ಲ ಎಂದು ಲಕ್ಷ್ಮಣ್ ತಿಳಿಸಿದರು. ಈ ವೇಳೆ ಸಂಸ್ಥೆಯ ಡಾ.ರಂಗರೆಡ್ಡಿ, ಡಾ.ಎನ್.ಚಿಕ್ಕಣ್ಣ ಸೇರಿದಂತೆ ಪ್ರಮುಖರಿದ್ದರು.

ಜಾಗೃತಿ ಮೂಡಿಸಲಿ: ‘ಸುರಂಗ ರಸ್ತೆಯಲ್ಲಿ ಬರೀ ಕಾರುಗಳು, ಶ್ರೀಮಂತರು ಹೋಗುತ್ತಾರೆ ಎನ್ನುವ ಸುಳ್ಳು ಅಂಶಗಳನ್ನು ಉದ್ದೇಶಪೂರಕವಾಗಿ ಹರಿಬಿಡಲಾಗಿದೆ. ಇಂತಹ ಸುಳ್ಳು, ತಪ್ಪು ಮಾಹಿತಿಯನ್ನು ರಾಜ್ಯ ಸರಕಾರ ನಿಯಂತ್ರಿಸುವ ಜತೆಗೆ, ಸುರಂಗ ಮಾರ್ಗದ ಕುರಿತು ಜಾಗೃತಿ ಮೂಡಿಸಲು ಮುಂದಾಗಬೇಕು’

-ಎಂ.ಲಕ್ಷ್ಮಣ್, ರಾಜ್ಯ ಕಾರ್ಯದರ್ಶಿ, ಭಾರತೀಯ ಇಂಜಿನಿಯರ್‍ಗಳ ಸಂಸ್ಥೆ(ಐಇಐ)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X