Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಥಣಿಸಂದ್ರದ ಒತ್ತುವರಿ ತೆರವು ಪ್ರಕರಣ |...

ಥಣಿಸಂದ್ರದ ಒತ್ತುವರಿ ತೆರವು ಪ್ರಕರಣ | ಪರಿಹಾರ ಪಡೆದು ಅಕ್ರಮವಾಗಿ ನಿವೇಶನಗಳ ಮಾರಾಟ : ಬಿಡಿಎ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ9 Jan 2026 9:34 PM IST
share
ಥಣಿಸಂದ್ರದ ಒತ್ತುವರಿ ತೆರವು ಪ್ರಕರಣ | ಪರಿಹಾರ ಪಡೆದು ಅಕ್ರಮವಾಗಿ ನಿವೇಶನಗಳ ಮಾರಾಟ : ಬಿಡಿಎ ಸ್ಪಷ್ಟನೆ

ಬೆಂಗಳೂರು : ನಗರದಲ್ಲಿರುವ ಥಣಿಸಂದ್ರದ ಒತ್ತುವರಿ ಭೂಮಿಯನ್ನು ಅರ್ಕಾವತಿ ಲೇಔಟ್‍ಗಾಗಿ ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಪರಿಹಾರವನ್ನು ಪಡೆದ ಭೂಮಾಲಕರು ಅಕ್ರಮವಾಗಿ ನಿವೇಶನಗಳನ್ನು ಮಾರಾಟ ಮಾಡಿದ್ದಾರೆ. ಹೀಗಾಗಿ ಗುರುವಾರ(ಜ.8) ಥಣಿಸಂದ್ರದಲ್ಲಿ ಒತ್ತುವರಿಯನ್ನು ತೆರವು ಮಾಡಲಾಗಿದೆ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಸ್ಪಷ್ಟನೆ ನೀಡಿದೆ.

ಈ ಬಗ್ಗೆ ಶುಕ್ರವಾರ ಬಿಡಿಎ ಪ್ರಕಟನೆ ಹೊರಡಿಸಿದ್ದು, ಅರ್ಕಾವತಿ ಲೇಔಟ್‍ಗಾಗಿ ಸ್ವಾಧೀನಪಡಿಸಿಕೊಳ್ಳುವ ಬಗ್ಗೆ 2003ರ ಫೆ.3ರಂದು ಪೂರ್ವಭಾವಿ ಅಧಿಸೂಚನೆ ಮತ್ತು 2004ರ ಫೆ.23ರಂದು ಅಂತಿಮ ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಒಂದು ಸುತ್ತಿನ ಒತ್ತುವರಿಯನ್ನು ತೆರವುಗೊಳಿಸಿ, ಆಸ್ತಿ ಒಡೆತನವನ್ನು 2004ರ ನ.10ರಂದು ಪಡೆಯಲಾಗಿದೆ. ಇದಕ್ಕೆ ಭೂಮಾಲಕರು ಪರಿಹಾರವನ್ನು ಪಡೆದುಕೊಂಡಿದ್ದಾರೆ ಎಂದು ಹೇಳಿದೆ.

2014ರಲ್ಲಿ ಈ ಬಗ್ಗೆ ಹೈಕೋರ್ಟ್ ವಿವರವಾದ ಆದೇಶವನ್ನು ಹೊರಡಿಸಿದೆ. 2021ರಲ್ಲಿ ಅರ್ಕಾವತಿ ಲೇಔಟ್‍ಗೆ ಸಂಬಂಧಿಸಿ ಹೈಕೋರ್ಟ್ ಸಾಮಾನ್ಯ ಆದೇಶವನ್ನು ಹೊರಡಿಸಿದೆ. ಇದರ ಹೊರತಾಗಿಯೂ, ಭೂಮಾಲಕರು ಅಕ್ರಮವಾಗಿ ಮತ್ತು ವಂಚಿಸಿ ನಿವೇಶನಗಳನ್ನು ಮಾರಾಟ ಮಾಡಿದ್ದಾರೆ. 33 ನಿವೇಶನಗಳ ಖರೀದಿದಾರರು ನ್ಯಾಯಾಲಯ ನೇಮಿಸಿದ ಕೇಶವನಾರಾಯಣ ಸಮಿತಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಮಾಹಿತಿ ನೀಡಿದೆ.

ಸಮಿತಿಯು ನೋಟಿಸ್ ನೀಡಿ, ವಿಚಾರಣೆ ನಡೆಸಿ, ಅವು ಅಕ್ರಮ ಎಂದು 2023 ಫೆ.16ರಂದು ಘೋಷಿಸಿ, ಬಿಡಿಎಗೆ ಒಡೆತನ ಪಡೆಯುವಂತೆ ನಿರ್ದೇಶನ ನೀಡಿದೆ. ನಿವೇಶನ ಮಾಲಕರು ಅಕ್ರಮವಾಗಿ ಶೆಡ್‍ಗಳನ್ನು ನಿರ್ಮಿಸಿದ್ದು, ಅಲ್ಲಿ ವಾಸಿಸುತ್ತಿರಲಿಲ್ಲ. ಬದಲಾಗಿ ಶೆಡ್‍ಗಳನ್ನು ಬಾಡಿಗೆಗೆ ನೀಡಿ ಬಾಡಿಗೆ ಪಡೆಯುತ್ತಿದ್ದರು ಎಂದು ಬಿಡಿಎ ಆರೋಪಿಸಿದೆ.

ಹೀಗಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಪರಿಹಾರವನ್ನೂ ಪಾವತಿಸಲಾಗಿದೆ. ನ್ಯಾಯಾಲಯ ಮತ್ತು ಪರಿಶೀಲನಾ ಸಮಿತಿಯಲ್ಲಿ ಬಿಡಿಎ ಪರವಾಗಿ ವಿಚಾರ ನಿರ್ಧಾರವಾಗಿದೆ. ನಿವೇಶನ ಮಾಲಕರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಾಗಿದೆ. ಭೂ ಮಾಲಕರು ಬಿಡಿಎಗೆ ಸೇರಿದ ಭೂಮಿಯಲ್ಲಿ ಅಕ್ರಮವಾಗಿ ಶೆಡ್‍ಗಳಿಂದ ಬಾಡಿಗೆ ಸಂಗ್ರಹಿಸುತ್ತಿದ್ದ ಬಗ್ಗೆ ಆದೇಶವನ್ನೂ ಹೊರಡಿಸಲಾಗಿದೆ ಎಂದು ಬಿಡಿಎ ಸ್ಪಷ್ಟಪಡಿಸಿದೆ.

Tags

Thanisandra demolitionEncroachmentBDA
share
ವಾರ್ತಾಭಾರತಿ
ವಾರ್ತಾಭಾರತಿ
Next Story
X