ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು : ದಾವಣಗೆರೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿಟ್ಟೆ ಮಾಧವ್ ವಿಠ್ಠಲ್ ರಾವ್ ಅವರನ್ನು ಬೀದರ್ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ರಾಯಚೂರು ನಗರ ಪಾಲಿಕೆ ಆಯುಕ್ತ ಜುಬಿನ್ ಮೊಹಾಪಾತ್ರ ಅವರನ್ನು ಯಾದಗಿರಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ, ಕಲಬುರಗಿ ಉಪ ವಿಭಾಗದ ಹಿರಿಯ ಸಹಾಯಕ ಆಯುಕ್ತೆ ಸಾಹಿತ್ಯ ಎಂ.ಆಳದಕಟ್ಟಿ ಅವರನ್ನು ದಾವಣಗೆರೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
Next Story




