Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಅಂಬೇಡ್ಕರ್ ವೃತ್ತ ನಿರ್ಮಾಣ ವಿಳಂಬ| 15...

ಅಂಬೇಡ್ಕರ್ ವೃತ್ತ ನಿರ್ಮಾಣ ವಿಳಂಬ| 15 ದಿನಗಳಲ್ಲಿ ಪ್ರಕ್ರಿಯೆ ಆರಂಭಿಸದಿದ್ದರೆ ಸರಣಿ ಹೋರಾಟ: ದಲಿತ ಸಂಘಟನೆಗಳ ಸಮನ್ವಯ ಸಮಿತಿ

ವಾರ್ತಾಭಾರತಿವಾರ್ತಾಭಾರತಿ24 July 2024 6:50 PM IST
share
ಅಂಬೇಡ್ಕರ್ ವೃತ್ತ ನಿರ್ಮಾಣ ವಿಳಂಬ| 15 ದಿನಗಳಲ್ಲಿ ಪ್ರಕ್ರಿಯೆ ಆರಂಭಿಸದಿದ್ದರೆ ಸರಣಿ ಹೋರಾಟ: ದಲಿತ ಸಂಘಟನೆಗಳ ಸಮನ್ವಯ ಸಮಿತಿ

ಮಂಗಳೂರು: ನಗರದ ಜ್ಯೋತಿಯಲ್ಲಿ ಅಂಬೇಡ್ಕರ್ ವೃತ್ತ ನಿರ್ಮಾಣದ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದು, 15 ದಿನಗಳಲ್ಲಿ ಪ್ರಕ್ರಿಯೆ ಆರಂಭಿಸದಿದ್ದರೆ ಸರಣಿ ಹೋರಾಟ ನಡೆಸುವುದಾಗಿ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಎಚ್ಚರಿಕೆ ನೀಡಿದೆ.

ನಗರದಲ್ಲಿ ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಮಿತಿಯ ಪ್ರಮುಖರಾದ ಎಂ. ದೇವದಾಸ್, ಜನಪ್ರತಿನಿಧಿ ಗಳು ಹಾಗೂ ಅಧಿಕಾರಿಗಳ ಈ ವಿಳಂಬ ಧೋರಣೆ ಸಂವಿಧಾನ ಶಿಲ್ಪಿ, ಡಾ. ಬಿ.ಆರ್. ಅಂಬೇಡ್ಕರ್‌ರವರಿಗೆ ಮಾಡುತ್ತಿರುವ ಅವಮಾನ ಎಂದರು.

1994ರಲ್ಲಿ ಅಂದಿನ ಜಿಲ್ಲಾಧಿಕಾರಿ ಭರತ್‌ಲಾಲಾ ಮೀನಾರವರ ಮುತುವರ್ಜಿಯಲ್ಲಿ ಅಂಬೇಡ್ಕರ್ ವೃತ್ತ ನಿರ್ಮಾಣಕ್ಕೆ ತೀರ್ಮಾನ ಆಗಿತ್ತು. ಬಳಿಕ ಹಲವು ಕಾರಣಗಳಿಂದ ನೆನೆಗುದಿಗೆ ಬಿದ್ದಿದ್ದ ಈ ವೃತ್ತ ನಿರ್ಮಾಣ ಕಾರ್ಯ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಾಣವಾಗಲಿದೆ ಎಂದು ಹೇಳಿ ನೀಲನಕ್ಷೆ ತಯಾರಿಸಿ, ಅನುದಾನ ದೊರಕಿ ಅಂಬೇಡ್ಕರ್‌ರವರ ಪುತ್ಥಳಿ ಜತೆ ವೃತ್ತ ನಿರ್ಮಾಣದ ಕಾಮಗಾರಿ ನಡೆಸುವ ಪ್ರಕ್ರಿಯೆಗೆ ಒಂದು ವರ್ಷ ಕಳೆದರೂ ಚಾಲನೆ ನೀಡಲಾಗಿಲ್ಲ ನಗರದ ವಿವಿಧ ಕಡೆ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಖುದ್ದು ಶಾಸಕರೇ ಆಸಕ್ತಿ ವಹಿಸಿ ಹಲವು ಹೊಸ ವೃತ್ತಗಳನ್ನು ಅಲ್ಪಾವಧಿ ಯಲ್ಲಿ ನಿರ್ಮಿಸಿದ್ದಾರೆ. ಮಂಜೇಶ್ವರ ಗೋವಿಂದ ಪೈ, ನಾರಾಯಣಗುರು, ಕೋಟಿ ಚನ್ನಯ್ಯ, ಸರ್ವಜ್ಞ ಮೊದಲಾದ ಹೆಸರಿನ ವೃತ್ತಗಳು ಯಾವುದೇ ತಕರಾರು ಇಲ್ಲದೆ ಕೆಲ ಸಮಯದಲ್ಲೇ ನಿರ್ಮಾಣವಾಗಿದೆ. ಆದರೆ ಅಂಬೇಡ್ಕರ್ ವೃತ್ತ ನಿರ್ಮಾಣದ ಬಗ್ಗೆ ಅವರಿಗೆ ಆಸಕ್ತಿ ಇದ್ದ ಹಾಗಿಲ್ಲ ಎಂದು ದೇವದಾಸ್ ಆಕ್ಷೇಪಿಸಿದರು.

ಕಳೆದ ಹಲವು ವರ್ಷಗಳಿಂದ ವೃತ್ತ ನಿರ್ಮಾಣದ ಕುರಿತಂತೆ ದಲಿತ ನಾಯಕರಿಗೆ ಸುಳ್ಳು ಭರವಸೆ ಹಾಗೂ ಸುಳ್ಳು ಮಾಹಿತಿಗಳನು ನೀಡಲಾಗುತ್ತಿದೆ. ಎರಡು ಅವಧಿಗೆ ಶಾಸಕರಾಗಿ ಆಯ್ಕೆಯಾದ ಶಾಸಕ ವೇದವ್ಯಾಸ ಕಾಮತ್ ಈ ಬಗ್ಗೆ ಮಾತನಾಡುತ್ತಿಲ್ಲ. ನಗರ ಪಾಲಿಕೆ ಕೂಡಾ ನಿರ್ಲಕ್ಷ್ಯ ವಹಿಸಿದ್ದು, ಸರಣಿ ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದು ಅವರು ಹೇಳಿದರು.

ಕಳೆದ 30 ವರ್ಷಗಳಿಂದ ಜಿಲ್ಲೆ ವಿವಿಧ ದಲಿತ ಸಂಘಟನೆಗಳು ಜಿಲ್ಲಾ ಮಟ್ಟದ, ನಗರ ಮಟ್ಟದ ಸಭೆಗಳಲ್ಲಿ ಈ ಬಗ್ಗೆ ಒತ್ತಾಯಿಸುತ್ತಾ ಬಂದಿದೆ. ಹಿಂದಿನ ಮೇಯರ್ ಪ್ರೇಮಾನಂದ ಶೆಟ್ಟಿಯವರ ಜತೆಗಿನ ಮಾತುಕತೆಯ ಸಂದರ್ಭ ಅವರು ಆಸಕ್ತಿ ವಹಿಸಿ ವೃತ್ತದ ಜತೆಗೆ ಪಾರ್ಶ್ವದಲ್ಲಿರುವ ಖಾಲಿ ಜಾಗದಲ್ಲಿ ಗೋಲಾಕಾರದಲ್ಲಿ ಅಂಬೇಡ್ಕರ್‌ರವರ ಪುತ್ಥಳಿ, ಅಶೋಕ ಸ್ತಂಭ ನಿರ್ಮಾಣಕ್ಕೆ ನಿರ್ಣಯಿಸಲಾಗಿತ್ತು. ಆದರೆ ಇದೀಗ ಕೆಲ ಸಭೆಗಳಲ್ಲಿ ನಮ್ಮ ಸಂಘಟನೆಗಳ ನಡುವೆ ಒಗ್ಗಟ್ಟು ಇಲ್ಲ ಎಂಬ ತಪ್ಪು ಮಾಹಿತಿಗಳನ್ನು ಕೆಲ ಅಧಿಕಾರಿಗಳು ನೀಡುವ ಮೂಲಕ ದಾರಿ ತಪ್ಪಿಸುತ್ತಿದ್ದಾರೆ. ಇದೀಗ ಹೋರಾಟ ಒಂದೇ ನಮ್ಮ ಮುಂದಿರುವ ದಾರಿ ಎಂದು ಮುಖಂಡರಾದ ಅಶೋಕ್ ಕೊಂಚಾಡಿ, ಜಿನ್ನಪ್ಪ ಬಂಗೇರ, ಎಸ್.ಪಿ. ಆನಂದ ಹೇಳಿದರು.

ಗೋಷ್ಟಿಯಲ್ಲಿ ರಘು ಎಕ್ಕಾರು, ಸುಧಾಕರ ಬೋಳಾರ್, ಗಣೇಶ್ ಸೂಟರ್‌ಪೇಟೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X