Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಭಾಲ್ಕಿ | ವಿಘ್ನವಿಲ್ಲದೆ ಗಣೇಶೋತ್ಸವ...

ಭಾಲ್ಕಿ | ವಿಘ್ನವಿಲ್ಲದೆ ಗಣೇಶೋತ್ಸವ ಆಚರಿಸಿ: ಡಿವೈಎಸ್ಪಿ ಬಲ್ಲಪ್ಪ ನಂದಗಾವೆ

ವಾರ್ತಾಭಾರತಿವಾರ್ತಾಭಾರತಿ10 Sept 2026 8:04 PM IST
share
ಭಾಲ್ಕಿ | ವಿಘ್ನವಿಲ್ಲದೆ ಗಣೇಶೋತ್ಸವ ಆಚರಿಸಿ: ಡಿವೈಎಸ್ಪಿ ಬಲ್ಲಪ್ಪ ನಂದಗಾವೆ

ಭಾಲ್ಕಿ: ವಿನಾಯಕನ ಹಬ್ಬವನ್ನು ಶಾಂತಿ, ಸೌಹಾರ್ದತೆ ಮತ್ತು ಯಾವುದೇ ವಿಘ್ನವಿಲ್ಲದೆ ಆಚರಿಸಬೇಕು ಎಂದು ಭಾಲ್ಕಿ ಡಿವೈಎಸ್ಪಿ ಬಲ್ಲಪ್ಪ ನಂದಗಾವೆ ಹೇಳಿದರು.

ಪಟ್ಟಣದ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಗುರುವಾರ ಮೆಹಕರ್‌, ಧನ್ನೂರ್ (ಹೆಚ್) ಹಾಗೂ ಖಟಕಚಿಂಚೋಳಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳ ಗಣೇಶೋತ್ಸವ ಸಮಿತಿಗಳ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗಣೇಶನನ್ನು ವಿಘ್ನವಿನಾಯಕ ಎಂದು ಕರೆಯಲಾಗುತ್ತದೆ. ಆದ್ದರಿಂದ ಗಣೇಶೋತ್ಸವದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ಹಬ್ಬವನ್ನು ಸಂಭ್ರಮದಿಂದ ಆಚರಿಸಬೇಕು. ಗಣೇಶೋತ್ಸವವು ಸ್ವಾತಂತ್ರ್ಯ ಚಳವಳಿಯ ಭಾಗವಾಗಿ ಆರಂಭಗೊಂಡಿದ್ದು, ಎಲ್ಲರಿಗೂ ಹಬ್ಬವನ್ನು ಆಚರಿಸುವ ಹಕ್ಕಿದೆ. ಉತ್ಸವವನ್ನು ಉತ್ತಮ ರೀತಿಯಲ್ಲಿ ನಡೆಸಲು ಎಲ್ಲಾ ಇಲಾಖೆಗಳು ಸಹಕಾರ ನೀಡಲಿವೆ ಎಂದು ಹೇಳಿದರು.

ಅಗ್ನಿಶಾಮಕ ಠಾಣೆ ಅಧಿಕಾರಿ ದತ್ತಾತ್ರಿ ಮಾತನಾಡಿ, ಎಲ್ಲ ಗಣೇಶ ಪೆಂಡಾಲ್‌ಗಳಲ್ಲಿ ಅಗ್ನಿ ನಿರೋಧಕ ವ್ಯವಸ್ಥೆ ಕಡ್ಡಾಯವಾಗಿ ಅಳವಡಿಸಬೇಕು. ಅಗ್ನಿ ಅವಘಡಗಳು ಹೆಚ್ಚಾಗಿ ನಿರ್ಲಕ್ಷ್ಯದಿಂದಲೇ ಸಂಭವಿಸುವುದರಿಂದ ಸಮಿತಿಯವರು ಎಚ್ಚರಿಕೆಯಿಂದ ಹಬ್ಬ ಆಚರಿಸಬೇಕು ಎಂದು ಸಲಹೆ ನೀಡಿದರು.

ತಹಶೀಲ ಕಚೇರಿಯ ಶಿರಸ್ತೆದಾರ ಗೋಪಾಲ್ ಹಿಪ್ಪರಗಿ ಮಾತನಾಡಿ, ಪ್ರತಿ ಗಣೇಶೋತ್ಸವ ಸಮಿತಿಯೂ ತಮ್ಮ ಪೆಂಡಾಲ್‌ಗೆ ಸಂಬಂಧಿಸಿದಂತೆ ಶಾಂತಿ ಸಭೆ ನಡೆಸಿ ಜವಾಬ್ದಾರಿಗಳನ್ನು ಹಂಚಿಕೊಳ್ಳಬೇಕು. ಯಾವುದೇ ಅವಘಡ ಅಥವಾ ವಿವಾದ ಸಂಭವಿಸಿದರೆ ಕಾನೂನನ್ನು ಕೈಗೆತ್ತಿಕೊಳ್ಳದೆ ಪೊಲೀಸರ ಸಹಾಯ ಪಡೆಯಬೇಕು ಎಂದು ತಿಳಿಸಿದರು.

ಸಭೆಯಲ್ಲಿ ತಾಲೂಕು ಪಂಚಾಯತ್‌ ಸಹಾಯಕ ನಿರ್ದೇಶಕ ಸೂರ್ಯಕಾಂತ್‌ ಬಿರಾದಾರ್‌, ಗ್ರಾಮೀಣ ವೃತ್ತ ನಿರೀಕ್ಷಕ ಹನುಮರೆಡ್ಡೆಪ್ಪ, ಪಿಎಸ್‌ಐ ಅಶೋಕ್‌ ಪಾಟೀಲ್‌, ಮೆಹಕರ್‌ ಪಿಎಸ್‌ಐ ಸುದರ್ಶನ್‌ ರೆಡ್ಡಿ, ಖಟಕಚಿಂಚೋಳಿ ಪಿಎಸ್‌ಐ ವಿಶ್ವಾರಾಧ್ಯ ಘಾಣೂರ್‌, ಧನ್ನೂರ್‌(ಹೆಚ್) ಪಿಎಸ್‌ಐ ರಾಜಕುಮಾರ್‌ ಜಾಮಗೊಂಡ, ಜೆಸ್ಕಾಂನ ಸತೀಶಕುಮಾರ್‌ ಹಾಗೂ ಪುರಸಭೆ ಉಪಾಧ್ಯಕ್ಷ ವಿಜಯಕುಮಾರ್‌ ರಾಜಭವನ ಉಪಸ್ಥಿತರಿದ್ದರು. ಸಿಪಿಐ ಹನುಮರೆಡ್ಡಿ ಸ್ವಾಗತಿಸಿದರು. ಸಿ.ಜಿ.ಬಿರಾದಾರ್‌ ನಿರೂಪಿಸಿದರು. ಮಹೇಶ್ ವಂದಿಸಿದರು.

Tags

Bhalki
share
ವಾರ್ತಾಭಾರತಿ
ವಾರ್ತಾಭಾರತಿ
Next Story
X