Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಒಳಮೀಸಲಾತಿ ಜಾರಿ...

ಬೀದರ್ | ಒಳಮೀಸಲಾತಿ ಜಾರಿ ಮಾಡದಿದ್ದಲ್ಲಿ ಮುಂದೆ ಆಗುವ ಅನಾಹುತಗಳಿಗೆ ಸರ್ಕಾರವೇ ನೇರ ಹೊಣೆ : ಭಾಸ್ಕರ್ ಪ್ರಸಾದ್

ವಾರ್ತಾಭಾರತಿವಾರ್ತಾಭಾರತಿ26 March 2025 9:52 PM IST
share
Photo of Press meet

ಬೀದರ್ : ಏ.5 ರಂದು ಬಾಬು ಜಗಜೀವನರಾಮ್ ಅವರ ಜಯಂತಿ ಉತ್ಸವದ ಒಳಗೆ ಸರ್ಕಾರ ಒಳಮೀಸಲಾತಿ ಜಾರಿ ಮಾಡದಿದ್ದಲ್ಲಿ ವಿಧಾನಸೌಧದ ಮೆಟ್ಟಿಲು ಮೇಲೆ ನಮ್ಮ ಹೆಣಗಳು ನೋಡುವಿರಿ. ಮುಂದೆ ಆಗುವ ಅನಾಹುತಗಳಿಗೆ ಸರ್ಕಾರವೇ ನೇರ ಹೊಣೆಯಾಗಲಿದೆ ಎಂದು ಮಾದಿಗ ಹೋರಾಟ ಸಮನ್ವಯ ಸಮಿತಿಯ ರಾಜ್ಯ ಪ್ರಮುಖ ಭಾಸ್ಕರ್ ಪ್ರಸಾದ್ ಎಚ್ಚರಿಸಿದರು.

ಇಂದು ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಒಳಮೀಸಲಾತಿ ಜಾರಿ ಮಾಡುವುದಕ್ಕೆ ಮುಖ್ಯಮಂತ್ರಿಗಳು ಈಗಾಗಲೇ ಒಂದು ವಾರ ಗಡುವು ಕೇಳಿದ್ದಾರೆ. ಆದರೆ ನಾವು ಸರ್ಕಾರಕ್ಕೆ 12 ದಿವಸ ಸಮಯಾವಕಾಶ ನೀಡುತ್ತಿದ್ದೇವೆ. ಅಷ್ಟರೊಳಗೆ ಒಳಮೀಸಲಾತಿ ಜಾರಿಯಾಗಬೇಕು ಎಂದು ಆಗ್ರಹ ಮಾಡಿದರು.

ಪ್ರೊ. ಬಿ.ಕೃಷ್ಣಪ್ಪ ಅವರ ಸಮಾಧಿಯಿಂದ ಆರಂಭವಾದ ನಮ್ಮ ಪಾದಯಾತ್ರೆ ಬೆಂಗಳೂರಿನವರೆಗೆ ಸಾಗಿದೆ. ಮುನಿಯಪ್ಪ ಅವರು ಮೂರು ತಿಂಗಳ ಕಾಲಾವಕಾಶ ಕೇಳಿದ್ದರು. ಆದರೆ ಅದನ್ನು ನಾವು ಒಪ್ಪಲಿಲ್ಲ. ಹಾಗಾಗಿ ಸರ್ಕಾರ ಇವಾಗ ಒಂದು ವಾರದ ಗಡುವು ಕೇಳಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಒಂದೇ ದಿನದಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮ ಮಾಡಲು ಹೊರಟಿದ್ದರು. ಮುಡಾ ಹಗರಣದಲ್ಲಿ ತಮ್ಮ ಮೈಮೇಲೆ ಆರೋಪ ಬಂದಿದೆ ಎಂದು ತರಾತುರಿಯಲ್ಲಿ ರಾತ್ರೋ ರಾತ್ರಿ 12 ನಿವೇಶನಗಳು ಸರ್ಕಾರಕ್ಕೆ ಹಿಂದಿರುಗಿಸಿದರು. ಆದರೆ ಒಳಮೀಸಲಾತಿ ಜಾರಿ ಮಾಡಲು ಇವರಿಗೇಕೆ ಕಾಲಾವಕಾಶಬೇಕು ಎಂದು ಪ್ರಶ್ನಿಸಿದರು.

ಈಗಾಗಲೇ ನಾಗಮೋಹನದಾಸ್ ಅವರ ಆಯೋಗ ಎರಡು ತಿಂಗಳು ವಿಳಂಬ ಮಾಡಿದೆ. ಸದಾಶಿವ ಆಯೋಗದ ವರದಿ, ಮಾಧುಸ್ವಾಮಿ ವರದಿ ಹಾಗೂ ಕಾಂತರಾಜ ವರದಿ ಪ್ರಕಾರ ಆದರೂ ಒಳಮೀಸಲಾತಿ ಜಾರಿ ಮಾಡಿ. ಇದೂ ಸಹ ಸಾಧ್ಯವಿಲ್ಲವೆಂದರೆ ಹೊಸ ಜಾತಿಗಳ ದತ್ತಾಂಶ ಕ್ರೂಢಿಕರಿಸಿ ಒಳಮೀಸಲಾತಿ ಜಾರಿ ಮಾಡಿ. ಆದರೆ ಕುಂಟು ನೆಪ ಹೇಳಿ ಕಾಲಾಹರಣ ಮಾಡಿದರೆ ಸರ್ಕಾರ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ದೇವಿದಾಸ್ ತುಮಕುಂಟೆ, ರಮೇಶ್ ಕಟ್ಟಿತೂಗಾಂವ್, ಕಲ್ಲಪ್ಪ ವೈದ್ಯ, ಸ್ವಾಮಿದಾಸ್ ಕೆಂಪೆನೋರ್, ಬಂಟಿ ದರ್ಬಾರೆ, ಪ್ರದೀಪ್ ಹೆಗಡೆ, ಪೀಠರ್ ಶ್ರೀಮಂಡಲ್, ಶಿವರಾಜ್ ನೆಲವಾಳಕರ್, ಡಾ. ಬಸವರಾಜ್ ಔರಾದೆ, ರಾಜಕುಮಾರ್ ಹಳ್ಳಿಖೇಡ, ಶಿವರಾಜ ಮುಗನೂರೆ ಹಾಗೂ ದಾವೀದ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X