Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಪ್ರತಿಷ್ಠಿತ ಶಾಲೆಗೆ ಆಯ್ಕೆಯಾದ...

ಬೀದರ್ | ಪ್ರತಿಷ್ಠಿತ ಶಾಲೆಗೆ ಆಯ್ಕೆಯಾದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಲೋಪ : ತನಿಖೆಗೆ ಪವನಗೊಂಡ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ8 Sept 2025 5:18 PM IST
share
ಬೀದರ್ | ಪ್ರತಿಷ್ಠಿತ ಶಾಲೆಗೆ ಆಯ್ಕೆಯಾದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಲೋಪ : ತನಿಖೆಗೆ ಪವನಗೊಂಡ ಒತ್ತಾಯ

ಬೀದರ್ : 2025-26 ನೇ ಸಾಲಿನಲ್ಲಿ ಪ್ರತಿಷ್ಠಿತ ಶಾಲೆಗಳಿಗೆ ಪರಿಶಿಷ್ಟ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ದಾಖಲಿಸುವ ಕಾರ್ಯಕ್ರಮದಡಿ ಅರ್ಹತಾ ಪರೀಕ್ಷೆ ಮೂಲಕ ಆಯ್ಕೆಗೊಂಡ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದ್ದು, ಸೂಕ್ತ ತನಿಖೆ ನಡೆಸಿ ಅಕ್ರಮ ಎಸಗಿರುವ ಅಧಿಕಾರಿಗಳನ್ನು ಅಮಾನತು ಮಾಡಬೇಕು ಎಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಜಿಲ್ಲಾ ಉಪಾಧ್ಯಕ್ಷ ಪವನಗೊಂಡ ಒತ್ತಾಯಿಸಿದರು.

ಇಂದು ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಈ ವರ್ಷ ಪರಿಶಿಷ್ಟ ವರ್ಗಗಳ ಪ್ರತಿಭಾವಂತ 5ನೇ ತರಗತಿ ಪಾಸಾದ ವಿದ್ಯಾರ್ಥಿಗಳಿಗೆ 10ನೇ ತರಗತಿ ವರೆಗೆ ಪ್ರತಿಷ್ಠಿತ ಶಾಲೆಗಳಲ್ಲಿ ಶಿಕ್ಷಣ ನೀಡುವುದಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಒಟ್ಟು 35 ವಿದ್ಯಾರ್ಥಿಗಳಿಗೆ ಆಯ್ಕೆ ಮಾಡಲಾಗುತ್ತದೆ. ಆದರೆ ಆಯ್ಕೆ ಪಟ್ಟಿಯಲ್ಲಿ ಲೋಪದೋಷ ಕಂಡುಬಂದಿದ್ದು, ಅಕ್ರಮ ನಡೆದಿರುವ ಶಂಕೆ ಇದೆ ಎಂದು ಅವರು ಆರೋಪಿಸಿದರು.

ಪರೀಕ್ಷೆಯ ನಂತರ ಜೂ.10 ರಂದು ಆಯ್ಕೆ ಪಟ್ಟಿಯ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಜೂ.18 ರಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಎಲ್ಲ ಪೋಷಕರಿಗೆ ಕರೆ ಮಾಡುವ ಮೂಲಕ ನಿಮ್ಮ ಮಕ್ಕಳು ಪರೀಕ್ಷೆಯಲ್ಲಿ ಉತ್ತಿರ್ಣರಾಗಿದ್ದು, ದಾಖಲೆಗಳ ಪರಿಶೀಲನೆ ಮಾಡುವುದಕ್ಕಾಗಿ ದಾಖಲೆಗಳ ಸಹಿತ ನಿಮ್ಮ ಮಕ್ಕಳನ್ನು ಕರೆದುಕೊಂಡು ಬರಬೇಕು ಎಂದು ತಿಳಿಸಿದ್ದಾರೆ. ಜೂ. 19 ರಂದು ಎಲ್ಲ ಪೋಷಕರು ದಾಖಲೆಗಳೊಂದಿಗೆ ಇಲಾಖೆಗೆ ತೆರಳಿ ದಾಖಲೆಗಳ ಪರಿಶೀಲನೆ ಮಾಡಿಕೊಂಡಿದ್ದಾರೆ. ನಂತರ ನಿಮ್ಮ ಮಕ್ಕಳನ್ನು ಚನ್ನಬಸವೇಶ್ವರ ಗುರುಕುಲ ವಸತಿ ಸಹಿತ ಶಾಲೆಯಲ್ಲಿ ಪ್ರವೇಶ ಪಡೆಯಲು ತಿಳಿಸಿದ್ದಾರೆ. ಪೋಷಕರು ಚನ್ನಬಸವೇಶ್ವರ ಗುರುಕುಲ ವಸತಿ ಸಹಿತ ಶಾಲೆಯಲ್ಲಿ ಪ್ರವೇಶ ಕೂಡ ಪಡೆದಿರುತ್ತಾರೆ. ಆದರೆ ಈಗ ಅದರಲ್ಲಿನ ಸುಮಾರು 19 ವಿದ್ಯಾರ್ಥಿಗಳ ಹೆಸರು ಆಯ್ಕೆ ಪಟ್ಟಿಯಿಂದ ಕೈ ಬಿಟ್ಟು ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಆರೋಪ ಮಾಡಿದರು.

ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಬಳಿರಾಮ್ ಅವರು ಬೇರೆ ವಿದ್ಯಾರ್ಥಿ ಪೋಷಕರಿಂದ ಹಣ ಪಡೆದುಕೊಂಡು ಆಯ್ಕೆ ಪಟ್ಟಿಯಲ್ಲಿ ಸೇರಿಸಿದ್ದು, ಎದ್ದು ಕಾಣುತ್ತಿದೆ. ಹಾಗಾಗಿ ತಕ್ಷಣವೇ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಬಳಿರಾಮ್ ಹಾಗೂ ಡಯಟ್ ಕಾಲೇಜಿನ ಅಧಿಕಾರಿಗಳ ವಿರುದ್ಧ ಸೂಕ್ತ ತನಿಖೆ ನಡೆಸಿ ಅವರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷ ಪ್ರದೀಪ್ ಬೇಂದ್ರೆ, ಪೋಷಕರಾದ ಕನಕದಾಸ, ಸುಧಾಕರ್, ಬಸವರಾಜ್, ಸುವರ್ಣಾ, ರವಿ, ಕಲಾವತಿ ಹಾಗೂ ಪ್ರೀತಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X