ಬೀದರ್ | ಪತ್ರಿಕಾ ಭವನ ನಿರ್ವಹಣೆ ಜವಾಬ್ದಾರಿ ಪತ್ರಕರ್ತರ ಸಂಘಕ್ಕೆ ನೀಡುವಂತೆ ಮನವಿ

ಹುಲಸೂರ್ : ಜಿಲ್ಲಾ ಪತ್ರಿಕಾ ಭವನದ ನಿರ್ವಹಣೆ ಜವಾಬ್ದಾರಿಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ವಹಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಹುಲಸೂರು ತಾಲೂಕು ಘಟಕದ ವತಿಯಿಂದ ಮನವಿ ಸಲ್ಲಿಸಲಾಯಿತು.
ತಹಶೀಲ್ದಾರ್ ಅವರ ಮೂಲಕ ಜಿಲ್ಲಾಧಿಕಾರಿಗೆ ಸೋಮವಾರ ಸಲ್ಲಿಸಿದ ಮನವಿ ಪತ್ರದಲ್ಲಿ, ಜಿಲ್ಲಾ ಪತ್ರಿಕಾ ಭವನವು ಪತ್ರಕರ್ತರ ವೃತ್ತಿಪರ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಕಾರ್ಯನಿರ್ವಹಿಸಬೇಕಿದ್ದು, ಅದರ ಸಮರ್ಪಕ ನಿರ್ವಹಣೆಗಾಗಿ ಪತ್ರಕರ್ತರ ಸಂಘಕ್ಕೆ ಜವಾಬ್ದಾರಿ ನೀಡುವುದು ಸೂಕ್ತ ಎಂದು ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ಅಧ್ಯಕ್ಷ ರಾಜಕುಮಾರ್ ಹೊನ್ನಾಡೆ, ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್ ಮೆಂಟೇ, ಮಹೇಶ್ ಹುಲಸೂರಕರ್, ಬಸವಕುಮಾರ್ ಕೌಟೆ, ವೀರಶೆಟ್ಟಿ ಕರಕಲ್ಲೆ, ದತ್ತಾತ್ರೇಯ ಸಾಬಣೆ ಹಾಗೂ ದತ್ತಾತ್ರೇಯ ಸ್ವಾಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
Next Story




