Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಅ.10 ರಿಂದ 24ನೇ ಕಲ್ಯಾಣ ಪರ್ವ...

ಬೀದರ್ | ಅ.10 ರಿಂದ 24ನೇ ಕಲ್ಯಾಣ ಪರ್ವ ಕಾರ್ಯಕ್ರಮ : ಬಸವರಾಜ್ ಬುಳ್ಳಾ

ವಾರ್ತಾಭಾರತಿವಾರ್ತಾಭಾರತಿ8 Oct 2025 7:16 PM IST
share
ಬೀದರ್ |  ಅ.10 ರಿಂದ 24ನೇ ಕಲ್ಯಾಣ ಪರ್ವ ಕಾರ್ಯಕ್ರಮ : ಬಸವರಾಜ್ ಬುಳ್ಳಾ

ಬೀದರ್ : ಪ್ರತಿ ವರ್ಷದಂತೆ ಈ ವರ್ಷವು ಕೂಡ ಅ.10, 11 ಮತ್ತು 12 ರಂದು ಬಸವಕಲ್ಯಾಣದಲ್ಲಿ 24ನೇ ಕಲ್ಯಾಣ ಪರ್ವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಲ್ಯಾಣ ಪರ್ವದ ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಬಸವರಾಜ್ ಬುಳ್ಳಾ ಅವರು ತಿಳಿಸಿದರು.

ಬುಧವಾರ ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕಲ್ಯಾಣ ಪರ್ವ ಸುಮಾರು 24 ವರ್ಷಗಳಿಂದ ನಡೆದುಕೊಂಡು ಬಂದಿದೆ. ಪರ್ವ ಎಂದರೆ ಕಾಲ ಎಂದರ್ಥ. ಈ ಜಗತ್ತಲ್ಲಿ ಕೊಲೆ, ಸುಲಿಗೆ, ಯುದ್ಧಗಳು ನಡೆಯುತ್ತಿವೆ. ಇದು ಮಾನವ ಕುಲಕ್ಕೆ ಮಾರಕವಾಗಿದೆ. ಆದ್ದರಿಂದ ವಿಶ್ವದಲ್ಲಿ ಶಾಂತಿ ಕಾಪಾಡುವುದು ಇದರ ಉದ್ದೇಶವಾಗಿದೆ. ಹಾಗೆಯೇ 12ನೇ ಶತಮಾನದ ಶರಣರ ಜಾತಿ, ವರ್ಣ ಹಾಗೂ ಲಿಂಗ ರಹಿತ ಸಮಸಮಾಜ ನಿರ್ಮಾಣ ಮಾಡುವುದೇ ಈ ಕಲ್ಯಾಣ ಪರ್ವದ ಉದ್ದೇಶವಾಗಿದೆ ಎಂದರು.

ಅ.10ರಂದು ಉದ್ಘಾಟನಾ ಸಮಾರಂಭ, ಮಹಿಳಾ ಗೋಷ್ಠಿ ಹಾಗೂ ರಾತ್ರಿ 8:30 ಗಂಟೆಗೆ ಮಹಾ ಕ್ರಾಂತಿ ನಾಟಕ ನಡೆಯಲಿದೆ. ಅ.11 ರಂದು ಧರ್ಮ ಚಿಂತನ ಗೋಷ್ಠಿ, ರಾಷ್ಟ್ರೀಯ ಬಸವದಳ ಸಮಾವೇಶ ಹಾಗೂ ಸಮಾಜ ಚಿಂತನ ಗೋಷ್ಠಿ ಜರುಗಲಿದೆ. ಹಾಗೆಯೇ ಅ.12 ರಂದು ಬಸವಣ್ಣನವರ ಭಾವಚಿತ್ರ ಹಾಗೂ ವಚನ ಸಾಹಿತ್ಯದ ಭವ್ಯ ಮೆರವಣಿಗೆ ನಡೆಯಲಿದೆ ಎಂದು ಅವರು ತಿಳಿಸಿದರು.

ಅ. 11 ರಂದು ಮುಂಜಾನೆ 10:30 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಬೀದರ್ ನ ರೋಟರಿ ಕ್ಲಬ್ ನ್ಯೂ ಸಂಚುರಿ ವತಿಯಿಂದ ಉಚಿತ ಹೃದಯ ರೋಗ ತಪಾಸಣೆ ಶಿಬಿರ ಹಾಗೂ ಬೀದರ್ ನ ಎಸ್. ಬಿ. ಡೆಂಟಲ್ ಕಾಲೇಜು ವತಿಯಿಂದ ಉಚಿತ ದಂತರೋಗ ತಪಾಸಣೆ ಶಿಬಿರ ಏರ್ಪಡಿಸಲಾಗಿದೆ ಎಂದು ಹೇಳಿದರು.

ಅ.11 ರಂದು ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಶರಣ ಸಮಾಜ ಸೇವಾರತ್ನ ಪ್ರಶಸ್ತಿಗೆ ಡಾ. ಭೀಮಣ್ಣ ಖಂಡ್ರೆ ಹಾಗೂ ಮಲ್ಲಿಕಾರ್ಜುನ್ ಗುಂಗೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಲಿಂಗಾಯತ ಮತ್ತು ವೀರಶೈವ ಲಿಂಗಾಯತ ಎನ್ನುವುದರಲ್ಲಿ ಗೊಂದಲಗಳಿಗೆ ಪ್ರತಿಕ್ರಿಯಿಸಿದ ಅವರು, ಯಾರು ಏನಾದರೂ ಹೇಳಲಿ ವೀರಶೈವ ಎನ್ನುವುದು ಲಿಂಗಾಯತ ಧರ್ಮದ ಒಂದು ಪಂಗಡವಾಗಿದೆ. ಅದು ಧರ್ಮ ಆಗುವುದಕ್ಕೆ ಸಾಧ್ಯವಿಲ್ಲ ಎಂದು ಪ್ರತಿಕ್ರಿಯಿಸಿದರು.

ಕಾರ್ಯಕ್ರಮದಲ್ಲಿ ಎಲ್ಲ ರಾಜಕೀಯ ಮುಖಂಡರನ್ನು, ಮಠಾಧೀಶರನ್ನು ಆಹ್ವಾನಿಸಲಾಗಿದೆ. ಹಾಗಾಗಿ ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಿದ್ದರಾಮೇಶ್ವರ್ ಸ್ವಾಮಿ, ಸ್ವಾಗತ ಸಮಿತಿಯ ಅಧ್ಯಕ್ಷ ಕಂಟೆಪ್ಪಾ ಗಂದಿಗುಡಿ, ಪ್ರಧಾನ ಕಾರ್ಯದರ್ಶಿ ಶಿವರಾಜ್ ನರಶೆಟ್ಟಿ, ರಾಷ್ಟ್ರೀಯ ಬಸವ ದಳದ ಜಿಲ್ಲಾಧ್ಯಕ್ಷ ಸೋಮಶೇಖರ್ ಪಾಟೀಲ್ ಗಾದಗಿ, ಕುಶಾಲರಾವ್ ಪಾಟೀಲ್ ಗಾದಗಿ, ಸಂಜುಕುಮಾರ್, ವಿಲಾಸ್ ಪಾಟೀಲ್, ಯೋಗೇಶ್ ಸಿರಿಗೆರೆ, ವೀರಶೆಟ್ಟಿ ಪಾಟೀಲ್ ಹಾಗೂ ಪಂಚಾಕ್ಷರಿ ಸೇರಿದಂತೆ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X