Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ರೈತರ ವಿವಿಧ ಬೇಡಿಕೆಗಳನ್ನು...

ಬೀದರ್ | ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಅಖಿಲ ಭಾರತ ಕಿಸಾನ್ ಸಭಾ ಮನವಿ

ವಾರ್ತಾಭಾರತಿವಾರ್ತಾಭಾರತಿ22 Aug 2025 7:08 PM IST
share
ಬೀದರ್ | ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಅಖಿಲ ಭಾರತ ಕಿಸಾನ್ ಸಭಾ ಮನವಿ

ಬೀದರ್ : ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಮತ್ತು ಕೃಷಿ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸಲು ಸರಕಾರ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಅಖಿಲ ಭಾರತ ಕಿಸಾನ್ ಸಭಾ ಜಿಲ್ಲಾ ಮಂಡಳಿಯು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದೆ.

ಮೇ ತಿಂಗಳಿನಿಂದ ಜಿಲ್ಲೆಯಲ್ಲಿ ಮಳೆ ಬೀಳುತ್ತಿದ್ದು ಅತಿವೃಷ್ಠಿಯಿಂದ ಉದ್ದು, ಹೆಸರು ಸೇರಿದಂತೆ ಹಲವು ಬೆಳೆಗಳು ಹಾನಿಗೊಳಗಾಗಿವೆ. ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ತಕ್ಷಣ ಬೆಳೆ ನಷ್ಟ ಪರಿಹಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ರೈತರು ಸಾಲದಲ್ಲಿ ಬದುಕಿ ಸಾಲದಲ್ಲೇ ಪ್ರಾಣ ಬಿಡುವ ದುಸ್ಥಿತಿಯನ್ನು ತಡೆಯಬೇಕು. ಕೆಲವು ಬ್ಯಾಂಕುಗಳು ರೈತರ ಸಾಲದ ಕುರಿತು ಕೋರ್ಟ್ ಗಳಲ್ಲಿ ದಾವೆ ಹೂಡಿ ರೈತರಿಗೆ ಮಾನಸಿಕ ಕಿರುಕುಳ ನೀಡುತ್ತಿರುವುದನ್ನು ನಿಲ್ಲಿಸಬೇಕು. ರೈತರು ಮತ್ತು ಕೃಷಿ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ರೈತ, ಕೃಷಿಕರ ಕಲ್ಯಾಣ ಮಂಡಳಿ ರಚಿಸಬೇಕು. ರೈತರಿಗೆ ಬರುವ ಸರಕಾರಿ ಸೌಲಭ್ಯಗಳನ್ನು ಬ್ಯಾಂಕುಗಳು ನೇರವಾಗಿ ಕಡಿತ ಮಾಡುತ್ತಿರುವುದನ್ನು ತಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ಜಿಲ್ಲೆಯ ಹಳ್ಳಿಖೇಡ್(ಬಿ) ಬಿ.ಎಸ್.ಎಸ್.ಕೆ. ಕಾರ್ಖಾನೆಯನ್ನು ಪುನಃ ಪ್ರಾರಂಭಿಸಿ, ಕಾರ್ಮಿಕರಿಗೆ ಬಾಕಿ ನೀಡಬೇಕಿರುವ 35 ಕೋಟಿ ರೂ. ತಕ್ಷಣವೇ ಬಿಡುಗಡೆ ಮಾಡಬೇಕು. ರಸಗೊಬ್ಬರ ವಿತರಣೆಯಲ್ಲಿ ಆಗುತ್ತಿರುವ ಅಕ್ರಮ ತಡೆದು, ರೈತರಿಗೆ ಸಕಾಲದಲ್ಲಿ ರಸಗೊಬ್ಬರ ಲಭ್ಯವಾಗುವಂತೆ ಕ್ರಮ ವಹಿಸಬೇಕು. ರೈತರಿಗೆ ಹಗಲು ವೇಳೆಯಲ್ಲೇ ನಿರಂತರ ವಿದ್ಯುತ್ ಪೂರೈಕೆ ಒದಗಿಸಬೇಕು. ವಿದ್ಯುತ್ ಖಾಸಗೀಕರಣ ಮಸೂದೆ ಹಿಂತೆಗೆದುಕೊಳ್ಳಬೇಕು. ರೈತರ ಮತ್ತು ಕೃಷಿ ಕಾರ್ಮಿಕರ ಎಲ್ಲಾ ಸಾಲಗಳು ಮನ್ನಾ ಮಾಡಬೇಕು. ಸರಕಾರ ನಮ್ಮ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳದಿದ್ದಲ್ಲಿ ಅಕ್ಟೋಬರ್ ತಿಂಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಅಖಿಲ ಭಾರತ ಕಿಸಾನ್ ಸಭೆಯ ಮುಖಂಡರಾದ ಬಾಬುರಾವ್ ಹೊನ್ನಾ, ಸೂರ್ಯಕಾಂತ್ ಮದಕಟ್ಟಿ, ನಝೀರ್ ಅಹ್ಮದ್, ಎಂ.ಡಿ. ಶಫಾಯತ್ ಅಲಿ, ಮುಹಮ್ಮದ್ ವಹೀದಮಿಯ್ಯಾ, ಸಂತಪೂರ್ ಜೈಶೀಲಾ, ಮುನಿರೋದ್ದೀನ್, ಮೋತಿರಾಮ್, ಪ್ರಭು ತಗಣಿಕರ್, ರಾಮಣ್ಣಾ, ಶೀಲ ಸಾಗರ್ ಹಾಗೂ ಸುಜನಾ ರಾಣಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X