Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ರೇಷ್ಮೆ ಇಲಾಖೆಯ ಸ್ಥಳದಲ್ಲಿ...

ಬೀದರ್ | ರೇಷ್ಮೆ ಇಲಾಖೆಯ ಸ್ಥಳದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಅರವಿಂದಕುಮಾರ್ ಅರಳಿ ವಿರೋಧ : ಸಿಎಂಗೆ ಪತ್ರ

ವಾರ್ತಾಭಾರತಿವಾರ್ತಾಭಾರತಿ4 Nov 2025 9:54 AM IST
share
ಬೀದರ್ | ರೇಷ್ಮೆ ಇಲಾಖೆಯ ಸ್ಥಳದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಅರವಿಂದಕುಮಾರ್ ಅರಳಿ ವಿರೋಧ : ಸಿಎಂಗೆ ಪತ್ರ

ಬೀದರ್ : ರೇಷ್ಮೆ ಇಲಾಖೆಯ ಸ್ಥಳದಲ್ಲಿ ಅಂತರರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣಕ್ಕೆ ಸಚಿವ ಈಶ್ವರ್ ಖಂಡ್ರೆ ಅವರು ಮುಂದಾಗಿದ್ದು, ರೇಷ್ಮೆ ಇಲಾಖೆಯ ಜಮೀನಿನಲ್ಲಿಯೇ ಕ್ರೀಡಾಂಗಣ ಮಾಡುವುದು ಸಮಂಜಸವಲ್ಲ. ರೇಷ್ಮೆ ಇಲಾಖೆಯನ್ನು ಅಭಿವೃದ್ಧಿ ಮಾಡುವುದು ಬಿಟ್ಟು, ಅದನ್ನು ಮೊಟಕು ಗೊಳಿಸಲು ಹೊರಟಿದ್ದು ಸರಿಯಾದ ಕ್ರಮವಲ್ಲ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ್ ಅರಳಿ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಬೀದರ್ ಜಿಲ್ಲೆಯ ಕಾಂಗ್ರೆಸ್ ಪಕ್ಷದಲ್ಲಿ ಸಚಿವ ಈಶ್ವರ್ ಖಂಡ್ರೆ ಅವರ ವಿರುದ್ಧ ಕೆಲ ಕಾಂಗ್ರೆಸ್ ನಾಯಕರು ಅತೃಪ್ತರಾಗಿದ್ದು, ಅರವಿಂದಕುಮಾರ್ ಅರಳಿ ಅವರು ಆ ಅತೃಪ್ತರ ಪಟ್ಟಿಯ ಮುಂಚೂಣಿಯಲ್ಲಿದ್ದಾರೆ. ಇದೀಗ ರೇಷ್ಮೆ ಇಲಾಖೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಅವರು ವಿರೋಧ ವ್ಯಕ್ತಪಡಿಸಿದ್ದು, ಸ್ವ ಪಕ್ಷದಿಂದಲೇ ಅಂತರರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣಕ್ಕೆ ವಿರೋಧ ವ್ಯಕ್ತವಾಗಿದೆ. ಇದು ಕಾಂಗ್ರೆಸ್ ಪಕ್ಷದಲ್ಲಿ ಮತ್ತೆ ಚರ್ಚೆ ಹುಟ್ಟು ಹಾಕಿದೆ.

ಮುಖ್ಯಮಂತ್ರಿಗೆ ಸಲ್ಲಿಸಿದ ಪತ್ರದಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ನ.1 ರಂದು ನಗರದ ನೆಹರು ಕ್ರೀಡಾಂಗಣದಲ್ಲಿ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಕ್ರೀಡಾಂಗಣ ನಿರ್ಮಾಣದ ಒಂದು ಘೋಷಣೆ ಕೇಳಿ ಜನ ಬಹಳ ಸಂತೋಷ ಪಟ್ಟರು. ಆದರೆ ರೇಷ್ಮೆ ಇಲಾಖೆಯ ಜಮೀನಿನಲ್ಲಿಯೇ ಕ್ರೀಡಾಂಗಣ ನಿರ್ಮಿಸುವುದು ಸಮಂಜಸವಲ್ಲ. ರೇಷ್ಮೆ ಇಲಾಖೆ ಇಲ್ಲಿ ಕೆಲಸ ಮಾಡುತ್ತಿರುವುದರಿಂದ ಶೇ.5 ರಿಂದ 10 ಪ್ರತಿಶತ ರೇಷ್ಮೆ ಅಭಿವೃದ್ಧಿಯಾಗಿದೆ. ಹಾಗಾಗಿ ರೇಷ್ಮೆ ಇಲಾಖೆ ಸದೃಢ ಮಾಡುವುದು ಬಿಟ್ಟು ಅದನ್ನು ಮೊಟಕು ಮಾಡುವುದು ಯಾವ ಅಭಿವೃದ್ಧಿಯಾಗಿದೆ ಎಂದು ಪ್ರಶ್ನೆ ಮಾಡಿದ್ದಾರೆ.

ಆ ಸ್ಥಳದಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡುವುದರಿಂದ ರೇಷ್ಮೆ ವಾಣಿಜ್ಯ ಬೆಳೆಯತ್ತ ಮುಖ ಮಾಡಿದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗುತ್ತದೆ. ಈ ಹಿಂದೆ ತಮ್ಮ ಮೊದಲನೆ ಅವಧಿಯಲ್ಲಿಯೆ ತಾವು ತೋಟಗಾರಿಕೆ ಮಹಾ ವಿದ್ಯಾಲಯಕ್ಕೆ ಸೂಮಾರು 3.5 ಕೋಟಿ ರೂ. ಭರಿಸಿ ಭೂಮಿ ಪಡೆಯುವಂತೆ ಆದೇಶ ನೀಡಿದ್ದಿರಿ. ಆದರೆ ತೋಟಗಾರಿಕೆ ವಿಶ್ವ ವಿದ್ಯಾಲಯದಲ್ಲಿ ಅಷ್ಟು ಹಣ ಭರಿಸಲು ಆಗಲಿಲ್ಲ. ಅದಕ್ಕೆ ಅದು ಹಾಗೆ ನೆನೆಗುದಿಗೆ ಬಿದ್ದಿತ್ತು. ನಂತರ ನವದೆಹಲಿಯ ಐಸಿಎಆ‌ರ್ ನವರು ಜಮೀನು ವ್ಯವಸ್ಥೆ ಮಾಡದಿದ್ದಲಿ ಮಹಾವಿದ್ಯಾಲಯ ರದ್ದು ಮಾಡುತ್ತೇವೆ ಎಂದು ಹೇಳಿದ ವಿಷಯ ನನ್ನ ಗಮನಕ್ಕೆ ತಂದಾಗ ನಾನು ಮುತುವರ್ಜಿವಹಿಸಿ ಬೀದರ್ ರೇಷ್ಮೆ ಇಲಾಖೆಯ ಒಟ್ಟು 82.1 ಎಕರೆ ಭೂಮಿಯಲ್ಲಿ 49 ಎಕರೆ ಜಮೀನು ಸರ್ಕಾರದಿಂದ ಉಚಿತವಾಗಿ ಕೊಡಿಸಿದ್ದೇನೆ. ಹಾಗೆಯೇ ರೇಷ್ಮೆ ಇಲಾಖೆ ಅಭಿವೃದ್ಧಿ ಪಡಿಸಲು ಸರ್ಕಾರದ ಮೇಲೆ ಒತ್ತಡ ಹೇರಿ ರೈತರ ಜೀವ ನಾಡಿಯಾಗಿ ಮಾಡುವಂತೆ ಸೂಚಿಸಿದ್ದೆ. ಆದರೆ ಇವಾಗ ರೇಷ್ಮೆ ಇಲಾಖೆಯನ್ನು ಅಭಿವೃದ್ಧಿ ಪಡಿಸುವುದು ಬಿಟ್ಟು ಅದನ್ನು ನಿರ್ನಾಮ ಮಾಡಲು ಹೊರಟಿದ್ದು ಬಹಳ ನೋವಿನ ಸಂಗತಿಯಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಅಂತಾರಾಷ್ಟ್ರೀಯ ಕ್ರೀಡಾಂಗಣ ಮಾಡುವುದಾದರೆ ಕೆಲವು ವರ್ಷಗಳ ಹಿಂದೆ ಅಂತರರಾಷ್ಟ್ರೀಯ ಕ್ರೀಡಾಂಗಣ ಮಾಡಲು ಬೆಂಗಳೂರಿನ ಕೆಸಿಎ ಅವರ ಸಹಯೋಗದೊಂದಿಗೆ ಒಂದು ಕ್ರಿಯಾ ಯೋಜನೆ ತಯಾರಿಸಿ ಜಿಲ್ಲಾಧಿಕಾರಿಗಳ ಮೂಲಕ ಒಂದು ಪ್ರಸ್ತಾವನೆಯನ್ನು ಕಲಬುರಗಿಯ ವಿಭಾಗಾಧಿಕಾರಿಗಳಿಗೆ ಕಳುಹಿಸಲಾಗಿತ್ತು. ಆದರೆ ಕೆಲವರ ಹಸ್ತಕ್ಷೇಪದ ಮೇರೆಗೆ ಅದು ನೆನೆಗುದಿಗೆ ಬಿದಿತ್ತು. ಆ ಕಡತವನ್ನೆ ಒಂದು ಸಲ ತರಸಿ, ಮರು ಪರಿಶೀಲನೆ ನಡೆಸಿ ಭಾಲ್ಕಿಯ ರಾಷ್ಟ್ರೀಯ ಹೆದ್ದಾರಿ ಹತ್ತಿರ ಇರುವ ಕಪಲಾಪುರ ಗ್ರಾಮದ ಸರ್ವೆ ನಂಬರನಲ್ಲಿಯೇ ಪ್ರಾರಂಭಿಸಿದರೆ ಉತ್ತಮವಾಗುತ್ತದೆ. ಇಲ್ಲಿ ಕ್ರಿಡಾಂಗಣ ಸಂಪೂರ್ಣವಾಗಿ ನಿರ್ಮಾಣದ ಹಣವು ಖರ್ಚು ಮಾಡುವ ಜವಾಬ್ದಾರಿ ಕರ್ನಾಟಕ ಕ್ರಿಕೆಟ್ ಅಸೋಷಿಶಿಯನ್ (ಕೆಸಿಎ) ನವರು ತೆಗೆದುಕೊಳ್ಳಲು ಮುಂದೆ ಬಂದಿದ್ದರು. ಅದನ್ನೆ ಮುಂದುವರೆಸಿ ಬೆಂಗಳೂರಿನ ಕೆಸಿಎ ಅವರ ಜೊತೆ ಮಾತನಾಡಿ ಬಗೆ ಹರಿಸಬಹುದು ಎಂದು ಸಲಹೆ ನೀಡಿದ್ದಾರೆ.

ಅಂತರರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣ ಮಾಡಲು ಹೊರಟ ಸ್ಥಳದ ಬಗ್ಗೆ ಪುನರ್ ಪರಿಶೀಲಿಸಿ ಈ ರೇಷ್ಮೆ ಇಲಾಖೆಯ ಸ್ಥಳ ರಕ್ಷಿಸಿ ರೈತರಿಗೆ ಸಹಕಾರವಾಗುವಂತೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರಿಗೆ ಸೂಚಿಸಬೇಕು. ಇವಾಗ 25 ಕೋಟಿ ರೂ. ಖರ್ಚು ಮಾಡಲು ಹೋರಟ ಜಿಲ್ಲಾಡಳಿತ ಆ ಹಣವನ್ನು ಉಳಿಸಿ ಬೇರೆ ಅಭಿವೃದ್ಧಿ ಕೆಲಸ ಮಾಡುವಂತೆ ತಿಳಿಸಬೇಕು ಎಂದು ಅವರು ವಿನಂತಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X