Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಮೇ 15ರಂದು ಶಹಾಪುರದಲ್ಲಿ...

Bidar | ಮೇ 15ರಂದು ಶಹಾಪುರದಲ್ಲಿ ಬಸವಾದಿ ಶರಣರ ಜಾಗೃತಿ ಸಮಾವೇಶ : ಆರ್.ಜಿ.ಶಟಕಾರ್

ವಾರ್ತಾಭಾರತಿವಾರ್ತಾಭಾರತಿ12 May 2026 7:17 PM IST
share
Bidar | ಮೇ 15ರಂದು ಶಹಾಪುರದಲ್ಲಿ ಬಸವಾದಿ ಶರಣರ ಜಾಗೃತಿ ಸಮಾವೇಶ : ಆರ್.ಜಿ.ಶಟಕಾರ್

ಬೀದರ್: ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದಲ್ಲಿ ಮೇ 15ರಂದು ಸಂಜೆ 5 ಗಂಟೆಗೆ ಬಸವಾದಿ ಶರಣರ ಜಾಗೃತಿ ಸಮಾವೇಶ ಆಯೋಜಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಬೇಕು ಎಂದು ಜಾಗತಿಕ ಲಿಂಗಾಯತ ಮಹಾಸಭಾದ ಕಲಬುರಗಿ ಅಧ್ಯಕ್ಷ ಆರ್.ಜಿ.ಶಟಕಾರ್ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಸಿಪಿಎಸ್ ಮೈದಾನದಿಂದ ವಚನ ಗಾಯನದೊಂದಿಗೆ ಮೆರವಣಿಗೆ ಆರಂಭವಾಗಿ, ಹಳೆ ಬಸ್ ನಿಲ್ದಾಣದ ಎದುರಿನ ಶಾಲಾ ಮೈದಾನದಲ್ಲಿ ಸಮಾವೇಶ ನಡೆಯಲಿದೆ ಎಂದು ತಿಳಿಸಿದರು.

ಜಾಗತಿಕ ಲಿಂಗಾಯತ ಮಹಾಸಭಾ, ಸೌಹಾರ್ದ ಕರ್ನಾಟಕ, ಬಸವಪರ ಸಂಘಟನೆಗಳ ಒಕ್ಕೂಟ, ದಲಿತಪರ ಸಂಘಟನೆಗಳು, ಕಾಯಕಜೀವಿಗಳ ಒಕ್ಕೂಟ, ರೈತ, ಮಹಿಳಾ, ವಿದ್ಯಾರ್ಥಿ ಹಾಗೂ ಕಾರ್ಮಿಕ ಸಂಘಟನೆಗಳ ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಕಲ್ಯಾಣ ಕರ್ನಾಟಕ ಭಾಗದ ಬೀದರ್, ಯಡ್ರಾಮಿ, ಶಾಬಾದ್, ಜೇವರ್ಗಿ, ಭಾಲ್ಕಿ, ಕಮಲಾಪುರ ಸೇರಿದಂತೆ ವಿವಿಧ ಪ್ರದೇಶಗಳಿಂದ ಬಸವಾಭಿಮಾನಿಗಳು ಭಾಗವಹಿಸಲಿದ್ದಾರೆ. ಸಮಾರಂಭದಲ್ಲಿ ಬಸವಪರ ಮಠಾಧೀಶರು ಹಾಗೂ ವಿಚಾರವಾದಿಗಳು ಮಾತನಾಡಲಿದ್ದು, ಶರಣ ತತ್ವಗಳ ಕುರಿತು ಜಾಗೃತಿ ಮೂಡಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಹೇಳಿದರು.

ಶಹಾಪುರದಲ್ಲಿ “ಬಸವಾದಿ ಶರಣರ ಹಿಂದೂ ಸಮಾವೇಶ” ಎಂಬ ಹೆಸರಿನಲ್ಲಿ ಕೋಮುವಾದಿ ಕಾರ್ಯಕ್ರಮ ನಡೆಸುತ್ತಿರುವುದು ಖಂಡನೀಯ. ವೈದಿಕ ಪರಂಪರೆಯನ್ನು ಖಂಡಿಸಿ ತಾತ್ವಿಕ ಚಳವಳಿ ನಡೆಸಿದ್ದ ಶರಣರನ್ನು ಮತ್ತೆ ವೈದಿಕ ಚೌಕಟ್ಟಿನೊಳಗೆ ಸೆಳೆಯುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ಆರೋಪಿಸಿದರು.

ಸೌಹಾರ್ದ ಕರ್ನಾಟಕದ ಡಾ. ಮೀನಾಕ್ಷಿ ಬಾಳಿ ಮಾತನಾಡಿ, “ಯಾರೇ ಆಗಲಿ ಹಿಂದೂ ಸಮಾವೇಶ ನಡೆಸುವುದು ಅವರ ಹಕ್ಕು. ಆದರೆ ಬಸವಾದಿ ಶರಣರ ಹೆಸರಿನಲ್ಲಿ ಹಿಂದುತ್ವದ ವಿಚಾರಧಾರೆ ಹೇರಲು ಯತ್ನಿಸುವುದು ಸರಿಯಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಹಿಂದುತ್ವ ಎಂದರೆ ಮನುವಾದಿ ವಿಚಾರಧಾರೆ. ಶರಣರನ್ನು ಅದರೊಳಗೆ ಸೇರಿಸುವುದು ಅವರ ತತ್ವಗಳಿಗೆ ಅಪಚಾರ ಮಾಡುವಂತದ್ದು” ಎಂದು ಹೇಳಿದರು.

ಜಾಗತಿಕ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಬಸವರಾಜ್ ಬುಳ್ಳಾ ಮಾತನಾಡಿ, “ಬಸವಣ್ಣನವರನ್ನು ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವ ಸರ್ಕಾರ, ಅವರ ತತ್ವಗಳನ್ನು ರಕ್ಷಿಸುವ ಜವಾಬ್ದಾರಿಯನ್ನೂ ನಿಭಾಯಿಸಬೇಕು” ಎಂದು ಒತ್ತಾಯಿಸಿದರು.

“ಬಸವಣ್ಣ ಮತ್ತು ಬಸವಾದಿ ಶರಣರನ್ನು ಹಿಂದುತ್ವದ ರಾಜಕೀಯ ಆವರಣಕ್ಕೆ ಸೆಳೆಯುವ ಪ್ರಯತ್ನವನ್ನು ನಾವು ತೀವ್ರವಾಗಿ ವಿರೋಧಿಸುತ್ತೇವೆ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಪದಾಧಿಕಾರಿ ರವೀಂದ್ರ ಶಾಬಾದಿ, ವಚನ ಸಮೂಹ ಸಂಸ್ಥೆಯ ಅಧ್ಯಕ್ಷ ಅಲ್ಲಮಪ್ರಭು ನಾವದಗೇರಿ, ಜನವಾದಿ ಮಹಿಳಾ ಸಂಘಟನೆ ಜಿಲ್ಲಾಧ್ಯಕ್ಷೆ ರೇಷ್ಮಾ ಕುಂದನ್, ಮಹಾಸಭಾದ ಪದಾಧಿಕಾರಿಗಳಾದ ಶಾಂತಪ್ಪ ಪಾಟೀಲ್, ಹಣಮಂತರಾಯ್ ಪಾಟೀಲ್, ಹೋರಾಟಗಾರರಾದ ಆರ್.ಪಿ.ರಾಜಾ, ಗೌಸೊದ್ದಿನ್ ಹಾಗೂ ಸತೀಶ್ ಇದ್ದರು.

Tags

ShahapurBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X