Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್‌| ಹುಲಸೂರ್ ತಾಲೂಕಿನಲ್ಲಿ ಬಕ್ರೀದ್...

ಬೀದರ್‌| ಹುಲಸೂರ್ ತಾಲೂಕಿನಲ್ಲಿ ಬಕ್ರೀದ್ ಹಬ್ಬ ಆಚರಣೆ

ವಾರ್ತಾಭಾರತಿವಾರ್ತಾಭಾರತಿ29 May 2026 9:34 PM IST
share
ಬೀದರ್‌| ಹುಲಸೂರ್ ತಾಲೂಕಿನಲ್ಲಿ ಬಕ್ರೀದ್ ಹಬ್ಬ ಆಚರಣೆ

ಹುಲಸೂರ್ : ತ್ಯಾಗ, ಬಲಿದಾನ ಮತ್ತು ಸಹೋದರತ್ವದ ಸಂದೇಶ ಸಾರುವ ಬಕ್ರೀದ್ ಹಬ್ಬವನ್ನು ತಾಲ್ಲೂಕಿನಾದ್ಯಂತ ಮುಸ್ಲಿಂ ಬಾಂಧವರು ಗುರುವಾರ ಶ್ರದ್ಧಾಭಕ್ತಿಯಿಂದ ಆಚರಿಸಿದರು. ಪಟ್ಟಣ ಸೇರಿದಂತೆ ವಿವಿಧ ಗ್ರಾಮಗಳ ಮಸೀದಿಗಳು ಹಾಗೂ ಈದ್ಗಾ ಮೈದಾನಗಳಲ್ಲಿ ವಿಶೇಷ ಪ್ರಾರ್ಥನೆಗಳು ನಡೆದವು.

ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಸಮೀಪದ ಈದ್ಗಾ ಮೈದಾನದಲ್ಲಿ ಬೆಳಗ್ಗಿನಿಂದಲೇ ಮುಸ್ಲಿಂ ಬಾಂಧವರು ತಂಡೋಪತಂಡವಾಗಿ ಆಗಮಿಸಿ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿದರು. ಹೊಸ ಉಡುಪು ಧರಿಸಿ, ರಂಗು–ರಂಗಿನ ಟೋಪಿಗಳನ್ನು ತೊಟ್ಟ ಯುವಕರು, ವೃದ್ಧರು ಮತ್ತು ಮಕ್ಕಳು ಪ್ರಾರ್ಥನೆಯಲ್ಲಿ ಪಾಲ್ಗೊಂಡು ಹಬ್ಬದ ಸಂಭ್ರಮ ಹೆಚ್ಚಿಸಿದರು.

ವಿಶೇಷ ಈದ್ ನಮಾಝ್‌ ಬಳಿಕ ಧರ್ಮಗುರುಗಳು ಬಕ್ರೀದ್ ಹಬ್ಬದ ಮಹತ್ವ ಕುರಿತು ಉಪನ್ಯಾಸ ನೀಡಿ, ತ್ಯಾಗ, ದಾನ-ಧರ್ಮ, ಸಹಾನುಭೂತಿ ಹಾಗೂ ಮಾನವೀಯ ಮೌಲ್ಯಗಳೇ ಇಸ್ಲಾಂ ಧರ್ಮದ ಮೂಲ ತತ್ವಗಳಾಗಿವೆ. ಸಮಾಜದಲ್ಲಿ ಎಲ್ಲ ಧರ್ಮದ ಜನರೊಂದಿಗೆ ಪ್ರೀತಿ, ಶಾಂತಿ ಮತ್ತು ಸಹೋದರತ್ವದಿಂದ ಬದುಕುವಂತೆ ಅವರು ಕರೆ ನೀಡಿದರು.

ದೇಶದಲ್ಲಿ ಶಾಂತಿ, ಸೌಹಾರ್ದತೆ ನೆಲೆಸಲಿ. ರೈತರು ಹಾಗೂ ವ್ಯಾಪಾರಿಗಳು ಸಮೃದ್ಧರಾಗಲಿ. ಪ್ರಕೃತಿ ವಿಕೋಪಗಳು ದೂರವಾಗಲಿ ಎಂದು ವಿಶೇಷ ಪ್ರಾರ್ಥನೆ ಮಾಡಲಾಯಿತು. ಪ್ರಾರ್ಥನೆ ಬಳಿಕ ಪರಸ್ಪರ ಅಪ್ಪಿಕೊಂಡು ಬಕ್ರೀದ್ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

ಈ ಸಂದರ್ಭದಲ್ಲಿ ಮೌಲಾನಾ ಅಹ್ಮದ್ ರಜಾ, ಗೌಸೋದ್ದೀನ್ ಬಿರಿವಾಲೆ, ಗ್ರಾಮ ಪಂಚಾಯಿತ್ ಮಾಜಿ ಸದಸ್ಯ ಮನ್ಸೂರ್ ದಾವಲಾಜಿ, ನೌಶಾದ್, ಅಬ್ರಾರ್ ಸೌದಾಗರ್, ಮುಜೈದ್ ಜಂಗಿ, ನಾಸೀರ್ ಅಹ್ಮದ್, ಆಶಿಫ್ ಸಿಲಾರ್, ಮುಜಿಬ್ ದಾವಲಾಜಿ, ಸಯ್ಯದ್ ತಬ್ರೇಜ್, ಗುಲಾಂ ಬಡಾಯಿ, ಇಜಾಜ್ ಜಹಾಂಗೀರ್, ಜಮೀರಲ್ಲಾಖನ್, ಗೌಸ್ ಬರಿವಾಲೆ, ಆಯುಬ್ ಖುರೇಷಿ, ಅಬ್ದುಲ್ ಹಮೀದ್, ತನ್ವೀರ್ ಸೈಯದ್ ಹಾಗೂ ಇಕ್ರಾಮ್ ಠಾಕೂರ್ ಸೇರಿದಂತೆ ಮುಸ್ಲಿಂ ಸಮಾಜದ ಮುಖಂಡರು ಹಾಗೂ ಹಲವರು ಉಪಸ್ಥಿತರಿದ್ದರು.

Tags

BidarBakrid festival
share
ವಾರ್ತಾಭಾರತಿ
ವಾರ್ತಾಭಾರತಿ
Next Story
X