Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಸಿಇಓ ಗಿಟ್ಟೆ ಮಾಧವ ವಿಠ್ಠಲರಾವ್...

Bidar | ಸಿಇಓ ಗಿಟ್ಟೆ ಮಾಧವ ವಿಠ್ಠಲರಾವ್ ಹಲವು ಕಡೆ ದಿಢೀರ್ ಭೇಟಿ

ವಾರ್ತಾಭಾರತಿವಾರ್ತಾಭಾರತಿ1 Sept 2026 6:00 PM IST
share
Bidar | ಸಿಇಓ ಗಿಟ್ಟೆ ಮಾಧವ ವಿಠ್ಠಲರಾವ್ ಹಲವು ಕಡೆ ದಿಢೀರ್ ಭೇಟಿ

ಬೀದರ್: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿಟ್ಟೆ ಮಾಧವ ವಿಠ್ಠಲರಾವ್ ಅವರು ಮಂಗಳವಾರ ಬೆಳಿಗ್ಗೆ 6:30 ಗಂಟೆಯಿಂದಲೇ ಬೀದರ್ ತಾಲೂಕಿನ ಕಮಠಾಣ, ಬಗ್ದಲ್ ಹಾಗೂ ಚಟ್ನಳ್ಳಿ ಗ್ರಾಮಗಳಿಗೆ ದಿಢೀರ್ ಭೇಟಿ ನೀಡಿ, ಹಲವು ಕಡೆ ಪರಿಶೀಲನೆ ನಡೆಸಿದರು.

ಕಮಠಾಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಿ ಆಸ್ಪತ್ರೆಯ ಪ್ರತಿಯೊಂದು ಮೂಲೆಗೂ ಹೋಗಿ ಸ್ವಚ್ಛತೆ ಸೇರಿ ಹಲವು ತಪಾಸಣೆ ನಡೆಸಿದರು. ಪ್ರಮುಖವಾಗಿ ರೋಗಿಗಳಿಗೆ ನೀಡುವ ಮಾತ್ರೆಗಳು ಹಾಗೂ ಔಷಧಗಳ ದಾಸ್ತಾನು ಸರಿಯಾಗಿದೆಯೇ ಎಂದು ಫಾರ್ಮಸಿಯಲ್ಲಿ ಪರಿಶೀಲಿಸಿದರು. ಬಳಿಕ ಲ್ಯಾಬೋರೇಟರಿಗೆ ಭೇಟಿ ನೀಡಿ ಅಲ್ಲಿನ ತಪಾಸಣಾ ವ್ಯವಸ್ಥೆಯನ್ನು ವೀಕ್ಷಿಸಿದರು.

ಅಲ್ಲಿಂದ ನೇರವಾಗಿ ಕಮಠಾಣ ಗ್ರಾಮ ಪಂಚಾಯಿತಿ ಕಚೇರಿಗೆ ತೆರಳಿ ಪರಿಶೀಲನೆ ನಡೆಸಿದರು. ನಂತರ ಸ್ಥಳದಲ್ಲಿದ್ದ ಗ್ರಾಮಸ್ಥರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಈ ವೇಳೆ ಊರಿನ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಜನರು ಅಳಲು ತೋಡಿಕೊಂಡರು. ಇದಕ್ಕೆ ತಕ್ಷಣವೇ ಸ್ಪಂದಿಸಿದ ಅವರು, ಗ್ರಾಮದ ನೀರಿನ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸಲಾಗುವುದು. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದರು.

ಬಳಿಕ ಬಗ್ದಲ್‌ನಲ್ಲಿರುವ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ, ಶಾಲೆಯ ಅಡುಗೆಮನೆಗೆ ತೆರಳಿ ಅಲ್ಲಿ ಬಳಸುವ ತರಕಾರಿ ಹಾಗೂ ದಿನಸಿ ಪದಾರ್ಥಗಳ ಗುಣಮಟ್ಟವನ್ನು ಸೂಕ್ಷ್ಮವಾಗಿ ಪರಿಶೀಲಿಸಿದರು. ಇದೇ ವೇಳೆ ಮಕ್ಕಳೊಂದಿಗೆ ಸಂವಾದ ನಡೆಸಿದ ಅವರು, ಮುಂದಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಬಗ್ದಲ್ ಮುರಾರ್ಜಿ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಬೇಕು. ಪ್ರತಿಯೊಬ್ಬರೂ ಶಿಸ್ತನ್ನು ಅಳವಡಿಸಿಕೊಂಡು ಚೆನ್ನಾಗಿ ಓದಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕೊನೆಯದಾಗಿ ಚಟ್ನಳ್ಳಿ ಗ್ರಾಮದ ವಿಬಿ–ಜಿ ರಾಮ್‌ಜಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಅವರು, ಕೇವಲ ವೀಕ್ಷಣೆ ಮಾಡದೇ ಸ್ಥಳದಲ್ಲಿದ್ದ ಕಾರ್ಮಿಕರ ಹಾಜರಾತಿಯನ್ನು ತಾವೇ ಖುದ್ದಾಗಿ ಪಡೆದರು. ಅಷ್ಟೇ ಅಲ್ಲದೆ, ತಾವೂ ಕೂಡ ಕೆಲಕಾಲ ಕಾರ್ಮಿಕರೊಂದಿಗೆ ಕಾಯಕದಲ್ಲಿ ತೊಡಗಿಸಿಕೊಂಡರು.

ಈ ಸಂದರ್ಭದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ತಾಂತ್ರಿಕ ಸಂಯೋಜಕರು, ತಾಂತ್ರಿಕ ಸಹಾಯಕರು ಹಾಗೂ ಇತರೆ ಸಂಬಂಧಪಟ್ಟ ಅಧಿಕಾರಿ, ಸಿಬ್ಬಂದಿ ಇದ್ದರು.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X