Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಆರೋಗ್ಯಕರ ಬದುಕಿಗೆ ಗುಣಮಟ್ಟದ...

ಬೀದರ್ | ಆರೋಗ್ಯಕರ ಬದುಕಿಗೆ ಗುಣಮಟ್ಟದ ಆಹಾರ ಧಾನ್ಯ ಬಳಕೆ ಅಗತ್ಯ : ಸಚಿವ ಈಶ್ವರ್ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ9 Feb 2025 6:59 PM IST
share
Photo of Program

ಬೀದರ್ : ರೋಗಮುಕ್ತ, ಆರೋಗ್ಯಕರ ಬದುಕಿಗೆ ಗುಣಮಟ್ಟದ ಸತ್ವಯುತ ಆಹಾರ ಧಾನ್ಯ ಬಳಕೆ ಅಗತ್ಯವಾಗಿದೆ ಎಂದು ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ್ ಬಿ.ಖಂಡ್ರೆ ತಿಳಿಸಿದರು.

ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಆಶ್ರಯದಲ್ಲಿ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಾವಯವ ಮತ್ತು ಸಿರಿಧಾನ್ಯ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.

ಅಧುನಿಕ ಕಾಲದಲ್ಲಿ ಎಲ್ಲೆಡೆ ಮಾಲಿನ್ಯ ಕಾಣುತ್ತಿದ್ದೇವೆ. ಪ್ರಕೃತಿ ವಿಕೋಪ, ಬರಗಾಲ, ಪ್ರವಾಹ, ಹವಮಾನ ವೈಪರಿತ್ಯ ಇಂತಹ ಅಗಾಧ ಪರಿಸ್ಥಿತಿಯಲ್ಲಿ ಜನರು ಒತ್ತಡದ ಜೀವನ ಸಾಗಿಸುತ್ತಿದ್ದಾರೆ. ವಿವಿಧ ರೋಗಗಳಿಗೆ ಅಂಟಿಕೊಂಡಿದ್ದಾರೆ. ಆದ್ದರಿಂದ ಸಾವಯವ ಕೃಷಿ ಹಾಗೂ ಸಿರಿಧಾನ್ಯಗಳ ಬಳಕೆಯಿಂದ ಆರೋಗ್ಯಕರ ಜೀವನ ನಡೆಸಬಹುದು ಎಂದು ಹೇಳಿದರು.

ಸರಕಾರವು ಸಾವಯವ ಕೃಷಿಗೆ ಹೆಚ್ಚು ಒತ್ತು ನೀಡಿದ್ದು, ಸಿರಿಧಾನ್ಯ ಬಳಕೆಗೆ ಪಾಶಸ್ತ್ಯ ನೀಡಿದೆ. ಎಲ್ಲ ಜಿಲ್ಲೆಗಳಲ್ಲಿ ಹಲವಾರು ಕಾರ್ಯಕ್ರಮಗಳು ಹಮ್ಮಿಕೊಳ್ಳುತ್ತಿದ್ದೇವೆ. ನಮ್ಮ ಪೂರ್ವಜರು ಪರಿಸರಪೂರಕ ಸಾವಯವ ಕೃಷಿಗೆ ಒತ್ತು ನೀಡಿದ್ದರು. ಉತ್ತಮ ಗುಣಮಟ್ಟದ ಆಹಾರ ಧಾನ್ಯ ಬಳಸುತ್ತಿದ್ದರು. ಪೌಷ್ಠಿಕಾಂಶ ಭರಿತ ಸಿರಿಧಾನ್ಯ ಉಳಿದೆಲ್ಲ ಧಾನ್ಯಗಳಿಗಿಂತ ಶ್ರೇಷ್ಠ. ಎಲ್ಲ ಹವಾಮಾನಕ್ಕೂ ಹೊಂದಿಕೊಂಡು ಬೆಳೆಯುವ, ಕೀಟ ಹಾಗೂ ರೋಗವಿಲ್ಲದೆ ರಸಾಯನಿಕ ಮುಕ್ತವಾಗಿ ಬೆಳೆದು ಉತ್ತಮ ಆರೋಗ್ಯ ನಿರ್ಮಾಣಕ್ಕೆ ಸಹಾಯವಾಗುತ್ತವೆ. ಸಿರಿಧಾನ್ಯಗಳನ್ನು ಪ್ರತಿನಿತ್ಯ ಬಳಸುವುದರಿಂದ ಅನೇಕ ರೋಗಗಳು ವಾಸಿಯಾದ ಉದಾಹರಣೆಗಳಿವೆ ಎಂದು ತಿಳಿಸಿದರು.

ಈಗ ಕೃಷಿ ಕ್ಷೇತ್ರವು ಕವಲು ದಾರಿಯಲ್ಲಿದೆ. ರೈತರ ಬೆಳೆಗೆ ಸರಿಯಾದ ಬೆಂಬಲ ಬೆಲೆ ದೊರೆಯಬೇಕಿದೆ. ಸ್ವಾಮಿನಾಥನ್ ಆಯೋಗದ ಪ್ರಕಾರ ವೈಜ್ಞಾನಿಕ ಬೆಲೆ ನಿಗದಿಯಾಗಬೇಕಿದೆ ಎಂದರು.

ಕೃಷಿ ಹೆಚ್ಚು ಲಾಭದಾಯಕ ಆಗುವ ನಿಟ್ಟಿನಲ್ಲಿ ರೈತರೇ ಕಾಲಕ್ಕನುಗುಣವಾಗಿ ಯಾವ ಬೆಳೆ ಬೆಳೆಯಬೇಕೆಂಬುದನ್ನು ವಿಜ್ಞಾನಿಗಳನ್ನು ಸಂಪರ್ಕಿಸಿ ಆರ್ಥಿಕವಾಗಿಯೂ ಸದೃಢವಾಗಬೇಕಿದೆ. ಸಿರಿಧಾನ್ಯ ಬಳಕೆಗೆ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ. ಸಾವಯವ ಕೃಷಿ ವಿಸ್ತರಣೆಗೆ ರೈತರು ಸಿದ್ದರಾಗಬೇಕಿದೆ. ಈ ನಿಟ್ಟಿನಲ್ಲಿ ಕೃಷಿ ಸಖಿಯರು ಗ್ರಾಮಗಳಲ್ಲಿ ಹೆಚ್ಚೆಚ್ಚು ತಿಳುವಳಿಕೆ ಮೂಡಿಸಬೇಕು ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ, ನಗರಸಭೆ ಅಧ್ಯಕ್ಷ ಮಹ್ಮದ್ ಗೌಸ್, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಸಿದ್ರಾಮಯ್ಯ ಸ್ವಾಮಿ, ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಪ್ರತಿನಿಧಿ ವಿಶ್ವನಾಥ್ ಪಾಟೀಲ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಿಯಾವುಲ್ಲಾ ಕೆ, ಕೃಷಿ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ.ಭವಾನಿ ಕೆ, ಡಾ.ಸುನಿಲಕುಮಾರ್ ಎನ್.ಎಮ್, ಕೃಷಿ ಇಲಾಖೆ ಉಪನಿರ್ದೇಶಕ ಸೋಮಶೇಖರ್ ಬಿರಾದಾರ್, ಸಹಾಯಕ ನಿರ್ದೇಶಕ ಅನ್ಸಾರಿ ಹಾಗೂ ಕೃಷಿ ಸಖಿಯರು, ರೈತ ಮುಖಂಡರು, ರೈತರು, ಕೃಷಿ ಇಲಾಖೆ ಸಿಬ್ಬಂದಿಗಳು ಸೇರಿದಂತೆ ಅನೇಕರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X