Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ದೇಶ ರಕ್ಷಣೆಗೆ ಮಾಜಿ ಸೈನಿಕರ...

ಬೀದರ್ | ದೇಶ ರಕ್ಷಣೆಗೆ ಮಾಜಿ ಸೈನಿಕರ ಕೊಡುಗೆ ಅಪಾರ : ಸೂರ್ಯಕಾಂತ್ ನಾಗಮಾರಪಳ್ಳಿ

ವಾರ್ತಾಭಾರತಿವಾರ್ತಾಭಾರತಿ27 Oct 2025 10:05 PM IST
share
ಬೀದರ್ | ದೇಶ ರಕ್ಷಣೆಗೆ ಮಾಜಿ ಸೈನಿಕರ ಕೊಡುಗೆ ಅಪಾರ : ಸೂರ್ಯಕಾಂತ್ ನಾಗಮಾರಪಳ್ಳಿ

ಬೀದರ್ : ಅಂದಿನ ದಿನಗಳಲ್ಲಿ ದೇಶ ರಕ್ಷಣೆಗೆ ಇಂದಿನ ಮಾಜಿ ಸೈನಿಕರ ಕೊಡುಗೆ ಅಪಾರವಾಗಿದೆ ಎಂದು ಜೆಡಿಎಸ್ ಮುಖಂಡ ಸೂರ್ಯಕಾಂತ್ ನಾಗಮಾರಪಳ್ಳಿ ಅವರು ಹೇಳಿದರು.

ನಗರದ ಡಾ.ಚನ್ನಬಸವ ಪಟ್ಟದೇವರ ರಂಗಮಂದಿರದಲ್ಲಿ ನಡೆದ ಮಾಜಿ ಸೈನಿಕರ ಸಂಘದ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಾಜಿ ಸೈನಿಕರು ದೇಶಕ್ಕಾಗಿ ಅದ್ಭುತ ಸೇವೆ ಸಲ್ಲಿಸಿದ್ದಾರೆ. ಗಡಿಯಲ್ಲಿ ನಿಂತು ಶತ್ರುಗಳು ದೇಶದ ಒಳಗೆ ನುಗ್ಗದಂತೆ ಕಾವಲು ಕಾದಿರುವ ಕೀರ್ತಿ ಅವರಿಗೆ ಸಲ್ಲುತ್ತದೆ. ಅವರ ಸೇವೆಯನ್ನು ಪರಿಗಣಿಸಿ, ಇಂದಿನ ಪೀಳಿಗೆ ಮಾಜಿ ಸೈನಿಕರಿಗೆ ಗೌರವ ನೀಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.

ಮಾಜಿ ಸೈನಿಕರ ಕಷ್ಟ, ಸುಖಗಳಲ್ಲಿ ನಾಗಮಾರಪಳ್ಳಿ ಪರಿವಾರ ಸದಾ ಇರುತ್ತದೆ. ಗುರುಪಾದಪ್ಪ ನಾಗಮಾರಪಳ್ಳಿ ಆಸ್ಪತ್ರೆಯಲ್ಲಿ ಮಾಜಿ ಸೈನಿಕರಿಗೆ ಉಚಿತ ಚಿಕಿತ್ಸೆ ನೀಡುವುದಾಗಿ ಅವರು ಭರವಸೆ ನೀಡಿದರು.

ಮುಖ್ಯ ಅತಿಥಿ ಈಶ್ವರಸಿಂಗ್ ಠಾಕೂರ್ ಅವರು ಮಾತನಾಡಿ, ಅಂದಿನ ಕಾಲದಲ್ಲಿ ಸೈನಿಕರ ಕೈಯಲ್ಲಿ ಅತ್ಯಾಧುನಿಕ ಉಪಕರಣಗಳು ಇರಲಿಲ್ಲ. ಆದರೂ ಅವರು ದೇಶದ ಗಡಿಯನ್ನು ಸಮರ್ಥವಾಗಿ ರಕ್ಷಿಸಿದ್ದರು. ಇಂದಿಗೂ ಭಾರತೀಯ ಸೈನ್ಯವು ಅದೇ ಶೌರ್ಯದಿಂದ ದೇಶದ ಭದ್ರತೆ ಕಾಪಾಡುತ್ತಿದೆ ಎಂದು ಹೇಳಿದರು.

ಮಾಜಿ ಸೈನಿಕ ಸಂಘದ ಗೌರವಾಧ್ಯಕ್ಷ ಅಶೋಕಕುಮಾರ್ ಕರಂಜಿ ಅವರು ಮಾತನಾಡಿ, ಅ.20 , 1975ರಲ್ಲಿ ಬೀದರ್ ಜಿಲ್ಲೆಯ ಚಿಟಗುಪ್ಪದಲ್ಲಿ ಸಂಘ ಸ್ಥಾಪನೆ ಮಾಡಲಾಯಿತು. 1982ರಲ್ಲಿ ಸರ್ಕಾರದಿಂದ ನಿವೇಶನ ದೊರೆತಿದ್ದು, 2007–08ರಲ್ಲಿ ಮಾಜಿ ಸೈನಿಕರ ಕರ ನಿವೇಶನ ವಿನಾಯಿತಿಯನ್ನು ಸಾಧಿಸಲಾಯಿತು. ಬೀದರ್ ಜಿಲ್ಲೆಯ ಮಾಜಿ ಸೈನಿಕರ ಸತತ ಪ್ರಯತ್ನದಿಂದ ಈಗ ECHS ಆಸ್ಪತ್ರೆ ಇಲ್ಲಿನ ಏರ್ ಫೋರ್ಸ್ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ನೂರಾರು ಮಾಜಿ ಸೈನಿಕರು ದಿನನಿತ್ಯ ಇದರ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾಶಿನಾಥ್ ಬೆಲ್ದಾಳೆ, ಜಿಲ್ಲಾಧ್ಯಕ್ಷ ಪಾಂಡಪ್ಪ ಮೇತ್ರಿ ಸೇರಿದಂತೆ ಹಲವರು ಮಾತನಾಡಿದರು.

ಈ ಸಂದರ್ಭದಲ್ಲಿ ಕರ್ನಲ್ ದೀಪಕ್ ಚೌಕಡ್, ವೆಂಕಟರಾವ್ ತೆಲಂಗ್, ಶಿವಕುಮಾರ್, ಎಂ.ಕೆ.ಹಬೀಬೋದ್ದಿನ್, ತುಕ್ಕಪ್ಪ, ಧನರಾಜ್, ಮೋಹನ್ ಬಚ್ಚಾ, ಶಂಕರಾವ್ ಬಿರಾದರ್, ರಾಜೇಶ್ ಚೆಲುವಾ ಹಾಗೂ ವೆಂಕಟರಾವ್ ಜಾಧವ್ ಸೇರಿದಂತೆ ಅನೇಕ ಮಾಜಿ ಸೈನಿಕರು ಮತ್ತು ಮಹಾರಾಷ್ಟ್ರದ ಮಾಜಿ ಸೈನಿಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X