Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಮೈಲೂರಿನ ಬಾಲಕಿಯರ ವಸತಿ ನಿಲಯ...

ಬೀದರ್ | ಮೈಲೂರಿನ ಬಾಲಕಿಯರ ವಸತಿ ನಿಲಯ ಸ್ಥಳಾಂತರಕ್ಕೆ ವಿರೋಧಿಸಿ ದಲಿತ ಸಂಘರ್ಷ ಸಮಿತಿಯಿಂದ ಮನವಿ

ವಾರ್ತಾಭಾರತಿವಾರ್ತಾಭಾರತಿ3 July 2026 7:13 PM IST
share
ಬೀದರ್ | ಮೈಲೂರಿನ ಬಾಲಕಿಯರ ವಸತಿ ನಿಲಯ ಸ್ಥಳಾಂತರಕ್ಕೆ ವಿರೋಧಿಸಿ ದಲಿತ ಸಂಘರ್ಷ ಸಮಿತಿಯಿಂದ ಮನವಿ

ಬೀದರ್ : ನಗರದ ಮೈಲೂರಿನಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯವನ್ನು ಘೋಡಂಪಳ್ಳಿಗೆ ಸ್ಥಳಾಂತರಿಸುವ ಪ್ರಕ್ರಿಯೆಯನ್ನು ತಕ್ಷಣವೇ ಕೈಬಿಡುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಮನವಿ ಸಲ್ಲಿಸಲಾಗಿದೆ.

ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರಿಗೆ ಶುಕ್ರವಾರ ಸಲ್ಲಿಸಿದ ಮನವಿಯಲ್ಲಿ, ಘೋಡಂಪಳ್ಳಿ ಗ್ರಾಮವು ಬೀದರ್ ನಗರದಿಂದ ಸುಮಾರು 15 ಕೀ.ಮೀ ದೂರದಲ್ಲಿದ್ದು, ಸಮರ್ಪಕ ಸಾರಿಗೆ ಸಂಪರ್ಕವಿಲ್ಲದ ನಿರ್ಜನ ಪ್ರದೇಶವಾಗಿದೆ. ಅಲ್ಲದೆ, ತೆಲಂಗಾಣ ಗಡಿಭಾಗ, ಅರಣ್ಯ ಪ್ರದೇಶ ಹಾಗೂ ಸ್ಮಶಾನದ ಸಮೀಪ ಇರುವುದರಿಂದ ವಿದ್ಯಾರ್ಥಿನಿಯರ ಸುರಕ್ಷತೆ ದೃಷ್ಟಿಯಿಂದ ವಸತಿ ನಿಲಯ ಸ್ಥಳಾಂತರ ಸೂಕ್ತವಲ್ಲ ಎಂದು ಉಲ್ಲೇಖಿಸಲಾಗಿದೆ.

ಘೋಡಂಪಳ್ಳಿಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಾತ್ರ ಕಾರ್ಯನಿರ್ವಹಿಸುತ್ತಿದ್ದು, ಅಲ್ಲಿನ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಬಾಲಕಿಯರ ವಸತಿ ನಿಲಯವನ್ನು ಅಲ್ಲಿಗೆ ಸ್ಥಳಾಂತರಿಸುವುದು ವಿದ್ಯಾರ್ಥಿನಿಯರ ಶಿಕ್ಷಣ ಹಾಗೂ ಭದ್ರತೆಗೆ ಧಕ್ಕೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ.

ಈ ಕುರಿತು ಈಗಾಗಲೇ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಸಂಸದ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಲಾಗಿದೆ. ಜನಸ್ಪಂದನ ಸಭೆಯಲ್ಲಿಯೂ ವಿಷಯ ಪ್ರಸ್ತಾಪಿಸಲಾಗಿದೆ ಎಂದು ತಿಳಿಸಲಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಘೋಡಂಪಳ್ಳಿಯ ನಿಗದಿತ ಕಟ್ಟಡಕ್ಕೆ ಭೇಟಿ ನೀಡಿ ಅಸಮಾಧಾನ ವ್ಯಕ್ತಪಡಿಸಿದ್ದರು. ಬಾಲಕಿಯರ ವಸತಿ ನಿಲಯ ನಡೆಸಲು ಆ ಸ್ಥಳ ಸೂಕ್ತವಲ್ಲ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಇದೀಗ ಆಯುಕ್ತರ ಮುಂದಿನ ನಿರ್ದೇಶನ ಬರುವವರೆಗೆ ವಸತಿ ನಿಲಯವನ್ನು ಸ್ಥಳಾಂತರಿಸುವ ಪ್ರಕ್ರಿಯೆಯನ್ನು ತಡೆಹಿಡಿಯಲಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ತಿಳಿಸಲಾಗಿದೆ. ಆದ್ದರಿಂದ, ವಸತಿ ನಿಲಯವನ್ನು ಸ್ಥಳಾಂತರಿಸುವ ಪ್ರಕ್ರಿಯೆಯನ್ನು ತಡೆಹಿಡಿಯಬೇಕು ಎಂದು ಆಗ್ರಹಿಸಲಾಗಿದೆ.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಸಂಚಾಲಕ ಧನರಾಜ್ ಮುಸ್ತಾಪೂರ್, ಜಿಲ್ಲಾ ಸಹ ಸಂಚಾಲಕ ವಿಜಯಕುಮಾರ್ ಐಹೊಳೆ, ಜೈಪ್ರಕಾಶ್ ಅಷ್ಟೂರೆ, ಹಾಗೂ ಬಸವರಾಜ್ ಭಾವಿದೊಡ್ಡಿ ಅವರು ಇದ್ದರು.

Tags

BidarDalit Sangharsh Samitihostel
share
ವಾರ್ತಾಭಾರತಿ
ವಾರ್ತಾಭಾರತಿ
Next Story
X