Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಸರ್ಕಾರಿ ಉದ್ಯೋಗ ಅರ್ಜಿಗೆ...

Bidar | ಸರ್ಕಾರಿ ಉದ್ಯೋಗ ಅರ್ಜಿಗೆ ಪ್ರಮಾಣ ಪತ್ರಗಳ ಶೀಘ್ರ ವಿತರಣೆಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ1 Sept 2026 6:11 PM IST
share
Bidar | ಸರ್ಕಾರಿ ಉದ್ಯೋಗ ಅರ್ಜಿಗೆ ಪ್ರಮಾಣ ಪತ್ರಗಳ ಶೀಘ್ರ ವಿತರಣೆಗೆ ಆಗ್ರಹ

ಬೀದರ್: ಸರ್ಕಾರಿ ಉದ್ಯೋಗ ನೇಮಕಾತಿಗೆ ಅಗತ್ಯವಿರುವ ಜಾತಿ, ಆದಾಯ ಹಾಗೂ 371(ಜೆ) ಸೇರಿದಂತೆ ವಿವಿಧ ಮೀಸಲಾತಿ ಪ್ರಮಾಣ ಪತ್ರಗಳನ್ನು ಶೀಘ್ರವಾಗಿ ಮಂಜೂರು ಮಾಡಬೇಕು ಹಾಗೂ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ವಿಸ್ತರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಹೊಯ್ಸಳ ವೇದಿಕೆ ವತಿಯಿಂದ ಮನವಿ ಸಲ್ಲಿಸಲಾಯಿತು.

ಭಾಲ್ಕಿ ತಹಶೀಲ್ದಾರ್ ಅವರಿಗೆ ಮಂಗಳವಾರ ಸಲ್ಲಿಸಿದ ಮನವಿಯಲ್ಲಿ, ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಉದ್ಯೋಗ ನೇಮಕಾತಿಗೆ ಅರ್ಜಿ ಸಲ್ಲಿಸಲು ವಿದ್ಯಾವಂತ ನಿರುದ್ಯೋಗಿ ಯುವಕ-ಯುವತಿಯರಿಗೆ ಅವಕಾಶ ಕಲ್ಪಿಸಲಾಗಿದೆ. ಆದರೆ, ಅರ್ಜಿ ಸಲ್ಲಿಕೆಗೆ ಅಗತ್ಯವಿರುವ ಜಾತಿ, 371(ಜೆ), ಆದಾಯ, ನಿವಾಸಿ ಹಾಗೂ ಒಬಿಸಿ ಪ್ರಮಾಣ ಪತ್ರಗಳು ನಾಡ ಕಚೇರಿ ಮತ್ತು ಸಂಬಂಧಪಟ್ಟ ಕಚೇರಿಗಳಲ್ಲಿ ಸಮಯಕ್ಕೆ ಸರಿಯಾಗಿ ದೊರೆಯದೆ ವಿಳಂಬವಾಗುತ್ತಿವೆ ಎಂದು ಆರೋಪಿಸಲಾಗಿದೆ.

ಇದರಿಂದಾಗಿ ಅನೇಕ ಅರ್ಹ ಅಭ್ಯರ್ಥಿಗಳು ಸರ್ಕಾರಿ ಉದ್ಯೋಗದ ಅವಕಾಶದಿಂದ ವಂಚಿತರಾಗುವ ಭೀತಿ ಎದುರಾಗಿದೆ ಎಂದು ವೇದಿಕೆ ಆತಂಕ ವ್ಯಕ್ತಪಡಿಸಿದೆ. ವಿಶೇಷವಾಗಿ ಎಸ್ಸಿ-ಎ, ಎಸ್ಸಿ-ಬಿ, ಎಸ್ಟಿ, ಕೋಲಿ, ಎಸ್ಟಿ ಗೊಂಡ, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಹಾಗೂ ಸಾಮಾನ್ಯ ವರ್ಗ ಸೇರಿದಂತೆ ವಿವಿಧ ಸಮುದಾಯಗಳ ಅಭ್ಯರ್ಥಿಗಳಿಗೆ ಅಗತ್ಯ ದಾಖಲೆಗಳನ್ನು ವಿಳಂಬವಿಲ್ಲದೆ ವಿತರಿಸಬೇಕು ಎಂದು ಒತ್ತಾಯಿಸಲಾಗಿದೆ.

ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ಜಾತಿ ಹಾಗೂ ಮೀಸಲಾತಿ ಪ್ರಮಾಣ ಪತ್ರಗಳನ್ನು ಶೀಘ್ರವಾಗಿ ಮಂಜೂರು ಮಾಡಬೇಕು. ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಅಗತ್ಯವಿರುವ 371(ಜೆ) ಪ್ರಮಾಣ ಪತ್ರವನ್ನು ತ್ವರಿತವಾಗಿ ನೀಡಬೇಕು. ನಾಡ ಕಚೇರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಪ್ರಮಾಣ ಪತ್ರಗಳ ಮಂಜೂರಾತಿಯಲ್ಲಿ ವಿಳಂಬವಾಗದಂತೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು ಎಂದು ಆಗ್ರಹಿಸಲಾಗಿದೆ.

ಪ್ರಮಾಣ ಪತ್ರಗಳ ವಿಳಂಬದಿಂದಾಗಿ ಅರ್ಜಿ ಸಲ್ಲಿಸಲು ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಉದ್ಯೋಗ ನೇಮಕಾತಿಯ ಕೊನೆಯ ದಿನಾಂಕವನ್ನು ವಿಸ್ತರಿಸುವಂತೆ ಸರ್ಕಾರ ಹಾಗೂ ನೇಮಕಾತಿ ಪ್ರಾಧಿಕಾರಕ್ಕೆ ಶಿಫಾರಸು ಮಾಡಬೇಕು ಎಂದು ವೇದಿಕೆ ಮನವಿ ಮಾಡಿದೆ.

ಈ ಸಂದರ್ಭದಲ್ಲಿ ಕರ್ನಾಟಕ ಹೊಯ್ಸಳ ವೇದಿಕೆಯ ಜಿಲ್ಲಾಧ್ಯಕ್ಷ ಸಂತೋಷ್ ನಾಟೇಕರ್, ಕಲ್ಯಾಣ ಕರ್ನಾಟಕ ವಿಭಾಗದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಮೋರೆ, ಜಿಲ್ಲಾ ಉಪಾಧ್ಯಕ್ಷ ಸಿದ್ದು ಜಮಾದಾರ್, ಭಾಲ್ಕಿ ತಾಲೂಕು ಅಧ್ಯಕ್ಷ ತುಕಾರಾಂ ಕಾಸಲೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ಧಾರ್ಥ್ ಪ್ಯಾಗೆ, ಗ್ರಾಮೀಣ ಯುವ ಘಟಕದ ಅಧ್ಯಕ್ಷ ಅಶೋಕ್ ಸಾನೆ ಹಾಗೂ ರಾಹುಲ್ ಪ್ರಿನ್ಸ್ ಸೇರಿದಂತೆ ಇತರರು ಇದ್ದರು.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X