Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ರೈತರ ಜ್ವಲಂತ ಸಮಸ್ಯೆಗಳ...

Bidar | ರೈತರ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಬೀದರ್-ಕಲಬುರಗಿ ರಸ್ತೆ ತಡೆದು ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ21 Aug 2026 4:07 PM IST
share
Bidar | ರೈತರ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಬೀದರ್-ಕಲಬುರಗಿ ರಸ್ತೆ ತಡೆದು ಪ್ರತಿಭಟನೆ
ಸಾಲಮನ್ನಾ, ಎಕರೆಗೆ 50 ಸಾವಿರ ರೂ. ಬರ ಪರಿಹಾರಕ್ಕೆ ರೈತರ ಆಗ್ರಹ

ಬೀದರ್ : ಜಿಲ್ಲೆಯ ರೈತರ ವಿವಿಧ ಜ್ವಲಂತ ಸಮಸ್ಯೆಗಳನ್ನು ಕೂಡಲೇ ಬಗೆಹರಿಸುವಂತೆ ಆಗ್ರಹಿಸಿ ರೈತ ಸಂಘಟನೆಗಳು, ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನಗರದ ನೌಬಾದ್‌ನ ಬಸವೇಶ್ವರ್ ವೃತ್ತದಲ್ಲಿ‌ ಬೀದರ್-ಕಲಬುರಗಿ ಹಾಗೂ ಬೀದರ್-ಭಾಲ್ಕಿಯ ಪ್ರಮುಖ ರಸ್ತೆಯನ್ನು ತಡೆದು ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೆ ರಸ್ತೆ ತಡೆದು ಪ್ರತಿಭಟನೆ ನಡೆಸಿದ ರೈತರು, ಸರಕಾರದ ವಿರುದ್ಧ ಘೊಷಣೆಗಳು ಕೂಗಿದರು. ರಸ್ತೆ ತಡೆ ನಡೆಸಿದ್ದರಿಂದಾಗಿ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಯಿತು. ಕೆಲ ವಾಹನಗಳು ಪರ್ಯಾಯ ಮಾರ್ಗಗಳ ಮೂಲಕ ಸಂಚರಿಸಿದವವು. ಪ್ರತಿಭಟನೆ ಮುಗಿದ ನಂತರದಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಮಂತ್ ಬಿರಾದಾರ್‌ ಅವರು ಮಾತನಾಡಿ, ರೈತರು ಪ್ರತಿವರ್ಷ ಅತಿವೃಷ್ಟಿ, ಅನಾವೃಷ್ಟಿ, ಬೆಳೆಗಳಿಗೆ ವೈಜ್ಞಾನಿಕ ಬೆಲೆ ದೊರೆಯದಿರುವುದು ಸೇರಿದಂತೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ವರ್ಷವೂ ಮುಂಗಾರು ಮಳೆ ಸಮರ್ಪಕವಾಗಿ ಬಾರದ ಹಿನ್ನೆಲೆಯಲ್ಲಿ ಬಿತ್ತನೆ ಮಾಡಿರುವ ಬೆಳೆಗಳು ಒಣಗುತ್ತಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದರು.

ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಸಲ್ಲಿಸಿದ ಮನವಿಯಲ್ಲಿ, ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಪರಿಸ್ಥಿತಿಯನ್ನು ಪರಿಗಣಿಸಿ ಬೀದರ್ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು. ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಹಾಗೆಯೇ ಪ್ರತಿ ಎಕರೆ ಭೂಮಿಗೆ 50 ಸಾವಿರ ರೂ. ಪರಿಹಾರ ನೀಡಬೇಕು ಎಂದು ಅವರು ಆಗ್ರಹಿಸಲಾಗಿದೆ.

ಬಿಎಸ್‌ಎಸ್‌ಕೆ ಸಕ್ಕರೆ ಕಾರ್ಖಾನೆಯನ್ನು ಮಾರಾಟ ಮಾಡದೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ 2026-27ನೇ ಸಾಲಿನಲ್ಲಿ ಕಾರ್ಖಾನೆ ಪುನರ್‌ ಆರಂಭಿಸಬೇಕು. ಕಾರ್ಮಿಕರ ಬಾಕಿ ವೇತನ ಸೇರಿದಂತೆ ಶಾಸನಬದ್ಧವಾಗಿ ಪಾವತಿಸಬೇಕಾದ ಎಲ್ಲ ಹಣವನ್ನು ಕೂಡಲೇ ಪಾವತಿಸಬೇಕು. ಕಾರಂಜಾ ಮುಳುಗಡೆ ಸಂತ್ರಸ್ತರಿಗೆ ವೈಜ್ಞಾನಿಕ ರೀತಿಯಲ್ಲಿ ಸೂಕ್ತ ಪರಿಹಾರ ನೀಡಬೇಕು. ಏತ ನೀರಾವರಿ ಯೋಜನೆಯ ಕಾಲುವೆಗಳಿಗೆ ನೀರು ಹರಿಸಿ ರೈತರ ಕೃಷಿಗೆ ಅನುಕೂಲ ಕಲ್ಪಿಸಬೇಕು ಎಂದು ಆಗ್ರಹಿಸಲಾಯಿತು.

ಎಂಜಿಎಸ್‌ಎಸ್‌ಕೆ ಹೊರತುಪಡಿಸಿ ಜಿಲ್ಲೆಯ ಇತರ ಸಕ್ಕರೆ ಕಾರ್ಖಾನೆಗಳು ರೈತರಿಗೆ ಬಾಕಿ ಉಳಿಸಿಕೊಂಡಿರುವ ಹಣವನ್ನು ಶೀಘ್ರ ಪಾವತಿಸುವಂತೆ ಕ್ರಮ ಕೈಗೊಳ್ಳಬೇಕು. ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲಿನ ವೇಳೆಯಲ್ಲಿ ಏಳು ಗಂಟೆಗಳ ಕಾಲ ನಿರಂತರ ವಿದ್ಯುತ್ ಪೂರೈಸಬೇಕು. ಕಾಡು ಪ್ರಾಣಿಗಳಿಂದ ರೈತರ ಬೆಳೆಗಳಿಗೆ ಆಗುತ್ತಿರುವ ಹಾನಿ ತಡೆಯಲು ಶಾಶ್ವತ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಲಾಗಿದೆ.

ರೈತರ ಸಮಸ್ಯೆಗಳಿಗೆ ತಕ್ಷಣ ಪರಿಹಾರ ದೊರೆಯದಿದ್ದರೆ ಮುಂದಿನ ದಿನಗಳಲ್ಲಿ ಜನರು, ಜಾನುವಾರುಗಳು ಹಾಗೂ ಎತ್ತಿನ ಬಂಡಿಗಳೊಂದಿಗೆ ರಾಷ್ಟ್ರೀಯ ಹೆದ್ದಾರಿಗೆ ಇಳಿದು ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಈ ವೇಳೆ ರೈತ ಮುಖಂಡರು ಎಚ್ಚರಿಕೆ ನೀಡಿದರು.

ಈ ಪ್ರತಿಭಟನೆಯಲ್ಲಿ ಜಿಲ್ಲಾ ಗೌರವಾಧ್ಯಕ್ಷ ಸಿದ್ರಾಮಪ್ಪ ಆಣದೂರೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದಗ ಸ್ವಾಮಿ ಸಿರ್ಸಿ, ರಾಜ್ಯ ಕಾರ್ಯದರ್ಶಿ ಮಹಿಳಾ ಘಟಕದ ಶೋಭಾವತಿ ಕಾರಭಾರಿ, ರಾಜ್ಯ ಪ್ರತಿನಿಧಿ ಶೇಷರಾವ್ ಕಣಜಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಮಲ್ಲನಗೌಡ ಪಾಟೀಲ್, ಕಾರಂಜಾ ಮುಳುಗಡೆ ಹಿತರಕ್ಷಣಾ ಸಮಿತಿ ನಿರ್ದೇಶಕ ರಾಜಕುಮಾರ್ ಕೋಸಂ, ಕಾರಂಜಾ ಮುಳುಗಡೆ ಸಂತ್ರಸ್ತರ ಅಧ್ಯಕ್ಷ ಚಂದ್ರಶೇಖರ್ ಪಾಟೀಲ್, ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ್ ಜಮಖಂಡೆ, ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಶಂಕರೆಪ್ಪ ಪಾರಾ, ಬಿಎಸ್‌ಎಸ್‌ಕೆ ಕಾರ್ಖಾನೆಯ ಎಸ್ಸಿ, ಎಸ್ಟಿ ಯೂನಿಯನ್ ಅಧ್ಯಕ್ಷ ಮಲ್ಲಿಕಾರ್ಜುನ್ ಭಂಡಾರಿ, ಬಿಎಸ್‌ಎಸ್‌ಕೆ ಕಾರ್ಮಿಕ ಸಂಘದ ಅಧ್ಯಕ್ಷ ಅರ್ಜುನ್ ತಮಗಿಕರ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮಹಾನಂದಾ ದೇಶಮುಖ, ಮಹಿಳಾ ಘಟಕದ ಬಸವಕಲ್ಯಾಣ ತಾಲ್ಲೂಕು ಅಧ್ಯಕ್ಷೆ ವಿದ್ಯಾವತಿ ಶೇರಿಕಾರ್, ಔರಾದ್ ತಾಲ್ಲೂಕಾಧ್ಯಕ್ಷೆ ಭಾಗ್ಯಶ್ರೀ ದೇಶಮುಖ, ಭಾಲ್ಕಿ ತಾಲೂಕಾಧ್ಯಕ್ಷೆ ಸುವರ್ಣಾ ಬಳತೆ, ವನೀತಾ ಮಾಶೆಟ್ಟಿ, ನೀಲಾಂಬಿಕಾದೇವಿ ಘಳಗೆ, ಪಾರ್ವತಿ ಬುಯ್ಯಾ ಸೇರಿದಂತೆ ಸಾವಿರಾರು ರೈತರು ಭಾಗವಹಿಸಿದ್ದರು.

Tags

Bidarfarmersprotest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X