Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಚಿಕಿತ್ಸೆ ಹಾಗೂ ಜಾಗೃತಿಯಿಂದ...

ಬೀದರ್ | ಚಿಕಿತ್ಸೆ ಹಾಗೂ ಜಾಗೃತಿಯಿಂದ ಹೆಚ್.ಐ.ವಿ ನಿಯಂತ್ರಣ ಮಾಡಬಹುದು : ಎಂ.ಡಿ ಅಹಮದುದ್ದಿನ್

ವಾರ್ತಾಭಾರತಿವಾರ್ತಾಭಾರತಿ26 Dec 2024 8:10 PM IST
share
Photo of Program

ಬೀದರ್ : ಕಾಲ ಕಾಲಕ್ಕೆ ಚಿಕಿತ್ಸೆ ಹಾಗೂ ಜಾಗೃತಿಯಿಂದ ಹೆಚ್.ಐ.ವಿ ಸೊಂಕು ತಡೆಗಟ್ಟಬಹುದು ಎಂದು ಬ್ರಿಮ್ಸ್ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕ ಎಂ.ಡಿ ಅಹಮದುದ್ದಿನ್ ಅಭಿಪ್ರಾಯಪಟ್ಟರು.

ನಗರದ ಭಾರತೀಯ ಕುಟುಂಬ ಯೋಜನಾ ಸಂಘ(ಎಫ್.ಪಿ.ಎ.ಐ) ನಲ್ಲಿ ಇತ್ತೀಚೆಗೆ ಲಾಲ್ ಬಹದ್ದೂರ್ ಶಿಕ್ಷಣ ಸಂಸ್ಥೆ, ಶರಣ ತತ್ವ ಪ್ರಸಾರ ಸಮಿತಿ ,ನ್ಯೂ ಮದರ್ ತೆರೇಸಾ, ಫ್ಯಾಮಿಲಿ ಪ್ಲಾನಿಂಗ್ ಅಸೊಶಿಯಶನ್ ಆಫ್ ಇಂಡಿಯಾ ವತಿಯಿಂದ ಹಮ್ಮಿಕೊಂಡ ʼಜಿಲ್ಲಾ ಮಟ್ಟದ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮʼ ಉದ್ಘಾಟಿಸಿ ಅವರು ಮಾತನಾಡಿದರು.

ಹೆಚ್.ಐ.ವಿ ಒಂದು ಸಾಂಕ್ರಾಮಿಕ ಪಿಡುಗು ಇಲ್ಲದಿದ್ದರೂ ಅದರಿಂದ ಜಾಗ್ರತೆ ವಹಿಸುವುದು ಅಗತ್ಯವಾಗಿದೆ. ಹೆಚ್.ಐ.ವಿ ಸೊಂಕಿತರೊಂದಿಗೆ ಓಡಾಡುವುದು, ಕೈ ಕುಲುಕುವುದು, ಹತ್ತಿರ ಕೂಳಿತುಕೊಳ್ಳುವುದರಿಂದ ಇದು ಹರಡುವುದಿಲ್ಲ. ಲೈಂಗಿಕ ಸಂಪರ್ಕ, ರೋಗಿಯ ರಕ್ತವು ನಮ್ಮ ರಕ್ತದೊಂದಿಗೆ ಮಿಶ್ರಿತವಾಗುವುದರ ಜೊತೆಗೆ ಸೋಂಕಿತ ವ್ಯಕ್ತಿ ಬಳಿಸಿದ ಮಾರಕಾಸ್ತ್ರ, ಕ್ಷೌರ ಉಪಕರಣಗಳು, ಸಿರೆಂಜ್ ಬಳಸುವುದರಿಂದ ಈ ಮಹಾಮಾರಿ ರೋಗ ಹರಡುತ್ತದೆ ಎಂದು ಹೇಳಿದರು.

ಭಾರತೀಯ ಕುಟುಂಬ ಯೋಜನಾ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ್ ಪಾಟೀಲ್ ಮಾತನಾಡಿ, ಹೆಚ್.ಐ.ವಿ ಇರುವ ಸೊಂಕಿತರಿಗೆ ಎಫ್.ಪಿ.ಎ.ಐ ಸುಮಾರು 500ಕ್ಕೂ ಅಧಿಕ ಶಸ್ತ್ರ ಚಿಕಿತ್ಸೆಗಳನ್ನು ಮಾಡಿದೆ. ನಮ್ಮಲ್ಲಿರುವ ಡಾ.ಲಕಶೆಟ್ಟಿಯವರಂಥ ವೈದ್ಯರಿಂದ ಇದು ಸಾಧ್ಯವಾಗಿದೆ. ಇಂತಹ ಮೇಧಾವಿಗಳಿಗೆ ಜಿಲ್ಲಾಡಳಿತ, ಜನಪ್ರತಿನಿಧಿ ಹಾಗೂ ಸಂಘ-ಸಂಸ್ಥೆಗಳು ಗುರುತಿಸಿ ಸನ್ಮಾನಿಸುವುದು ಅಗತ್ಯವಾಗಿದೆ ಎಂದರು.

ಜಿಲ್ಲಾ ಏಡ್ಸ್ ತಡೆಗಟ್ಟುವ ಘಟಕದ ಜಿಲ್ಲಾ ಮೇಲ್ವಿಚಾರಕ ಸೂರ್ಯಕಾಂತ್ ಸಂಗೋಳ್ಕರ್ ಅವರು ಜಿಲ್ಲೆಯ ಹೆಚ್.ಐ.ವಿ ಸೊಂಕಿತರ ಅಂಕಿ ಅಂಶ ವಿವರಿಸಿದರು. 2030ರೊಳಗೆ ಭಾರತ ಏಡ್ಸ್ ಮುಕ್ತ ದೇಶವಾಗಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೈ ಜೋಡಿಸಿವೆ. ಕಳೆದೆರಡು ವರ್ಷಗಳಿಂದ ಈಚೆಗೆ ಹೆಚ್.ಐ.ವಿ ಸೊಂಕಿತರಿಗೆ ಹುಟ್ಟುವ ಮಕ್ಕಳು ಹೆಚ್.ಐ.ವಿ ಯಿಂದ ಮುಕ್ತರಾಗಿ ಹುಟ್ಟುತ್ತಿರುವುದು ಸಮಾಧಾನಕರ ಬೆಳವಣಿಗೆಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ಡಿ.ಕೆ ಗಣಪತಿ, ಹಿರಿಯ ಸಾಹಿತಿ ಎಂ.ಜಿ ದೇಶಪಾಂಡೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಸ್ವಾಮಿ, ಪ್ರಮುಖರಾದ ವೀರಭದ್ರಪ್ಪ ಉಪ್ಪಿನ್, ಸುನಿಲಕುಮಾರ್ ಕುಲಕರ್ಣಿ, ಪಾಂಡುರಂಗ್ ಬೆಲ್ದಾರ್, ವಿಶ್ವನಾಥ ಸ್ವಾಮಿ, ಸಂಜೀವಕುಮಾರ್ ಸ್ವಾಮಿ, ಬಸವರಾಜ್ ಖಂಡ್ರೆ, ಶ್ರೀನಿವಾಸ್ ಬಿರಾದಾರ್, ಸಂತೋಷ್ ಶಿಂಧೆ, ಸುಬ್ಬಯ್ಯ ಸ್ವಾಮಿ, ರಿಯಾಜ್ ಪಾಶಾ ಕೊಳ್ಳೂರ್ ಹಾಗೂ ಇತರರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X