Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಯುವಪೀಳಿಗೆಗೆ ಸಂಸ್ಕೃತಿ...

Bidar | ಯುವಪೀಳಿಗೆಗೆ ಸಂಸ್ಕೃತಿ ಪರಿಚಯಿಸುವುದು ಅಗತ್ಯ: ರಘುನಾಥರಾವ್ ಮಲ್ಕಾಪೂರೆ

ವಾರ್ತಾಭಾರತಿವಾರ್ತಾಭಾರತಿ19 July 2026 7:39 PM IST
share
Bidar | ಯುವಪೀಳಿಗೆಗೆ ಸಂಸ್ಕೃತಿ ಪರಿಚಯಿಸುವುದು ಅಗತ್ಯ: ರಘುನಾಥರಾವ್ ಮಲ್ಕಾಪೂರೆ
ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸಂಭ್ರಮ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಬೀದರ್: ಆಧುನಿಕ ಜೀವನಶೈಲಿಯಲ್ಲಿ ಬದುಕುತ್ತಿರುವ ಜನರು ತಮ್ಮ ಮೂಲ ಸಂಸ್ಕೃತಿಯನ್ನು ಮರೆಯುತ್ತಿರುವುದು ವಿಷಾದನೀಯ. ಇಂದಿನ ಯುವಪೀಳಿಗೆಗೆ ತಲೆತಲಾಂತರಗಳಿಂದ ಬಂದಿರುವ ನಮ್ಮ ಸಂಸ್ಕೃತಿಯನ್ನು ಪರಿಚಯಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಮಾಜಿ ಸಭಾಪತಿ ರಘುನಾಥರಾವ್ ಮಲ್ಕಾಪೂರೆ ಹೇಳಿದರು.

ನಗರದ ಪೂಜ್ಯ ಡಾ. ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಗೊಂಡ ವಿದ್ಯಾರ್ಥಿ ಸಂಘದ ಸಂಯುಕ್ತಾಶ್ರಯದಲ್ಲಿ ಭಾನುವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸಂಭ್ರಮ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ನೀಡುವುದು ಅತ್ಯಂತ ಮುಖ್ಯ. ಅವರ ಸರ್ವಾಂಗೀಣ ಬೆಳವಣಿಗೆಯಲ್ಲಿ ಪಾಲಕರ ಪಾತ್ರ ಮಹತ್ವದ್ದಾಗಿದೆ. ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಪ್ರತಿಭಾ ಪುರಸ್ಕಾರದ ಮೂಲಕ ಪ್ರೋತ್ಸಾಹಿಸುವುದು ಶ್ಲಾಘನೀಯ ಕಾರ್ಯವಾಗಿದ್ದು, ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತವೆ ಎಂದು ಹೇಳಿದರು.

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಬಾಬುರಾವ್ ಮಲ್ಕಾಪೂರೆ ಮಾತನಾಡಿ, ಸಮಾಜದ ಮಕ್ಕಳು ಮುಂದಿನ ದಿನಗಳಲ್ಲಿ ಐಎಎಸ್, ಐಪಿಎಸ್ ಸೇರಿದಂತೆ ಉನ್ನತ ಆಡಳಿತಾತ್ಮಕ ಹುದ್ದೆಗಳನ್ನು ಅಲಂಕರಿಸಿ ದೇಶಸೇವೆಯಲ್ಲಿ ತೊಡಗಿಸಿಕೊಳ್ಳಬೇಕು. ಶಿಕ್ಷಣ ಮತ್ತು ಕಠಿಣ ಪರಿಶ್ರಮದ ಮೂಲಕ ಸಾಧನೆ ಮಾಡಿದಾಗ ಅದು ಕೇವಲ ವೈಯಕ್ತಿಕ ಯಶಸ್ಸಾಗದೇ, ಕುಟುಂಬ ಹಾಗೂ ಸಮಾಜಕ್ಕೂ ಕೀರ್ತಿ ತಂದುಕೊಡುತ್ತದೆ ಎಂದರು.

ವಿದ್ಯಾರ್ಥಿಗಳು ಸ್ಪಷ್ಟ ಗುರಿ ಹೊಂದಿ ನಿರಂತರ ಪ್ರಯತ್ನದ ಮೂಲಕ ಉನ್ನತ ಸ್ಥಾನವನ್ನು ಗಳಿಸಬೇಕು ಎಂದು ಅವರು ಸಲಹೆ ನೀಡಿದರು.

ವಿಶೇಷ ಉಪನ್ಯಾಸ ನೀಡಿದ ಪ್ರಕಾಶ್ ಎಸ್. ದೇಶಮುಖ, ಮಕ್ಕಳನ್ನು ಮೈಗಳ್ಳರನ್ನಾಗಿ ಬೆಳೆಸದೆ ಪರಿಶ್ರಮಜೀವಿಗಳಾಗಿ ರೂಪಿಸುವ ಜವಾಬ್ದಾರಿ ಪಾಲಕರು ಮತ್ತು ಶಿಕ್ಷಕರ ಮೇಲಿದೆ. ಪ್ರತಿಯೊಬ್ಬರೂ ಅಹಂಕಾರ ಬಿಟ್ಟು ವಿನಯ, ಪ್ರೀತಿ ಮತ್ತು ಮಾನವೀಯತೆಯಿಂದ ಬದುಕಬೇಕು ಎಂದು ಹೇಳಿದರು.

ಮಕ್ಕಳು ತಮ್ಮ ಗುರಿಯತ್ತ ನಿರಂತರ ಪರಿಶ್ರಮ ಮತ್ತು ಶ್ರದ್ಧೆಯಿಂದ ಮುನ್ನಡೆಯಬೇಕು. ಕಠಿಣ ಪರಿಶ್ರಮಕ್ಕೆ ಪರ್ಯಾಯವಿಲ್ಲ ಎಂಬುದನ್ನು ಅರಿತು, ಶಿಕ್ಷಣದ ಜೊತೆಗೆ ಉತ್ತಮ ವ್ಯಕ್ತಿತ್ವ ಬೆಳೆಸಿಕೊಂಡು ಜೀವನದಲ್ಲಿ ಉನ್ನತ ಸಾಧನೆ ಮಾಡಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷಕುಮಾರ್ ಜೋಳದಾಪಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಜಿ.ಪಂ. ಮಾಜಿ ಅಧ್ಯಕ್ಷೆ ಗೀತಾ ಚೀದ್ರಿ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ಡಾ. ಸಂಜೀವಕುಮಾರ್ ಅತಿವಾಳೆ, ಕರ್ನಾಟಕ ಜಾನಪದ ಆಕಾಡೆಮಿ ಸದಸ್ಯ ವಿಜಯಕುಮಾರ್ ಸೋನಾರೆ, ಮಹಾನಗರ ಪಾಲಿಕೆಯ ಸದಸ್ಯ ಹನಮಂತ್ ಮಲ್ಕಾಪುರ್, ವೈದ್ಯ ಬಾಬುರಾವ್ ಮರಖಲ್, ಡಾ. ಶ್ರೀಕಾಂತ್ ಚಿಂಚೋಳಿಕರ್, ಡಾ. ಜಿ.ಬಿ ಮಲ್ಲಿಕಾರ್ಜುನ್, ಪೀರಪ್ಪಾ ಯರನಳ್ಳಿ, ರತಿಕಾಂತ್ ಜೋಜನಾ, ಶಂಭುಲಿಂಗ್ ವಾಲ್ದೊಡ್ಡಿ, ದೇವಪ್ಪಾ ಚಾಂಬೋಳೆ, ಬಾಬುರಾವ್ ಮಲ್ಕಾಪುರ್, ತುಕಾರಾಮ್ ಚಿದ್ರಿ, ಶಿವಕುಮಾರ್ ಉಪ್ಪೆ, ದೀಪಕ್ ಚೀದ್ರಿ, ತುಕಾರಾಮ್ ಔದತಪುರ್, ಬಾಲಾಜಿ ಜಬಾಡೆ, ಕಲ್ಲಪ್ಪಾ ರಾಯಗೊಂಡ್, ಸುನೀಲ್ ಚಿಲ್ಲರ್ಗಿ, ಗೊವಿಂದ್ ದುರ್ಗೆ, ಶರಣಪ್ಪಾ ಮಲಗೊಂಡ್ ಹಾಗೂ ಪ್ರವೀಣ್ ಸೇರಿದಂತೆ ಇತರರು ಇದ್ದರು. ವಿಜಯಕುಮಾರ್ ಬ್ಯಾಲಹಳ್ಳಿ ಸ್ವಾಗತಿಸಿದರು. ದೇವಿದಾಸ್ ಜೋಶಿ ನಿರೂಪಿಸಿದರು. ಮಲ್ಲಿಕಾರ್ಜುನ್ ಮುರ್ಕೆ ವಂದಿಸಿದರು.

Tags

CultureBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X