Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಮನುಸ್ಮೃತಿ ಮಹಿಳಾ ವಿರೋಧಿ...

ಬೀದರ್ | ಮನುಸ್ಮೃತಿ ಮಹಿಳಾ ವಿರೋಧಿ ಮಾತ್ರವಲ್ಲ ಇಡೀ ಮಾನವ ವಿರೋಧಿಯಾಗಿದೆ : ಪಿಂಟು ಕಾಂಬ್ಳೆ

ವಾರ್ತಾಭಾರತಿವಾರ್ತಾಭಾರತಿ25 Dec 2024 7:00 PM IST
share
Photo of Protest

ಬೀದರ್ : ಮನುಸ್ಮೃತಿ ಮಹಿಳಾ ವಿರೋಧಿ ಮಾತ್ರವಲ್ಲ, ಇಡೀ ಮಾನವ ವಿರೋಧಿಯಾಗಿದೆ ಎಂದು ಮಾನವ ಬಂಧುತ್ವ ವೇದಿಕೆ ತಾಲೂಕಾ ಸಂಚಾಲಕ ಪಿಂಟು ಕಾಂಬ್ಳೆ ಅಭಿಪ್ರಾಯಪಟ್ಟರು.

ಬಸವಕಲ್ಯಾಣದಲ್ಲಿ ಮನುಸ್ಮೃತಿ ಪ್ರತಿಕೃತಿ ದಹನ ದಿನ ಆಚರಣೆ ಮಾಡಲಾಯಿತು. ಡಾ.ಬಿ.ಆರ್.ಅಂಬೇಡ್ಕರ್ ಅವರು 1927ರ ಡಿ.25 ರಂದು ಮನುಸ್ಮೃತಿ ದಹಿಸಿದ ಘಟನೆಯ ಸ್ಮರಣಾರ್ಥವಾಗಿ ನಗರದ ದಲಿತ ಮುಖಂಡರಿಂದ ಅಂಬೇಡ್ಕರ್ ಪ್ರತಿಮೆ ಎದುರು ಮನುಸ್ಮೃತಿ ಪ್ರತಿಕೃತಿ ದಹನ ದಿನ ಆಚರಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಈ ವೇಳೆ ಮಾತನಾಡಿದ ಪಿಂಟು ಕಾಂಬಳೆ ಮನುಸ್ಮೃತಿ ಮಹಿಳಾ ವಿರೋಧಿ ಮಾತ್ರವಲ್ಲ, ಮಾನವ ವಿರೋಧಿಯೂ ಆಗಿದೆ. ಅಂಬೇಡ್ಕರ್ ಅವರು ಪುಸ್ತಕಗಳನ್ನು ಅತಿ ಹೆಚ್ಚು ಪ್ರೀತಿಸುವವರು ಆದರೆ ಈ ಮನುಸ್ಮೃತಿಯ ಪುಸ್ತಕವನ್ನು ಸುಟ್ಟು ಹಾಕಿದ್ದರು. ಏಕೆಂದರೆ ಈ ದೇಶದ ಮೂಲ ನಿವಾಸಿಗಳನ್ನು ಗುಲಾಮರನ್ನಾಗಿ ಮಾಡುವ ಹುನ್ನಾರ ಅದರಲ್ಲಿ ಅಡಗಿದೆ ಎಂಬುದನ್ನು ಅರಿತಿದ್ದ ಅವರು ಅದನ್ನು ಬಹಿರಂಗವಾಗಿ ದಹಿಸಿದ್ದರು. ದೇಶ ಸ್ವತಂತ್ರಗೊಂಡಾಗ ಸಂವಿಧಾನ ಕೊಟ್ಟು ನಮ್ಮೆಲ್ಲರ ಬಾಳಿಗೆ ಬೆಳಕು ನೀಡಿದ್ದಾರೆ ಎಂದು ಹೇಳಿದರು.

ದಲಿತ ಹಿರಿಯ ಮುಖಂಡರಾದ ನರಸಿಂಗ ಕಾಂಬಳೆ ರವರು ಅಂಬೇಡ್ಕರ್ ವೃತ್ತದಲ್ಲಿ ಮನುಸ್ಮೃತಿಯ ಪ್ರತಿಕೃತಿಗೆ ಪೆಟ್ರೋಲ್ ಸುರಿದು ದಹಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ವಾಯಿಸ್ ಆಫ್ ಅಂಬೇಡ್ಕರ್ ರಾಜ್ಯಾಧ್ಯಕ್ಷ ಸುರೇಶ ಮೋರೆ ಮಾತನಾಡಿ, ದೇಶದ ಜನರಿಗೆ ಅಸ್ಪೃಶ್ಯರೆಂಬ ಹಣೆಪಟ್ಟಿ ಕಟ್ಟಿ ಸಾವಿರಾರು ವರ್ಷಗಳಿಂದ ಪಶು–ಪಕ್ಷಿಗಳಿಗಿಂತಲೂ ಕೀಳಾಗಿ ನಡೆಸಿಕೊಂಡ ಮನುಸ್ಮೃತಿಯನ್ನು ದಹಿಸಿ ಡಾ.ಅಂಬೇಡ್ಕರ್ ಪ್ರತಿಭಟಿಸಿದ್ದರು. ಇದೀಗ ನಾವು ಮನುಸ್ಮೃತಿಯ ಪ್ರತಿಕೃತಿ ದಹಿಸುವ ಮೂಲಕ ಮನುಸ್ಮೃತಿಯನ್ನು ಪೋಷಿಸಿಕೊಂಡು ಬರುತ್ತಿರುವ ಸಂಘ ಪರಿವಾರದ ವಿಚಾರಧಾರೆಗಳನ್ನು ವಿರೋಧಿಸುತ್ತಿದ್ದೇವೆ ಎಂದರು.

ಬಿಎಸ್ಪಿ ತಾಲ್ಲೂಕು ಅಧ್ಯಕ್ಷ ಶಂಕರ ಫುಲೆ ಮಾತನಾಡಿ, ಈಗ ನಾವು ಮನುಸ್ಮೃತಿ ಪ್ರತಿಕೃತಿ ದಹಿಸುವ ಮೂಲಕ ದೇಶದಲ್ಲಿ ಮುಂದೆ ಬ್ರಾಹ್ಮಣ್ಯಶಾಹಿ ಮನಸ್ಥಿತಿ ಬಿತ್ತಲು ಬಿಡುವುದಿಲ್ಲ ಎಂಬುದರ ಸಂಕೇತವನ್ನು ನೀಡಿದ್ದೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಸೇನೆ ಸಂಘಟನೆಯ ಅಧ್ಯಕ್ಷ ಸಂದೀಪ್ ಮುಕಿಂದೆ, ದತ್ತಾತ್ರೇಯ ಸೂರ್ಯವಂಶಿ, ದಶರಥ್ ಕೋಟಮಾಳೆ, ಝರನಾಥ್ ಮಾಲೆ, ರವೀಂದ್ರ ಸಿಂಗಾರೆ, ಅಂಬಾರಾಯ ಶೃಂಗೇರಿ, ನಿತ್ಯಾನಂದ್ ಮಂಠಾಳಕರ್, ಸಿಕಂದರ್ ಶಿಂಧೆ, ಘಾಳೆಪ್ಪಾ, ಚಂದ್ರಕಾಂತ್ ಮಂಠಾಳಕರ್, ವಿಜಯಕುಮಾರ್ ಡಾಂಗೆ, ಜೈಭೀಮ್ ಕೋಲೆ, ಸಾವನ್ ಗಾಯಕವಾಡ್, ಎಂ ಡಿ ರಫೀಕ್, ರಾಜೇಶ್ ಮೇತ್ರೆ, ಸಾಗರ್ ರಾಯಗೊಳ್ ಹಾಗೂ ದೇವೇಂದ್ರ ಅಟ್ಟೂರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X