Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಯಾವುದೇ ಧರ್ಮ ಅಪಾಯದಲ್ಲಿಲ್ಲ,...

ಬೀದರ್ | ಯಾವುದೇ ಧರ್ಮ ಅಪಾಯದಲ್ಲಿಲ್ಲ, ಸಂವಿಧಾನ ಅಪಾಯದಲ್ಲಿದೆ : ಲಕ್ಷ್ಮಣ ಯಾದವ್

ವಾರ್ತಾಭಾರತಿವಾರ್ತಾಭಾರತಿ27 Jan 2025 11:12 AM IST
share
Photo of Program

ಬೀದರ್ : ಪ್ರಸ್ತುತ ಸಮಯದಲ್ಲಿ ಯಾವುದೇ ಧರ್ಮಗಳು ಅಪಾಯದಲ್ಲಿಲ್ಲ, ಬದಲಾಗಿ ನಮ್ಮ ದೇಶದ ಸಂವಿಧಾನ ಅಪಾಯದಲ್ಲಿದೆ. ಸಂವಿಧಾನ ಅಪಾಯದಲ್ಲಿದ್ದರೆ ನಾವು ಅಪಾಯದಲ್ಲಿರುತ್ತೇವೆ. ಹಾಗಾಗಿ ನಾವೆಲ್ಲರೂ ಒಗ್ಗಟ್ಟಾಗಿ ಸಂವಿಧಾನ ರಕ್ಷಣೆ ಮಾಡಬೇಕಾಗಿದೆ ಎಂದು ವಿಚಾರವಾದಿ ಡಾ.ಲಕ್ಷ್ಮಣ ಯಾದವ್ ತಿಳಿಸಿದ್ಧಾರೆ.

ಜ.26ರಂದು ನಗರದ ಅಂಬೇಡ್ಕರ್ ವೃತ್ತದಲ್ಲಿ ನಡೆದ 76ನೇ ಗಣರಾಜ್ಯೋತ್ಸವ ಭಾರತದ ಸಂವಿಧಾನ ಜಾರಿಯಾದ ಸಂಭ್ರಮ, ಸಂವಿಧಾನ ಮತ್ತು ಪ್ರಜಾಪ್ರಭುತ್ವ ಜನ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು, ಯುವಕರು ಇತಿಹಾಸ ತಿಳಿದುಕೊಂಡು ಸಮ ಸಮಾಜ ನಿರ್ಮಾಣ ಮಾಡಲು ಹೋರಾಟ ಮಾಡಬೇಕು ಎಂದು ಹೇಳಿದರು.

ಸಂವಿಧಾನದಲ್ಲಿ ದಲಿತರಿಗೆ ಮಾತ್ರ ಹಕ್ಕು ನೀಡಲಿಲ್ಲ. ಅದರಲ್ಲಿ ಎಲ್ಲ ಭಾರತೀಯರಿಗೆ ಹಕ್ಕು ಒದಗಿಸಿ ಕೊಡಲಾಗಿದೆ. ಸಂವಿಧಾನವು ಮೇಲು ಕೀಳು ಎನ್ನುವ ಭೇದ ಭಾವ ನಾಶಗೊಳಿಸಿ ಸಮಾನತೆ ಸಾರಿದೆ. ಇದರಿಂದಾಗಿ ಇವತ್ತಿಗೂ ಸಮಾನತೆ ಬಯಸದವರು ಸಂವಿಧಾನವನ್ನು ತಮ್ಮ ವಿರೋಧಿಯಾಗಿ ತಿಳಿದುಕೊಳ್ಳುತ್ತಾರೆ. ಇಂಥವರೇ ಸಂವಿಧಾನಕ್ಕೆ ಅಪಾಯಕಾರಿ. ಇಂತಹ ಜನರನ್ನು ಗುರುತಿಸುವುದು ಅಗತ್ಯ ಇದೆ. ಅವರನ್ನು ಗುರುತಿಸದೆ, ಸಂವಿಧಾನಕ್ಕೆ ಹೂವಿನ ಹಾರ ಹಾಕಿ ಪೂಜಿಸುವುದರಿಂದ ಸಂವಿಧಾನ ಉಳಿಸಲು ಸಾಧ್ಯವಿಲ್ಲ. ಸಂವಿಧಾನವನ್ನು ಸಾಮಾನ್ಯ ವ್ಯಕ್ತಿಯವರೆಗೂ ತಲುಪಿಸಿ, ಪ್ರತಿಯೊಬ್ಬರ ಮನಸಲ್ಲಿ ಇಳಿಸಿದಾಗ ಮಾತ್ರ ಸಂವಿಧಾನದ ರಕ್ಷಣೆ ಸಾಧ್ಯವಿದೆ ಎಂದು ತಿಳಿಸಿದರು.

ಡಾ.ಜಯದೇವಿ ಗಾಯಕವಾಡ್ ಮಾತನಾಡಿ, ಮನುವಾದಿಗಳು, ಆರೆಸ್ಸೆಸ್ ಮುಖಂಡರು ಸೇರಿ ಈ ದೇಶದಲ್ಲಿ ಮತ್ತೆ ವರ್ಣ ವ್ಯವಸ್ಥೆ, ಜಾತಿ ಪದ್ಧತಿ ಹುಟ್ಟು ಹಾಕಿ, ಹೆಣ್ಣನ್ನು ಕೇವಲ ನಾಲ್ಕು ಗೋಡೆ ಮಧ್ಯದಲ್ಲಿ ಬಂಧಿಸಿ ಅವರನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಬೇಕು ಎಂದು ಅವರು ಈ ದೇಶದಲ್ಲಿ ಮತ್ತೊಂದು ಹೊಸ ಸಂವಿಧಾನ ಬರೆಯಲು ಸಜ್ಜಾಗಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

ಸಂವಿಧಾನದಲ್ಲಿ ಎಲ್ಲ ಸಮುದಾಯದ ಮಹಿಳೆಯರಿಗೆ ಸಮಾನವಾದ ಹಕ್ಕನ್ನು ನೀಡಲಾಗಿದೆ. ಬಹುಮುಖ್ಯವಾಗಿ ಮಹಿಳೆಯರಿಗೆ ಸಮಾನವಾದ ಆರ್ಥಿಕ ಹಕ್ಕು ನೀಡಲಾಗಿದೆ. ಸಂವಿಧಾನದಿಂದ ಇಂದು ಮಹಿಳೆಯರು ಅಧಿಕಾರಿಗಳಾಗಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ದಿವ್ಯ ಸಾನಿಧ್ಯ ವಹಿಸಿದ ಪೂಜ್ಯ ಭಂತೆ ಸಂಘರಖ್ಖಿತ್, ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಿಷ್ಣುವರ್ಧನ್ ವಾಲ್ದೊಡ್ಡಿ, ಗೌರವ ಅತಿಥಿ ಹಾಗೂ ಸಲಹೆಗಾರರಾದ ಅನಿಲ್ ಬೆಲ್ದಾರ್, ಮಾರುತಿ ಬೌದ್ದೆ, ರಮೇಶ್ ಡಾಕುಳಗಿ, ಬಾಬು ಪಾಸ್ವಾನ್, ಶ್ರೀಪತರಾವ್ ದಿನೇ, ಕಲ್ಯಾಣರಾವ್ ಭೋಸ್ಲೆ, ರಮೇಶ್ ಕಟ್ಟಿತುಗಾಂವ್, ಉಮೇಶ್ ಸ್ವಾರಳ್ಳಿಕರ್, ಸಮಿತಿ ಪದಾಧಿಕಾರಿಗಳಾದ ಶಿವಕುಮಾರ್ ನೀಲಕಟ್ಟಿ, ಅರುಣ್ ಪಟೇಲ್, ಪ್ರೇಮಕುಮಾರ್ ಕಾಂಬ್ಳೆ, ಮುಖ್ಯ ಅತಿಥಿಗಳಾದ ವಿಠಲದಾಸ್ ಪ್ಯಾಗೆ, ಪ್ರಶಾಂತ್ ದೊಡ್ಡಿ, ಗಂಗಮ್ಮ ಫುಲೆ, ಅಂಬಾದಾಸ್ ಗಾಯಕವಾಡ್, ಸಂದೀಪ್ ಕಾಂಟೆ ಹಾಗೂ ಅವಿನಾಶ್ ದಿನೇ ಸೇರಿದಂತೆ ಅನೇಕ ಗಣ್ಯರು ಮತ್ತು ನೂರಾರು ಜನ ಸೇರಿದ್ದರು.

Tags

BidarConstitution
share
ವಾರ್ತಾಭಾರತಿ
ವಾರ್ತಾಭಾರತಿ
Next Story
X