ಬೀದರ್ |ಶೇ.50ರಷ್ಟು ರಿಯಾಯಿತಿಯಲ್ಲಿ ಸಾರಿಗೆ ಇಲಾಖೆಯಲ್ಲಿನ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಅವಕಾಶ

ಬೀದರ್ : ಕರ್ನಾಟಕ ರಾಜ್ಯದ ಸಾರಿಗೆ ಇಲಾಖೆಯಲ್ಲಿ 1991 ರಿಂದ 2022ರ ಅವಧಿಯಲ್ಲಿ ಮೋಟಾರು ವಾಹಾನ ಕಾಯ್ದೆ, ನಿಯಮಗಳ ಉಲ್ಲಂಘನೆ ಸಂಬಂಧ ದಾಖಲಾಗಿ ಬಾಕಿ ಇರುವ ಡಿಎಸ್ಎ (ಇಲಾಖಾ ಶಾಸನ)ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಿ ಜೂ. 21ರಿಂದ ಜು.10ರವರೆಗೆ ಕಾಲಾವಕಾಶ ನೀಡಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಬೀದರ್ ನ ಪ್ರಾದೇಶಿಕ ಸಾರಿಗೆ ಅಧಿಕಾರಿ ಮಹಮ್ಮದ್ ಜಾಫರ್ ಸಾದಿಕ್ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಜಿಲ್ಲೆಯ ಘನ ವಾಹನ, ಗೂಡ್ಸ್ ವಾಹನ ಮತ್ತು ಹಲವಾರು ವಾಹನದ ಮಾಲಕರು ತಮ್ಮ ವಾಹನದ ಮೇಲೆ ಪ್ರಕರಣ ಇದ್ದರೆ ಈ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದ್ದಾರೆ.
Next Story




