Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಬಸವಾದಿ ಶಿವಶರಣರ ಹಿಂದೂ ಸಮಾವೇಶ...

ಬೀದರ್ | ಬಸವಾದಿ ಶಿವಶರಣರ ಹಿಂದೂ ಸಮಾವೇಶ ವಿರೋಧಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ28 Jun 2026 7:13 PM IST
share
ಬೀದರ್ | ಬಸವಾದಿ ಶಿವಶರಣರ ಹಿಂದೂ ಸಮಾವೇಶ ವಿರೋಧಿಸಿ ಪ್ರತಿಭಟನೆ

ಬೀದರ್ : ಕನ್ನೇರಿ ಸ್ವಾಮಿಯ ನೇತೃತ್ವದ ಬಸವಾದಿ ಶಿವ ಶರಣರ ಹಿಂದೂ ಸಮಾವೇಶ ವಿರೋಧಿಸಿ ಕರ್ನಾಟಕದ ಹಲವಾರು ಜಿಲ್ಲೆ, ಮಹಾರಾಷ್ಟ್ರ ಹಾಗೂ ಹೈದರಾಬಾದ್ ನಿಂದ ಬಂದ ಬಸವ ಅನುಯಾಯಿಗಳಿಂದ ಪ್ರತಿಭಟನೆ ನಡೆಸಿದರು.

ಬಸವಕಲ್ಯಾಣದ ಹೊರ ವಲಯದಲ್ಲಿರುವ ಬಂಗಲಾದ ಹತ್ತಿರವಿರುವ ರಾಷ್ಟ್ರೀಯ ಹೆದ್ದಾರಿ-65 ರ ಮೇಲೆ ರವಿವಾರ ಪ್ರತಿಭಟನೆ ನಡೆಸಿ, ಬಸವಾದಿ ಶಿವ ಶರಣರ ಹಿಂದೂ ಸಮಾವೇಶ, ಕನ್ನೇರಿ ಸ್ವಾಮಿ ಹಾಗೂ ಆರ್ ಎಸ್ ಎಸ್ ವಿರುದ್ಧ ಘೋಷಣೆ ಕೂಗಿದರು.

ಈ ವೇಳೆ ಡಾ. ಮೀನಾಕ್ಷಿ ಬಾಳಿ ಅವರು ಮಾತನಾಡಿ, ಬಸವ ಧರ್ಮ ಶೂದ್ರ, ದುಡಿಯುವವರ ಧರ್ಮವಾಗಿದೆ. ಈ ಬಸವಾದಿ ಶಿವ ಶರಣರ ಹಿಂದೂ ಸಮಾವೇಶವು ಆರ್ ಎಸ್ ಎಸ್ ನವರು ಮಾಡುತ್ತಿದ್ದಾರೆ. ಅವರು ವೇದಕ್ಕೆ ಒರೆಯ ಕಟ್ಟುವೆ ಎನ್ನುವ ವಚನ ಹೇಳುವುದಿಲ್ಲ. ಶಾಸ್ತ್ರಗಳು ಹೆಣ್ಣು, ಅಸ್ಪೃಶ್ಯರು ಕನಿಷ್ಠ ಬ್ರಾಹ್ಮಣರು ಶ್ರೇಷ್ಠ ಎಂದು ಹೇಳುತ್ತವೆ. ನಮಗೆ ಬಾಬಾಸಾಹೇಬರು ನೀಡಿದ ಸಂವಿಧಾನದಿಂದಲೇ ಅಕ್ಷರ ಸಿಕ್ಕಿದೆ. ಬುದ್ಧ, ಬಸವಣ್ಣ ಹಾಗೂ ಅಂಬೇಡ್ಕರ್ ಅವರ ತತ್ವಗಳ ಮೇಲೆ ನಡೆಯುವವರಾಗಿದ್ದೇವೆ ಎಂದರು.

ಮುಂದಿನ ದಿನಗಳಲ್ಲಿ ತತ್ವಕ್ಕೆ ಬದ್ಧರಾದವರಿಗೆ ಮಾತ್ರ ನಮ್ಮ ಮತದಾನವಿರುತ್ತದೆ. 2027ರಲ್ಲಿ ಸನಾತನಿಗಳು ಬಸವ ಭಾರತ ಉತ್ಸವ ಎನ್ನುವ ನಾಟಕ ತೆಗೆದುಕೊಂಡು ಬರುತ್ತಿದ್ದಾರೆ. ಹಾಗಾಗಿ ಎಚ್ಚರದಿಂದ ಇರಬೇಕು. ಇಲ್ಲಿನ ನಮ್ಮ ಸ್ವಾಮೀಜಿಗಳಿಗೆ ಅರ್ಥ ಆಗುವುದಿಲ್ಲ. ಸ್ವಾಮಿಗಳು ಯಾವುದಾದರು ಒಂದು ಕಡೆಗೆ ಇರಬೇಕು. ಸನಾತನಿಗಳ ಕಡೆಗೆ ಇದ್ದರೆ ನಮ್ಮನ್ನು ಬಿಡಬೇಕು. ನಮ್ಮನ್ನು ಬಿಟ್ಟರೆ ಸನಾತನಿಗಳ ಜೊತೆಗೆ ಹೋಗಬೇಕು. ಎರಡು ಕಡೆಗೆ ಇರುವುದು ಚೆನ್ನಾಗಿರುವುದಿಲ್ಲ ಎಂದು ಇಲ್ಲಿನ ಮಠಾಧೀಷರ ವಿರುದ್ಧ ಕಿಡಿ ಕಾರಿದರು.

ಹೋರಾಟಗಾರ್ತಿ ಕೆ. ನೀಲಾ ಅವರು ಮಾತನಾಡಿ, ರಾಜ್ಯ ಸರಕಾರ ಸಾಂಸ್ಕೃತಿಕ ನಾಯಕ ಎಂದು ಬಸವಣ್ಣನವರನ್ನು ಘೋಷಣೆ ಮಾಡಿದೆ. ಆರ್ ಎಸ್ ಎಸ್ ನವರು ಇಂತಹ ಸಮಾವೇಶ ಮಾಡುವುದನ್ನು ಕೂಡ ಸರ್ಕಾರ ತಡೆಯಬೇಕು. ಬಸವಕಲ್ಯಾಣವನ್ನು ಪುರೋಹಿತಶಾಹಿಯನ್ನಾಗಿ ಮಾಡುವ ಹುನ್ನಾರ ಇದೆ. ಇದನ್ನು ಆಗಲು ನಾವು ಬಿಡಬಾರದು ಎಂದು ಗುಡುಗಿದರು.

ಇಡೀ ಜಗತ್ತಿನ ಮೊದಲ ಭಯೋತ್ಪಾದಕ ಸನಾತನವಾದಿಗಳಾಗಿದ್ದಾರೆ. ಅವರೇ ಕಲ್ಯಾಣದಲ್ಲಿ ಹರಳಯ್ಯ ಮಧುವರಸ ದಂಪತಿಗಳಿಗೆ ಆನೆ ಕಾಲಿಗೆ ಕಟ್ಟಿ ಎಳೆದರು. ಅಂದಿನ ದಿನಗಳಲ್ಲಿ ಸನಾತನಿಗೆ ಶರಣರು ಹೆದರಲಿಲ್ಲ. ಆದರೆ ಇಂದಿನ ಕೆಲ ಮಠಾಧೀಶರು ಸನಾತನಿಗಳ ಸಂಧಾನ ಮಾಡಿಕೊಂಡಿದ್ದಾರೆ. ಇವರು ಸಂಧಾನ ಯಾಕೆ ಮಾಡಿಕೊಂಡರು? ಬಸವಾದಿ ಶರಣರ ಹಿಂದೂ ಸಮಾವೇಶದ ವಿರುದ್ಧ ಹೋರಾಟ ಯಾಕೆ ಹಿಂದಕ್ಕೆ ತೆಗೆದುಕೊಳ್ಳಲಾಯಿತು ಎಂದು ಇಲ್ಲಿನ ಮಠಾಧೀಶರಿಗೆ ಖಾರವಾಗಿ ಪ್ರಶ್ನೆ ಮಾಡಿದರು.

ಈ ವೇಳೆ ಬಸವರಾಜ್ ಬುಳ್ಳಾ, ಪ್ರೊ. ಆರ್. ಕೆ ಹುಡಗಿ, ಆರ್. ಜಿ ಶೇಟಕಾರ್ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಚನ್ನಬಸವ, ಮಾರುತಿ ಗೋಖಲೆ, ರವಿ ಪಾಪಡೆ, ಸಿದ್ರಾಮ್ ಶೇಟಗಾರ್, ಬಸವ ಪಾಟೀಲ್, ರವೀಂದ್ರ ಕೊಳಕೂರ್, ವಿಜಯಲಕ್ಷ್ಮಿ ಗಡ್ಡೆ, ಸಿದ್ದಪ್ಪ ಮೂಲಗೆ, ಬಾದರ್ಲಿ, ಗಗನ್ ಫುಲೆ, ಶಶಿಕಾಂತ್ ಡಾಂಗೆ, ನಾಗಾರ್ಜುನ್ ಹಾಗೂ ವೀಣಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Tags

Bidar‌ProtestBasavadi Shiv Sharan
share
ವಾರ್ತಾಭಾರತಿ
ವಾರ್ತಾಭಾರತಿ
Next Story
X