Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ರಾಜ್ಯದಲ್ಲಿ ಆರೆಸ್ಸೆಸ್‌ ಅನ್ನು...

ಬೀದರ್ | ರಾಜ್ಯದಲ್ಲಿ ಆರೆಸ್ಸೆಸ್‌ ಅನ್ನು ಸಂಪೂರ್ಣವಾಗಿ ನಿಷೇಧಿಸಲು ಆಗ್ರಹಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ20 Oct 2025 8:11 PM IST
share
ಬೀದರ್ | ರಾಜ್ಯದಲ್ಲಿ ಆರೆಸ್ಸೆಸ್‌ ಅನ್ನು ಸಂಪೂರ್ಣವಾಗಿ ನಿಷೇಧಿಸಲು ಆಗ್ರಹಿಸಿ ಪ್ರತಿಭಟನೆ
ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ದೇಶದಿಂದ ಗಡಿಪಾರು ಮಾಡಲು ಆಗ್ರಹ

ಬೀದರ್ : ರಾಜ್ಯದಲ್ಲಿ ವಿಶೇಷವಾದ ಕಾನೂನು ರೂಪಿಸಿ ಆರೆಸ್ಸೆಸ್‌ ಅನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ಹಾಗೆಯೇ ವಿವಿಧ ಬೇಡಿಕೆಗಳು ಈಡೇರಿಸಬೇಕು ಎಂದು ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟದಿಂದ ಇಂದು ಹುಮನಾಬಾದ್ ನಗರದಲ್ಲಿ ಸಾಂಕೇತಿಕ ಪ್ರತಿಭಟನಾ ರ‍್ಯಾಲಿ ನಡೆಸಲಾಯಿತು. ಈ ಪ್ರತಿಭಟನಾ ರ‍್ಯಾಲಿಗೆ ಬ್ಲಾಕ್ ಕಾಂಗ್ರೆಸ್ ಕಮಿಟಿಯು ಬೆಂಬಲ ಸೂಚಿಸಿತು.

ನಗರದ ಪ್ರವಾಸಿ ಮಂದಿರದಿಂದ ಅಂಬೇಡ್ಕರ್ ವೃತ್ತದವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಿ, ತಹಶೀಲ್ದಾರ್ ಅವರ ಮೂಲಕ ರಾಷ್ಟ್ರಪತಿ, ರಾಜ್ಯಪಾಲ ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಮನವಿ ಪತ್ರದಲ್ಲಿ, ಸರ್ವೋಚ್ಚ ನ್ಯಾಯಾಲಯದ ಕಲಾಪದ ವೇಳೆ ರಾಕೇಶ್ ಕಿಶೋರ್ ಎಂಬ ವಕೀಲ ಸಿಜೆಐ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದಿರುತ್ತಾನೆ. ಈ ಪ್ರಕರಣ ಅತ್ಯಂತ ಖಂಡನೀಯವಾಗಿದ್ದು, ಇದು ಕೇವಲ ನ್ಯಾಯಾಮೂರ್ತಿಗಳ ಮೇಲೆ ಆದ ಹಲ್ಲೆಯಲ್ಲ. ಇಡೀ ದೇಶದ 144 ಕೋಟಿ ಜನಸಂಖ್ಯೆ ಮತ್ತು ಸಂವಿಧಾನದ ಮೇಲಿನ ಹಲ್ಲೆಯಾಗಿದೆ. ಶೂ ಎಸೆದ ವಕೀಲನನ್ನು ದೇಶದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಲಾಗಿದೆ.

ಮಹಾರಾಷ್ಟ್ರ ಮೂಲದ ದಾನೇಶ್ ನರೋನೆ ಎನ್ನುವ ಸನಾತನಿ ವ್ಯಕ್ತಿ ಸಚಿವ ಪ್ರೀಯಾಂಕ್ ಖರ್ಗೆ ಅವರಿಗೆ ಮೊಬೈಲ್ ಕರೆ ಮಾಡಿ ಅಶ್ಲೀಲ ಹಾಗೂ ಅವಾಚ್ಯ ಶಬ್ದಗಳಿಂದ ನಿಂದನೆ ಹಾಗೂ ಅಪಮಾನ ಮಾಡಿರುವ ಘಟನೆ ಖಂಡನೀಯವಾಗಿದೆ. ಖರ್ಗೆ ಅವರ ಪರಿವಾರ ಬುದ್ದ ಬಸವ, ಅಂಬೇಡ್ಕರ್ ಅವರ ಪರಂಪರೆವುಳ್ಳವರಾಗಿದ್ದು, ಪರಧರ್ಮ ಸಂಹಿಷ್ಣತೆ ಉಳ್ಳವರಾಗಿದ್ದಾರೆ. ಸಾಂಸ್ಕೃತಿ ಹಾಗೂ ಸಂಪ್ರಾದಾಯ ಮೌಲ್ಯಗಳ ಬಗ್ಗೆ ಮಾತನಾಡುವ ಆರೆಸ್ಸೆಸ್‌ ನವರು ನಡೆ ನುಡಿಗಳಲ್ಲಿ ಸೌಜನ್ಯ ಮತ್ತು ಘನತೆ ಇರಬೇಕಾಗಿತ್ತು. ಆದರೆ ಖರ್ಗೆ ಅವರಿಗೆ ವೈಯಕ್ತಿಕ ನಿಂದನೆ ಮಾಡಿ ಬೆದರಿಕೆ ಹಾಕುವುದು ತೀವ್ರವಾಗಿ ಖಂಡಿಸಲಾಗಿದೆ.

ರಾಜ್ಯದಲ್ಲಿ ವಿಶೇಷವಾದ ಕಾನೂನು ರೂಪಿಸಿ ಆರೆಸ್ಸೆಸ್‌ ಅನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ಪ್ರೀಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಇರುವುದರಿಂದ ಅವರಿಗೆ ಝಡ್ ಶ್ರೇಣಿಯ ಭದ್ರತೆ ಒದಗಿಸಬೇಕು. ಅವರಿಗೆ ಜೀವ ಬೆದರಿಕೆ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪಿಯನ್ನು ಕೂಡಲೇ ಕಠಿಣ ಶಿಕ್ಷೆಗೆ ಗುರಿಪಡಿಸಿ ದೇಶದಿಂದ ಗಡಿಪಾರು ಮಾಡಬೇಕು. ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ ಗ್ವಾಲಿಯರ್‌ನ ಉಚ್ಚ ನ್ಯಾಯಾಲಯದ ವಕೀಲ ಅನೀಲ್ ಮಿಶ್ರಾ ಇವನನ್ನು ಬಾ‌ರ್ ಕೌನ್ಸಿಲ್‌ನಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಸುರೇಶ್ ಘಾಂಗ್ರೆ, ರಮೇಶ್ ಡಾಕುಳಗಿ, ಲಕ್ಷೀಪುತ್ರ ಮಾಳಗೆ, ಅನಿಲ್ ದೊಡ್ಡಿ, ಲೊಕೇಶ್ ಮೇತ್ರೆ, ಸತೀಶ್ ರತ್ನಾಕರ್, ಶಿವಾನಂದ್ ಕಟ್ಟಿಮನಿ, ರಾಹುಲ್, ಮನೋಜ್ ಜಾನವೀರ್, ವೀರಪ್ಪಾ ಭೂತಾಳೆ, ಮುಕೇಶ್ ಪಾಂಡೆ, ಶರಣಪ್ಪ ಮೇತ್ರೆ, ಜಗನ್ನಾಥ್ ನವಲೆ, ಸುನಿಲ್ ಶಿವನಾಯಕ್, ಸುಧಾಕರ್ ಮಾಡಗೋಳ್, ಬಸವರಾಜ್ ಮಾಳಗೆ, ಅಹಮ್ಮದ್ ಮೈನೋದ್ದಿನ್ ಅಫಸರ್ ಮಿಯ್ಯಾ, ರಾಹಿಲ್ ಖಿಲ್ಜಿ, ಉಮೇಶ್ ಕುಲಕರ್ಣಿ, ಓಂಕಾರ್ ತುಂಬಾ, ಪಾರ್ವತಿ ಶೇರಿಕಾರ್ ಹಾಗೂ ಧರ್ಮರೆಡ್ಡಿ ಸೇರಿದಂತೆ ನೂರಾರು ಜನ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X