Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಅಂಬೇಡ್ಕರ್ ಸಮುದಾಯ ಭವನ...

Bidar | ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಜಾಗ ಮೀಸಲಿಡಿ: ಮಾರುತಿ ಬೌದ್ಧೆ

ವಾರ್ತಾಭಾರತಿವಾರ್ತಾಭಾರತಿ19 Aug 2026 4:42 PM IST
share
Bidar | ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಜಾಗ ಮೀಸಲಿಡಿ: ಮಾರುತಿ ಬೌದ್ಧೆ

ಬೀದರ್: ನಗರದ ಕುಂಬರವಾಡ ಬಡಾವಣೆಯ ಸರ್ವೇ ನಂ.51/1ರಲ್ಲಿ ಇರುವ ಖಾಲಿ ಜಾಗದಲ್ಲಿ ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಜಾಗ ಮೀಸಲಿಡಬೇಕು. ಇಲ್ಲವಾದಲ್ಲಿ ಬಡಾವಣೆಯ ಜನರು ನಗರದ ಅಂಬೇಡ್ಕರ್ ವೃತ್ತದಲ್ಲಿಯೇ ಮನೆ ಮಾಡಿಕೊಂಡು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಮಾರುತಿ ಬೌದ್ಧೆ ಎಚ್ಚರಿಕೆ ನೀಡಿದರು.

ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ವೇ ನಂ.51/1ರಲ್ಲಿ ಸುಮಾರು 25 ಎಕರೆ ಗೋಮಾಳ ಜಾಗವಿದ್ದು, ಈ ಪ್ರದೇಶದಲ್ಲಿ ಮಂದಿರ, ಚರ್ಚ್‌, ಮನೆಗಳು ಹಾಗೂ ವಿವಿಧ ಸಮುದಾಯಗಳ ಸಮುದಾಯ ಭವನಗಳು ನಿರ್ಮಾಣವಾಗಿವೆ. ಆದರೆ ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಜಾಗ ನೀಡಲಾಗಿಲ್ಲ ಎಂದು ಹೇಳಿದರು.

ಖಾಲಿ ಇರುವ ಜಾಗದಲ್ಲಿ ಹಲವು ವರ್ಷಗಳಿಂದ ಅಂಬೇಡ್ಕರ್ ಜಯಂತಿ, ಬುದ್ಧ ಪೂರ್ಣಿಮೆ, ಮಹಾಪರಿನಿರ್ವಾಣ ದಿನ ಸೇರಿದಂತೆ ವಿವಿಧ ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಆದರೆ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಆರೋಪಿಸಿದರು.

ಮೇ 18ರಂದು ಜಾಗದಲ್ಲಿದ್ದ ನೀಲಿ ಧ್ವಜವನ್ನು ಜೋಷಪ್ಪ ಕೊಡೇಕರ್ ಹಾಗೂ ಅವರ ಪತ್ನಿ ಶೋಭಾರಾಣಿ ಅವರು ತೆರವುಗೊಳಿಸಿದ್ದಾರೆ ಎಂದು ಆರೋಪಿಸಿ ಗಾಂಧಿಗಂಜ್ ಪೊಲೀಸ್ ಠಾಣೆಗೆ ದೂರು ನೀಡಿದ್ದರೂ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.

ಆ.15ರಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರ ಸೂಚನೆಯಂತೆ ಸಮಸ್ಯೆ ಬಗೆಹರಿಯುವವರೆಗೆ ಯಾರೂ ಜಾಗಕ್ಕೆ ತೆರಳಬಾರದು ಎಂಬ ನಿರ್ದೇಶನವಿತ್ತು. ಆದರೆ ಅದೇ ರಾತ್ರಿ ಜೋಷಪ್ಪ ಹಾಗೂ ಶೋಭಾರಾಣಿ ಅವರು ಪೊಲೀಸರ ಎದುರೇ ಕ್ರಿಶ್ಚಿಯನ್ ಧ್ವಜ ಹಾರಿಸಿದ್ದಾರೆ ಎಂದು ಆರೋಪಿಸಿದರು. ಈ ಘಟನೆ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಸಿಬ್ಬಂದಿ ಮನೋಜ್ ಅವರ ಪಾತ್ರದ ಬಗ್ಗೆಯೂ ಅನುಮಾನವಿದ್ದು, ಅವರನ್ನು ಅಮಾನತುಗೊಳಿಸಬೇಕು. ಪ್ರಕರಣ ದಾಖಲಿಸದ ಗಾಂಧಿಗಂಜ್ ಠಾಣೆಯ ಇನ್ಸ್‌ಪೆಕ್ಟರ್ ಆನಂದ್ ಅವರನ್ನು ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದರು.

ಕುಂಬರವಾಡದಲ್ಲಿ ವಿವಿಧ ಸಮುದಾಯಗಳ ನಡುವೆ ವೈಮನಸ್ಸು ಉಂಟಾಗದಂತೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಸರ್ವೇ ನಂ.51/1ರಲ್ಲಿ ಸುಮಾರು 75ರಿಂದ 80 ಅಡಿ ವಿಸ್ತೀರ್ಣದ ಜಾಗವನ್ನು ಅಧಿಕೃತವಾಗಿ ಅಂಬೇಡ್ಕರ್ ಸಮುದಾಯ ಭವನಕ್ಕಾಗಿ ಮೀಸಲಿಡಬೇಕು. ನೀಲಿ ಧ್ವಜ ತೆರವುಗೊಳಿಸಿದ ಆರೋಪ ಎದುರಿಸುತ್ತಿರುವ ಅಂಗನವಾಡಿ ಶಿಕ್ಷಕಿ ವಿರುದ್ಧ ಇಲಾಖಾ ಹಾಗೂ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಆ.15ರಂದು ಧ್ವಜ ಹಾರಿಸಿದ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿ, ಕುಂಬರವಾಡದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಪರ್ಯಾಯ ಸರ್ಕಾರಿ ಜಾಗ ಗುರುತಿಸಿ, ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಅಗತ್ಯ ಜಾಗವನ್ನು ಶೀಘ್ರ ಮಂಜೂರು ಮಾಡಬೇಕು ಎಂದು ಮಾರುತಿ ಬೌದ್ಧೆ ಆಗ್ರಹಿಸಿದರು.

ಈ ವೇಳೆ ಡಿಎಸ್ಎಸ್ ಜಿಲ್ಲಾ ಸಂಚಾಲಕ ಬಾಬುರಾವ್ ಪಾಸ್ವಾನ್ ಮಾತನಾಡಿದರು.‌ ಈ ಸಂದರ್ಭದಲ್ಲಿ ಶುದ್ಧೋಧನ ಮಹಾಮಾಯ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಶಿವಲಿಂಗಪ್ಪ ಕಡಿಮನಿ, ದಲಿತ ಮುಖಂಡರಾದ ಸುಭಾಷ್ ವರ್ಮಾ, ವಿಠಲದಾಸ್ ಪ್ಯಾಗೆ, ರಾಜಕುಮಾರ್ ಮೂಲಭಾರತಿ, ಅಂಬದಾಸ್ ಗಾಯಕವಾಡ್, ಸುನೀಲ್ ಸಂಗಮ್, ಶ್ರೀಪತರಾವ್ ದೀನೆ, ಶಿವಕುಮಾರ್ ನಿಲಿಕಟ್ಟೆ, ಸುಬ್ಬಣ್ಣ ಕರಕನಳ್ಳಿ ಹಾಗೂ ಮಲ್ಲಿಕಾರ್ಜುನ್ ಮೋಳಕೆರೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X