Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಆ.26ರಿಂದ ಸೆ.6 ರವರೆಗೆ...

Bidar | ಆ.26ರಿಂದ ಸೆ.6 ರವರೆಗೆ ಪ್ರವಾದಿ ಮುಹಮ್ಮದ್ ಅವರ ಕುರಿತು ಸಿರತ್‌ ಅಭಿಯಾನ : ಮುಹಮ್ಮದ್‌ ಆಸಿಫುದ್ದೀನ್

ವಾರ್ತಾಭಾರತಿವಾರ್ತಾಭಾರತಿ25 Aug 2026 5:46 PM IST
share
Bidar | ಆ.26ರಿಂದ ಸೆ.6 ರವರೆಗೆ ಪ್ರವಾದಿ ಮುಹಮ್ಮದ್ ಅವರ ಕುರಿತು ಸಿರತ್‌ ಅಭಿಯಾನ : ಮುಹಮ್ಮದ್‌ ಆಸಿಫುದ್ದೀನ್

ಬೀದರ್: ಪ್ರವಾದಿ ಮುಹಮ್ಮದ್ (ಸ) ಅವರ ಜನ್ಮದಿನದ ಅಂಗವಾಗಿ ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ಆಗಸ್ಟ್ 26ರಿಂದ ಸೆಪ್ಟೆಂಬರ್ 6ರವರೆಗೆ ಜಿಲ್ಲೆಯಾದ್ಯಂತ ‘ಕ್ರಾಂತಿಯ ಜ್ಯೋತಿ – ಪ್ರವಾದಿ ಮುಹಮ್ಮದ್ (ಸ)’ ಶೀರ್ಷಿಕೆಯಡಿ ಸೀರತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಮಾಅತೆ ಇಸ್ಲಾಮಿ ಹಿಂದ್‌ನ ರಾಜ್ಯ ಸಲಹಾ ಮಂಡಳಿ ಸದಸ್ಯ ಮುಹಮ್ಮದ್ ಆಸಿಫುದ್ದೀನ್ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾದಿ ಮುಹಮ್ಮದ್ (ಸ) ಅವರ ಜೀವನ, ಸಂದೇಶ ಮತ್ತು ಮಾನವೀಯ ಮೌಲ್ಯಗಳನ್ನು ಜನರಿಗೆ ಪರಿಚಯಿಸುವ ಉದ್ದೇಶದಿಂದ ರಾಜ್ಯದಾದ್ಯಂತ ನಡೆಯುತ್ತಿರುವ ಈ ಅಭಿಯಾನವನ್ನು ಬೀದರ್ ಜಿಲ್ಲೆಯಲ್ಲಿಯೂ ವಿವಿಧ ಕಾರ್ಯಕ್ರಮಗಳ ಮೂಲಕ ನಡೆಸಲಾಗುತ್ತಿದೆ ಎಂದು ಹೇಳಿದರು.

ಅಭಿಯಾನದ ಅಂಗವಾಗಿ ಬೀದರ್ ನಗರದಲ್ಲಿ ಹಲವು ಧಾರ್ಮಿಕ, ಸಾಹಿತ್ಯ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಅಭಿಯಾನದ ಅವಧಿಯ ಎರಡೂ ಶುಕ್ರವಾರ ಮಸೀದಿಗಳಲ್ಲಿ ವಿಶೇಷ ಪ್ರವಚನಗಳು ನಡೆಯಲಿವೆ. ಜೊತೆಗೆ ಸಾಹಿತಿ ಯೋಗೇಶ್ ಮಾಸ್ಟರ್ ಅವರ ‘ಮಾನವ ಮನಸ್ಸಿನ ಕೃಷಿಕ – ಮನದೊಡೆಯ ಮುಹಮ್ಮದ್ (ಸ)’ ಹಾಗೂ ಅಬ್ದುಸ್ಸಲಾಮ್ ಪುತ್ತಿಗೆ ಅವರ ‘ಸಮಗ್ರ ಕ್ರಾಂತಿಯ ಜ್ಯೋತಿ ಬೆಳಗಿದ ಪೈಗಂಬರ್ ಮುಹಮ್ಮದ್ (ಸ)’ ಕೃತಿಗಳನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

ಜಮಾಅತೆ ಇಸ್ಲಾಮಿ ಹಿಂದ್‌ನ ಮಾಧ್ಯಮ ಉಪ ಸಂಚಾಲಕ ಮುಹಮ್ಮದ್ ನಿಝಾಮುದ್ದೀನ್ ಕಾರ್ಯಕ್ರಮಗಳ ವಿವರ ನೀಡಿ, ಆಗಸ್ಟ್ 26ರಂದು ಬೀದರ್ ಕೇಂದ್ರ ಕಾರಾಗೃಹದ ಕೈದಿಗಳಿಗೆ ಹಣ್ಣು-ಹಂಪಲು ವಿತರಣೆ, ಆಗಸ್ಟ್ 30ರಂದು ಕರ್ನಾಟಕ ಸಾಹಿತ್ಯ ಸಂಘದ ಸಭಾಂಗಣದಲ್ಲಿ ಬಹುಭಾಷಾ ಕವಿಗೋಷ್ಠಿ ಹಾಗೂ ಸೆಪ್ಟೆಂಬರ್ 9ರಂದು ಇದೇ ಸಭಾಂಗಣದಲ್ಲಿ ಮೇಜಿನ ಮಾತು ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.

ಇದಲ್ಲದೆ ಸಾರ್ವಜನಿಕರನ್ನು ವೈಯಕ್ತಿಕವಾಗಿ ಭೇಟಿ ಮಾಡಿ ಪ್ರವಾದಿ ಮುಹಮ್ಮದ್ (ಸ) ಅವರ ಜೀವನ ಮತ್ತು ಸೀರತ್ ಕುರಿತ ಪುಸ್ತಕಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು.

ಸೆಪ್ಟೆಂಬರ್ 6ರಂದು ನಗರದ ವಿಸ್ಡಮ್ ಕಾಲೇಜಿನಲ್ಲಿ 8ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ‘ಸಾಮಾಜಿಕ ಕ್ರಾಂತಿಯ ಜ್ಯೋತಿ – ಪ್ರವಾದಿ ಮುಹಮ್ಮದ್ (ಸ)’ ಹಾಗೂ ಪಿಯುಸಿ ಮತ್ತು ಪದವಿ ವಿದ್ಯಾರ್ಥಿಗಳಿಗೆ ‘ಆರ್ಥಿಕ ಕ್ರಾಂತಿಯ ಜ್ಯೋತಿ – ಪ್ರವಾದಿ ಮುಹಮ್ಮದ್ (ಸ)’ ವಿಷಯದ ಕುರಿತು ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ. ವಿಜೇತರಿಗೆ ಕ್ರಮವಾಗಿ 5,000 ರೂ., 3,000 ರೂ. ಮತ್ತು 2,000 ರೂ. ಬಹುಮಾನ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಪ್ರವಾದಿ ಮುಹಮ್ಮದ್ (ಸ) ಅವರ ಕುರಿತು ಸಮಾಜದಲ್ಲಿ ಇರುವ ತಪ್ಪು ಕಲ್ಪನೆಗಳನ್ನು ನಿವಾರಿಸಿ, ಸೌಹಾರ್ದತೆ ಮತ್ತು ಪರಸ್ಪರ ಬಾಂಧವ್ಯವನ್ನು ಬೆಳೆಸುವುದು ಈ ಸೀರತ್ ಅಭಿಯಾನದ ಪ್ರಮುಖ ಉದ್ದೇಶವಾಗಿದೆ ಎಂದು ಆಸಿಫುದ್ದೀನ್ ಹೇಳಿದರು.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X