Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಅ.26 ರಂದು ಸಿಂಧೂರ್ ರಕ್ಷಕ ಓಟ...

ಬೀದರ್ | ಅ.26 ರಂದು ಸಿಂಧೂರ್ ರಕ್ಷಕ ಓಟ : ಕರ್ನಲ್ ಶರಣಪ್ಪ ಸಿಕೆನಪುರೆ

ವಾರ್ತಾಭಾರತಿವಾರ್ತಾಭಾರತಿ24 Sept 2025 9:07 PM IST
share
ಬೀದರ್ | ಅ.26 ರಂದು ಸಿಂಧೂರ್ ರಕ್ಷಕ ಓಟ : ಕರ್ನಲ್ ಶರಣಪ್ಪ ಸಿಕೆನಪುರೆ

ಬೀದರ್ : ರೋಟರಿ ಕ್ಲಬ್ ಬೀದರ್ ಸಹಕಾರದಲ್ಲಿ ಗ್ಲೋಬಲ್ ಸೈನಿಕ್ ಅಕಾಡೆಮಿ ಶಾಲೆಯ ದಶಮಾನೋತ್ಸವದ ಅಂಗವಾಗಿ ಅ.26ರಂದು ಸಿಂಧೂರ್ ರಕ್ಷಕ ಓಟ ಆಯೋಜಿಸಲಾಗಿದೆ ಎಂದು ಕರ್ನಲ್ ಶರಣಪ್ಪ ಸಿಕೆನಪುರೆ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಕಾರ್ಯಕ್ರಮದ ಪ್ರಯುಕ್ತ ನ.1 ರಂದು ಶಾಲೆಯ ಆವರಣದಲ್ಲಿ ಧ್ವಜಾರೋಹಣ, ಮಾಚ್‌ಪಾಸ್ಟ್, ಪರೇಡ್, ವ್ರೀತ್ ಲೇಯಿಂಗ್ ಮತ್ತು ಉಪನ್ಯಾಸ ಕಾರ್ಯಕ್ರಮಗಳು ನಡೆಯಲಿವೆ. ಬೆಳಿಗ್ಗೆ 11 ಗಂಟೆಗೆ ಆರಂಭವಾಗುವ ಕಾರ್ಯಕ್ರಮಕ್ಕೆ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಹಾಗೂ ಲೇಖಕಿ ಸುಧಾಮೂರ್ತಿ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ.

“ಸಿಂಧೂರ್ ರಕ್ಷಕ ಓಟದ ಉದ್ದೇಶ ನಮ್ಮ ಸಶಸ್ತ್ರ ಪಡೆಗಳು ಹಾಗೂ ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದವರಿಗೆ ಗೌರವ ಸಲ್ಲಿಸುವುದು” ಎಂದು ಅವರು ಹೇಳಿದರು.

10 ಕಿ.ಮೀ., 6 ಕಿ.ಮೀ., 3 ಕಿ.ಮೀ. ಓಟಗಳು ಆಯೋಜಿಸಲಾಗಿದೆ. 10 ಕಿ.ಮೀ. ಧ್ವಜಾರೋಹಣಕ್ಕೆ ಮೇಜರ್ ಡಿ.ಪಿ.ಸಿಂಗ್, 6 ಕಿ.ಮೀ. ಓಟಕ್ಕೆ ಅರ್ಜುನ್ ಪ್ರಶಸ್ತಿ ಪುರಸ್ಕೃತ ಕ್ಯಾಪ್ಟನ್ ಭೀಮಸಿಂಗ್, 3 ಕಿ.ಮೀ. ಓಟಕ್ಕೆ ರೋಟರಿ ಕ್ಲಬ್ ಜಿಲ್ಲಾ ಗವರ್ನರ್ ರವೀಂದ್ರ ಭಾಗವಹಿಸಲಿದ್ದಾರೆ.

ಪ್ರತಿಭಾಗಿಯವರಿಗೆ ಟೀಶರ್ಟ್, ಪದಕ ಹಾಗೂ ಇ-ಪ್ರಮಾಣ ಪತ್ರ ನೀಡಲಾಗುವುದು. 10 ಕಿ.ಮೀ. ಓಟದಲ್ಲಿ ಪುರುಷ ಮತ್ತು ಮಹಿಳಾ ವಿಭಾಗದ ಮೊತ್ತ ಮೊದಲ ಮೂರು ವಿಜೇತರಿಗೆ ಕ್ರಮವಾಗಿ 10,000 ರೂ., 8,000 ರೂ., 5,000 ರೂ. ಬಹುಮಾನ ಹಾಗೂ ಟ್ರೋಫಿ ನೀಡಲಾಗುವುದು. ಓಟ ಮುಗಿದ ನಂತರ ಉಪಾಹಾರ ಹಾಗೂ ಶಕ್ತಿಯುತ ಪಾನೀಯ ಒದಗಿಸಲಾಗುವುದು.

ಆನ್‌ಲೈನ್ ನೋಂದಣಿ :

ವಿಶೇಷ ವೆಬ್‌ಸೈಟ್ ಮತ್ತು ಲ್ಯಾಂಡಿಂಗ್ ಪೇಜ್ ಮೂಲಕ ಆಗಿದ್ದು, ಓಟ ಶುಲ್ಕ ಪ್ರತಿ ಭಾಗಿಯಾಗುವವರಿಗೆ 200 ರೂ. ನಿರ್ಧರಿಸಲಾಗಿದೆ. ಸುಮಾರು 5,000 ಓಟಗಾರರ ಭಾಗವಹಿಸುವ ನಿರೀಕ್ಷೆಯಿದೆ.

ಕಾರ್ಯಕ್ರಮದಲ್ಲಿ ಅಕಾಡೆಮಿ ಪದಾಧಿಕಾರಿ ರಮೇಶ್ ಪಾಟೀಲ್, ರೋಟರಿ ಕ್ಲಬ್ ಹಾವಶೆಟ್ಟಿ ಪಾಟೀಲ್, ಡಾ. ರಘು ಕೃಷ್ಣಮೂರ್ತಿ, ಡಾ. ಸುವಿನ್ ಪಾಟೀಲ್, ಬಸವಕುಮಾರ್ ಪಾಟೀಲ್ ಖಾಜಾಪುರ್, ಡಾ. ನಾಗೇಶ್ ಪಾಟೀಲ್, ಆದೀಶ್ ವಾಲಿ, ಅನೀಲ್ ಬಿರಾದಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X