Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ನಮ್ಮ ಸಮಾಜದಲ್ಲಿ ಒಡಕು...

ಬೀದರ್ | ನಮ್ಮ ಸಮಾಜದಲ್ಲಿ ಒಡಕು ಉಂಟಾಗಬಾರದು ಎನ್ನುವ ಕಾರಣಕ್ಕೆ ದಸರಾ ದರ್ಬಾರ್ ಕಾರ್ಯಕ್ರಮದಿಂದ ದೂರ ಉಳಿಯಲಾಗಿದೆ : ಹಾರಕುಡ ಶ್ರೀ

ವಾರ್ತಾಭಾರತಿವಾರ್ತಾಭಾರತಿ15 Aug 2025 7:38 PM IST
share
ಬೀದರ್ | ನಮ್ಮ ಸಮಾಜದಲ್ಲಿ ಒಡಕು ಉಂಟಾಗಬಾರದು ಎನ್ನುವ ಕಾರಣಕ್ಕೆ ದಸರಾ ದರ್ಬಾರ್ ಕಾರ್ಯಕ್ರಮದಿಂದ ದೂರ ಉಳಿಯಲಾಗಿದೆ : ಹಾರಕುಡ ಶ್ರೀ

ಬೀದರ್ : ನಮ್ಮ ಸಮಾಜದಲ್ಲಿ ಒಡಕು ಉಂಟಾಗಬಾರದು ಎನ್ನುವ ಕಾರಣಕ್ಕೆ ರಂಭಾಪುರಿ ಜಗದ್ಗುರುಗಳ ದಸರಾ ದರ್ಬಾರ್ ಕಾರ್ಯಕ್ರಮದಿಂದ ನಾವು ದೂರ ಸರಿದಿದ್ದೇವೆ ಎಂದು ಹಾರಕೂಡ ಶ್ರೀಗಳಾದ ಚನ್ನವೀರ್ ಶಿವಾಚಾರ್ಯ ಅವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಕೆಲ ತಿಂಗಳ ಹಿಂದೆ ಭಕ್ತರು ಮತ್ತು ಕೆಲವು ಮಠಾಧೀಶರು ಸಭೆ ಸೇರಿ ಶ್ರೀ ರಂಭಾಪುರಿ ಜಗದ್ಗುರುಗಳ ವಾರ್ಷಿಕ ದಸರಾ ದರ್ಬಾರ್ ನ್ನು ಮಹಾತ್ಮಾ ಬಸವಣ್ಣನವರ ಕಾಯಕದ ಪುಣ್ಯ ಭೂಮಿ ಬಸವಕಲ್ಯಾಣದಲ್ಲಿ ಆಚರಿಸಲು ತೀರ್ಮಾನಿಸಲಾಯಿತು.

ಆ.10 ರಂದು ಹಾರಕೂಡ ಮಠದಲ್ಲಿ ಸಮಿತಿಯ ಅಧ್ಯಕ್ಷ ಈಶ್ವರ್ ಖಂಡ್ರೆಯವರ ಅನುಮತಿ ಪಡೆದು ಸಮಿ ತಿಯ ಕಾರ್ಯಧ್ಯಕ್ಷ ಹಾಗೂ ಶಾಸಕ ಶರಣು ಸಲಗರ್ ಅವರ ಸಮ್ಮುಖದಲ್ಲಿ ಹಾರಕೂಡ ಶ್ರೀಗಳ ನೇತೃತ್ವದಲ್ಲಿ ಎಲ್ಲರ ಸಹಮತದೊಂದಿಗೆ ವಿಜಯ ದಶಮಿಯಂದು ಬಸವಕಲ್ಯಾಣದಲ್ಲಿ ನಡೆಯುವ ರಂಭಾಪುರಿ ಜಗದ್ಗುರುಗಳ ಅಡ್ಡ ಪಲ್ಲಕ್ಕಿಯ ಮೆರವಣಿಗೆಯನ್ನು ಭಕ್ತರ ಹೆಗಲ ಮೇಲೆ ಮಾಡದೆ ಅಲಂಕಾರಿತ ವಾಹನದಲ್ಲಿ ನಡೆಸಲು ಒಮ್ಮತದಿಂದ ತೀರ್ಮಾನಿಸಲಾಯಿತು. ಆದರೆ ಆ.13 ರಂದು ತಡೋಳಾ ಶ್ರೀಗಳ ನೇತೃತ್ವದಲ್ಲಿ 20 ಶ್ರೀಗಳು ಹಾರಕೂಡ ಮಠಕ್ಕೆ ಆಗಮಿಸಿ ನಾವು ದಸರಾ ದರ್ಬಾರದ ವಿಜಯ ದಶಮಿಯ ದಿನ ಬಸವಕಲ್ಯಾಣದಲ್ಲಿ ರಂಭಾಪುರಿ ಜಗದ್ಗುರುಗಳ ಅಡ್ಡ ಪಲ್ಲಕ್ಕಿಯನ್ನು ಭಕ್ತರ ಹೆಗಲ ಮೇಲೆಯೇ ಮಾಡುತ್ತೇವೆ ಎಂದು ಹಠ ಹಿಡಿದು ನಿರ್ಗಮಿಸಿದರು ಎಂದಿದ್ದಾರೆ.

ಬಸವಣ್ಣನವರ ಕಾಯಕದ ಪುಣ್ಯ ಭೂಮಿಯಲ್ಲಿ ಬಸವಣ್ಣ ನವರ ಆಶಯದಂತೆ ಮತ್ತು ತತ್ವ ಸಿದ್ಧಾಂತಕ್ಕೆ ಧಕ್ಕೆ ಬರಬಾರದು ಮತ್ತು ರಂಭಾಪುರಿ ಪೀಠದ ಘೋಷ ವಾಕ್ಯ ಮಾನವ ಧರ್ಮಕ್ಕೆ ಜಯವಾಗಲಿ ಎಂಬ ಉದ್ದೇಶದಂತೆ ಅಡ್ಡ ಪಲ್ಲಕ್ಕಿ ಮೆರವಣಿಗೆಯನ್ನು ನಮ್ಮ ಸಮಿತಿಯ ತೀರ್ಮಾನದಂತೆ ಭಕ್ತರು ಹೊರುವ ಬದಲು ಅಲಂಕಾರಿತ ವಾಹನದಲ್ಲಿ ಮಾಡಲು ಈ ಹಿಂದೆ ತೀರ್ಮಾನಿಸಲಾಗಿತ್ತು. ಈಗ ರಂಭಾಪುರಿ ಶ್ರೀಗಳು ಅವರ ಪೀಠದ ಪರಂಪರೆಯಂತೆ ಭಕ್ತರ ಹೆಗಲ ಮೇಲೆಯೇ ಪಲ್ಲಕ್ಕಿ ಉತ್ಸವ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ನಾವು ಈ ಮೊದಲು ಸಮಿತಿಯವರು ತೆಗೆದುಕೊಂಡ ನಿರ್ಣಯ ಬದಲಿಸಲು ನಿರಾಕರಿಸಿ ದಸರಾ ದರ್ಬಾರ್‌ ಕಾರ್ಯಕ್ರಮ ದಿಂದ ದೂರ ಸರಿಯಲು ತೀರ್ಮಾಸಿದ್ದೇವೆ ಎಂದು ತಿಳಿಸಿದ್ದಾರೆ.

ಕೋಟ್ಯಂತರ ಬಸವ ಭಕ್ತರಿಗೂ ಮತ್ತು ಮಾನವೀಯತೆಯಲ್ಲಿ ನಂಬಿಕೆ ಇಟ್ಟ ಜನರ ಮನಸ್ಸುಗಳನ್ನು ಘಾಸಿ ಗೊಳಿಸಬಾರದೆಂದು ದಸರಾ ದರ್ಬಾರದಿಂದ ನಾವು ದೂರ ಸರಿದಿದ್ದೇವೆ. ಈ ಸಮಾಜದಲ್ಲಿ ಒಡಕು ಉಂಟಾಗಬಾರದೆಂದು ನಮ್ಮ ನಿರ್ಣಯಕ್ಕೆ ಬದ್ದವಾಗಿ ದಸರಾ ದರ್ಬಾರದಿಂದ ದೂರ ಉಳಿಯುವ ನಿರ್ಧಾರಕ್ಕೆ ಬಂದಿದ್ದೇವೆ ಎಂದು ಅವರು ಹೇಳಿದ್ದಾರೆ.

ನಮ್ಮ ಮಠ ಮತ್ತು ನಾನು ಎಂದೂ ಯಾರಿಗೂ ಮನಸ್ಸು ನೋಯಿಸಿಲ್ಲ, ನೋಯಿಸುವುದಿಲ್ಲ. ಅವರ ಪರಂಪರೆ ಬೇಡ ಎನ್ನಲು ನಮಗೆ ಹಕ್ಕಿಲ್ಲ. ಆದರೆ ಅವರು ಆಚರಿಸುವ ದಸರಾ ದರ್ಬಾರಕ್ಕೆ ನಮ್ಮ ಶುಭ ಹಾರೈಕೆ ಇರುತ್ತದೆ ಎಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X