Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಪರಿಶಿಷ್ಟ ಜಾತಿ ಹಕ್ಕುಗಳಿಗಾಗಿ...

ಬೀದರ್ | ಪರಿಶಿಷ್ಟ ಜಾತಿ ಹಕ್ಕುಗಳಿಗಾಗಿ ಹೋರಾಟ ಅನಿವಾರ್ಯ : ಪ್ರಸನ್ನಕುಮಾರ್

ವಾರ್ತಾಭಾರತಿವಾರ್ತಾಭಾರತಿ25 Sept 2025 10:06 PM IST
share
ಬೀದರ್ | ಪರಿಶಿಷ್ಟ ಜಾತಿ ಹಕ್ಕುಗಳಿಗಾಗಿ ಹೋರಾಟ ಅನಿವಾರ್ಯ : ಪ್ರಸನ್ನಕುಮಾರ್

ಬೀದರ್: ಭಾರತದ ಯಾವ ರಾಜ್ಯದ ಪರಿಶಿಷ್ಟ ಜಾತಿಯವರಿಗೆ ಆಗದ ಅನ್ಯಾಯ, ಕರ್ನಾಟಕದ ಪರಿಶಿಷ್ಟ ಜಾತಿಯವರಿಗೆ ಮಾತ್ರ ಆಗುತ್ತಿದೆ. ಪರಿಶಿಷ್ಟ ಜಾತಿಯಲ್ಲಿ ಅನೈತಿಕವಾಗಿ ಸೇರಿರುವ ಜಾತಿಗಳನ್ನು ಹೊರಹಾಕಲು ಮುಂದಿನ ದಿನಗಳಲ್ಲಿ ಹೋರಾಟ ನಡೆಸಬೇಕಿದೆ ಎಂದು ಪ್ರಸನ್ನಕುಮಾರ್ ಹೇಳಿದರು.

ಬುಧವಾರ ಸಂಜೆ ನಗರದ ಡಾ.ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ನಡೆದ ಪುನಾ ಒಪ್ಪಂದದ ಅಂಗವಾಗಿ ಮತದಾನದ ಹಕ್ಕು ಮತ್ತು ಒಳಮೀಸಲಾತಿ ಕುರಿತು ಆಯೋಜಿಸಿದ್ದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

ಪರಿಶಿಷ್ಟ ಜಾತಿ ಎಂದರೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ಹಿಂದುಳಿದ ಹಾಗೂ ಅಸ್ಪೃಶ್ಯತೆಯನ್ನು ಅನುಭವಿಸುವ ಜನ. ಅಂಬೇಡ್ಕರ್ ಅವರ ಪ್ರಕಾರ ಅಸ್ಪೃಶ್ಯತೆಯ ಆಚರಣೆ ಎದುರಿಸುವವರು ಮಾತ್ರ ಅಸ್ಪೃಶ್ಯರು. ಆದರೆ ನಾವು ಆ ದಾಖಲೆಯನ್ನೇ ಉಲ್ಲಂಘಿಸುತ್ತಿದ್ದೇವೆ. ಅದರ ಪರಿಣಾಮವಾಗಿ ಔರಾದ್‌ನಲ್ಲಿ ಅಸ್ಪೃಶ್ಯರಲ್ಲದವರಾದರೂ ಶಾಸಕರಾಗುತ್ತಿದ್ದಾರೆ ಎಂದು ಅವರು ಹೇಳಿದರು.

ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲೇಖಿಸಿದ ಅವರು, ಭೋವಿ, ಲಂಬಾಣಿ, ಕೊರಮ, ಕೊರಚ ಸಮುದಾಯಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡಬೇಕು ಎಂಬ ಸ್ಪಷ್ಟ ಆದೇಶವಿದ್ದರೂ, ಸರ್ಕಾರ ಅದನ್ನು ಪಾಲಿಸದೇ ಫೈಲ್ ಅನ್ನು ಬಾಕಿ ಇಟ್ಟುಕೊಂಡಿದೆ. ಇದರಿಂದ ಅನ್ಯಾಯ ಮುಂದುವರೆದಿದ್ದು, ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದು ಎಚ್ಚರಿಸಿದರು.

ಡಾ. ಸಿದ್ದರಾಮ ಬೆಲ್ದಾಳ್ ಶರಣರು ಮಾತನಾಡಿ, ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ತಮ್ಮ ಇಡೀ ಜೀವನವನ್ನೇ ಅಸ್ಪೃಶ್ಯರ ಹಕ್ಕುಗಳಿಗಾಗಿ ಅರ್ಪಿಸಿದ್ದಾರೆ. ಮತದಾನದ ಹಕ್ಕು, ಶಿಕ್ಷಣದ ಹಕ್ಕು ಹಾಗೂ ರಾಜಕೀಯ ಮೀಸಲಾತಿ ತಂದುಕೊಟ್ಟಿದ್ದಾರೆ. ವಿಶೇಷವಾಗಿ ಹೆಣ್ಣು ಮಕ್ಕಳು, ವಿದ್ಯಾರ್ಥಿಗಳು ಮತ್ತು ಯುವಕರು ಅಂಬೇಡ್ಕರ್ ಅವರ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಅಂಬೇಡ್ಕರ್ ಯುವಸೇನೆ ರಾಜ್ಯಾಧ್ಯಕ್ಷ ರಾಜಕುಮಾರ್ ಗೂನಳ್ಳಿ, ರಾಜ್ಯ ಗೌರವಾಧ್ಯಕ್ಷ ಚಂದ್ರಕಾಂತ್ ನಿರಾಟೆ, ಉಪಾಧ್ಯಕ್ಷ ಸುರೇಶ್ ಘಾಂಗ್ರೆ, ಸುಧಾಕರ್ ಏಕಂಬೇಕರ್, ಜಿಲ್ಲಾಧ್ಯಕ್ಷ ನಿತೀಶ್ ಉಪ್ಪೆ, ಘಾಳೆಪ್ಪಾ ಭೋಸಲೆ, ವಿನೋದ್ ಅಪ್ಪೆ, ಸೋಮಶೇಖರ್ ಬಿರಾದಾರ್, ಮಾರುತಿ ಭಂಗಾರೆ ಸೇರಿದಂತೆ ಅನೇಕ ಗಣ್ಯರು ಮತ್ತು ಮುಖಂಡರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X