Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಹಿಂದುಳಿದ ವರ್ಗಗಳ ಜಿಲ್ಲಾ...

ಬೀದರ್ | ಹಿಂದುಳಿದ ವರ್ಗಗಳ ಜಿಲ್ಲಾ ಕಲ್ಯಾಣಾಧಿಕಾರಿಯನ್ನು ಕೂಡಲೇ ಅಮಾನತು ಮಾಡಲು ಗಗನ್ ಫುಲೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ11 March 2025 4:30 PM IST
share
Photo of Press meet

ಬೀದರ್ : ಭ್ರಷ್ಟಾಚಾರದಲ್ಲಿ ಮುಳುಗಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಕಲ್ಯಾಣ ಅಧಿಕಾರಿ ಸಂಗೀತಾ ಬಿರಾದಾರ್ ಅವರನ್ನು ಕೂಡಲೇ ಅಮಾನತು ಮಾಡಬೇಕು ಎಂದು ಪ್ರಜಾಪ್ರಭುತ್ವ ಸಂರಕ್ಷಣಾ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಗಗನ್ ಫುಲೆ ಅವರು ಆರೋಪಿಸಿದ್ದಾರೆ.

ಇಂದು ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಬರುವ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಸತಿ ನಿಲಯಗಳಲ್ಲಿ ಬಹುದೊಡ್ಡ ಹಗರಣ ನಡೆಯುತ್ತಿದೆ. ಜಿಲ್ಲಾ ಕಲ್ಯಾಣ ಅಧಿಕಾರಿ ಸಂಗೀತಾ ಬಿರಾದಾರ್ ಅವರು ಈ ಹಗರಣದಲ್ಲಿ ಸಂಪೂರ್ಣವಾಗಿ ಭಾಗವಹಿಸಿದ್ದಾರೆ. ಹಾಗಾಗಿ ಉನ್ನತ ಮಟ್ಟದ ತನಿಖೆ ನಡೆಸಿ, ಇವರ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡಿ, ಇವರನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿರುವ ಹಾಸ್ಟೆಲ್‌ಗಳಲ್ಲಿ ಬಯೋಮೆಟ್ರಿಕ್ ಅಳವಡಿಸಲಾಗಿದೆ. ಆದರೆ, ತಾಂತ್ರಿಕ ಸಮಸ್ಯೆಯ ನೆಪವೊಡ್ಡುವ ಮೂಲಕ ಹಾಸ್ಟೆಲ್ ವಾರ್ಡನ್‌ಗಳು ವಿದ್ಯಾರ್ಥಿಗಳ ಮ್ಯಾನ್ಯುಯಲ್ ಹಾಜರಾತಿ ಪಡೆಯುತ್ತಿದ್ದಾರೆ. ವಿದ್ಯಾರ್ಥಿಗಳು ಗೈರಾಗಿದ್ದರೂ, ಹಾಜರಾತಿಯಲ್ಲಿ ಲೆಕ್ಕ ನೀಡುತ್ತಿದ್ದಾರೆ. ಇದನ್ನು ಪರಿಶೀಲಿಸಿದ ಮೇಲಾಧಿಕಾರಿಗಳು ಕೂಡ ಬಿಲ್ ಬಿಡುಗಡೆ ಮಾಡುತ್ತಿದ್ದಾರೆ. ಹೀಗಾಗಿ ಮ್ಯಾನ್ಯುಯಲ್ ಹಾಜರಾತಿ ಸಂಖ್ಯೆ ದ್ವಿಗುಣಗೊಂಡು ಹಣ ದುರ್ಬಳಕೆಯಾಗುತ್ತಿದೆ. ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಈ ಅಕ್ರಮದ ಮಾಹಿತಿ ಇದ್ದರೂ ಕೂಡ ಅವರು ಜಾಣ ಕುರುಡರಾಗಿದ್ದಾರೆ ಎಂದು ಕಿಡಿಕಾರಿದ್ದರು.

ಭಾಲ್ಕಿಯ ಪ್ರಭಾರಿ ತಾಲ್ಲೂಕು ಅಧಿಕಾರಿ ವಿಜಯಮಾಲಾ ಅವರು 4-5 ವರ್ಷದಿಂದ ಭ್ರಷ್ಟಾಚಾರ ಮಾಡುತ್ತಾ ಬಂದಿದ್ದಾರೆ. ಅವರಿಗೆ ಜಿಲ್ಲಾ ಕಲ್ಯಾಣ ಅಧಿಕಾರಿ ಸಂಗೀತಾ ಬಿರಾದಾರ್ ಅವರು ಬೆನ್ನೆಲುಬುಬಾಗಿ ನಿಂತಿದ್ದಾರೆ. ಇವರು ಕೂಡ ಔರಾದ್ ತಾಲ್ಲೂಕಿನ ತಾಲ್ಲೂಕು ಅಧಿಕಾರಿಯಾಗಿದ್ದು, ಭ್ರಷ್ಟಾಚಾರ ಮಾಡುವುದಕ್ಕಾಗಿಯೇ ಇವರು ಪ್ರಭಾರಿಯಾಗಿ ಜಿಲ್ಲಾ ಕಲ್ಯಾಣ ಅಧಿಕಾರಿಯ ಆರ್ಡರ್ ಹಾಕಿಕೊಂಡು ಬಂದಿದ್ದಾರೆ ಅನ್ನಿಸುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.

ಈ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರಾದ ವೆಂಕಟರಾವ್ ಮೋರೆ, ಕಲ್ಲಪ್ಪ ಹಾಲಿಪುರ್ಗೆ, ದಲಿತ್ ಯೂನಿಟಿ ಮೂವ್ಮೆಂಟ್ ನ ಸಂಸ್ಥಾಪಕ ವಿನೋದ್ ರತ್ನಾಕರ್ ಹಾಗೂ ಜೈವರ್ಧನ್ ಫುಲೆ ಸೇರಿದಂತೆ ಇತರರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X