Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಸಮಾಜ, ರಾಜಕಾರಣ ಅರಿಯಲು...

Bidar | ಸಮಾಜ, ರಾಜಕಾರಣ ಅರಿಯಲು ಅಧ್ಯಾಪಕರ ಮಾರ್ಗದರ್ಶನ ಅಗತ್ಯ: ಡಾ.ಭೀಮಾಶಂಕರ್ ಬಿರಾದಾರ್

ವಾರ್ತಾಭಾರತಿವಾರ್ತಾಭಾರತಿ5 Sept 2026 7:12 PM IST
share
Bidar | ಸಮಾಜ, ರಾಜಕಾರಣ ಅರಿಯಲು ಅಧ್ಯಾಪಕರ ಮಾರ್ಗದರ್ಶನ ಅಗತ್ಯ: ಡಾ.ಭೀಮಾಶಂಕರ್ ಬಿರಾದಾರ್

ಬೀದರ್: ಮನುಷ್ಯನಲ್ಲಿ ಸಹಜವಾಗಿರುವ ಕಲಿಕೆಗೆ ಮಾತ್ರ ಅಧ್ಯಾಪಕ ಅಗತ್ಯವಿಲ್ಲ. ಸಮಾಜವನ್ನು ಗ್ರಹಿಸಲು, ರಾಜಕಾರಣವನ್ನು ಅರ್ಥಮಾಡಿಕೊಳ್ಳಲು ಹಾಗೂ ಸಾಂಸ್ಕೃತಿಕ ಅರಿವು ಮೂಡಿಸಿಕೊಳ್ಳಲು ಅಧ್ಯಾಪಕರ ಮಾರ್ಗದರ್ಶನ ಅಗತ್ಯ ಎಂದು ಶ್ರೀ ಬಸವೇಶ್ವರ ಪದವಿ ಕಾಲೇಜಿನ ಅಧ್ಯಾಪಕ ಡಾ. ಭೀಮಾಶಂಕರ್ ಬಿರಾದಾರ್ ಹೇಳಿದರು.

ಬಸವಕಲ್ಯಾಣ ನಗರದ ಎಸ್‌ಎಸ್‌ಕೆಬಿ ಕಾಲೇಜಿನಲ್ಲಿ ಐಕ್ಯೂಎಸಿ, ಎನ್‌ಎಸ್‌ಎಸ್ ಹಾಗೂ ಎನ್‌ಸಿಸಿ ವತಿಯಿಂದ ಶನಿವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅಧ್ಯಾಪಕರು ವಿದ್ಯಾರ್ಥಿಗಳಿಗೆ ಲೋಕದ ವ್ಯವಹಾರಗಳು ಹಾಗೂ ಪ್ರಕೃತಿಯ ಸಂಗತಿಗಳನ್ನು ಗ್ರಹಿಸುವ ಅರಿವಿನ ನೋಟವನ್ನು ನೀಡುತ್ತಾರೆ. ತರಗತಿ ಕೋಣೆಯಲ್ಲಿ ಪ್ರಜಾಪ್ರಭುತ್ವದ ವಾತಾವರಣವಿದ್ದರೆ, ಅಲ್ಲಿಂದ ಹೊರಬರುವ ವಿದ್ಯಾರ್ಥಿಗಳಲ್ಲಿ ಸ್ವಾತಂತ್ರ್ಯ ಹಾಗೂ ಸಮಾನತೆಯ ಪರಿಕಲ್ಪನೆಗಳು ಗಟ್ಟಿಯಾಗುತ್ತವೆ. ಸಂಶೋಧನೆಯ ಹಿಂದಿನ ಶ್ರಮ ಹಾಗೂ ಸಿದ್ಧಾಂತದ ತಾತ್ವಿಕತೆಯನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಡುವ ಜವಾಬ್ದಾರಿ ಅಧ್ಯಾಪಕರ ಮೇಲಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ. ಶಿವಕುಮಾರ್ ಪಾಟೀಲ್ ಮಾತನಾಡಿ, ಭಾರತ ವೈವಿಧ್ಯತೆಯಿಂದ ಕೂಡಿದ ದೇಶವಾಗಿದ್ದು, ಹಲವು ಪಂಥಗಳು ಹಾಗೂ ತತ್ವಗಳನ್ನು ಹೊಂದಿದೆ. ಗುರು ಪರಂಪರೆಗೆ ವಿಶೇಷ ಸ್ಥಾನಮಾನ ಹೊಂದಿರುವ ದೇಶದಲ್ಲಿ ವಿವಿಧ ವಿಚಾರಗಳನ್ನು ವಿಶ್ಲೇಷಿಸಿ ಒಮ್ಮತಕ್ಕೆ ಬರುವ ಪರಂಪರೆಯಿದೆ. ವೈವಿಧ್ಯತೆಯಲ್ಲಿ ಏಕತೆ ಕಾಣುವುದೇ ಭಾರತದ ಸೌಂದರ್ಯ ಎಂದು ಹೇಳಿದರು.

ಭಾರತದಲ್ಲಿ ಆಕ್ರಮಣಶೀಲತೆಗಿಂತ ಶಾಂತಿ ಹಾಗೂ ಸೌಹಾರ್ದತೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಇದರ ಮೂಲ ಇಲ್ಲಿನ ಗುರು ಪರಂಪರೆಯಲ್ಲಿದೆ. ಗುರುಗಳು ಕ್ರೌರ್ಯವನ್ನು ಪ್ರಚೋದಿಸುವ ಬದಲು ಸಹನೆ, ಸೌಹಾರ್ದತೆ ಹಾಗೂ ಸಹಬಾಳ್ವೆಗೆ ಆದ್ಯತೆ ನೀಡಿದ್ದಾರೆ. ಪಾಠದ ಜತೆಗೆ ವಿದ್ಯಾರ್ಥಿಗಳಿಗೆ ಮೌಲ್ಯಗಳನ್ನು ತಿಳಿಸುವ ಹೊಣೆಗಾರಿಕೆಯೂ ಶಿಕ್ಷಕರ ಮೇಲಿದೆ ಎಂದರು.

ಸಂವಿಧಾನ ನಮಗೆ ಹಕ್ಕುಗಳನ್ನು ನೀಡುವುದರ ಜತೆಗೆ ಕರ್ತವ್ಯ ಪ್ರಜ್ಞೆಯನ್ನೂ ಬೆಳೆಸಿದೆ. ದೇಶದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರು ಸ್ವಾತಂತ್ರ್ಯಪೂರ್ವದಲ್ಲಿಯೇ ಶೈಕ್ಷಣಿಕ ಕ್ಷೇತ್ರದಲ್ಲಿ ಮಹತ್ವದ ಕೆಲಸ ಮಾಡಿದ್ದಾರೆ. ಕುಟುಂಬದಲ್ಲಿ ತಾಯಿ ಮೊದಲ ಗುರುವಾಗಿದ್ದರೆ, ಅಧ್ಯಾಪಕರು ನಂತರದ ಗುರುಗಳಾಗುತ್ತಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಹಾಗೂ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಸುರೇಶ್ ಎಚ್.ಆರ್. ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಉಪನ್ಯಾಸಕ ಪ್ರೊ. ವಿಠೋಬಾ ಡೊಣ್ಣೇಗೌಡರ್‌, ಸೂರ್ಯಕಾಂತ್‌ ನಾಸೆ, ನಾಗರಾಜ್ ನಿಂಬಾಳ್ಕರ್, ಭಾರತಿ ಮಠ್, ವೈಶಾಲಿ, ಸತೀಶ್ ರಾಥೋಡ್, ಅಶ್ವಿನಿ ಇದ್ದರು. ಐಕ್ಯೂಎಸಿ ಸಂಯೋಜಕ ಡಾ. ವಿಜಯಕುಮಾರ್‌ ತಳವಾರ್‌ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಭೀಮಶಂಕರ್‌ ಪೂಜಾರಿ ನಿರೂಪಿಸಿದರು. ಕಲ್ಯಾಣಪ್ಪ ನಾವದಗಿ ವಂದಿಸಿದರು.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X