Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಎರಡು ವರ್ಷದಿಂದ ನಡೆಯುತ್ತಿರುವ...

ಬೀದರ್ | ಎರಡು ವರ್ಷದಿಂದ ನಡೆಯುತ್ತಿರುವ ಕಾರಂಜಾ ಸಂತ್ರಸ್ತರ ಸತ್ಯಾಗ್ರಹ ಅಂತ್ಯ

ವಾರ್ತಾಭಾರತಿವಾರ್ತಾಭಾರತಿ11 Jan 2025 6:28 PM IST
share
ಬೀದರ್ | ಎರಡು ವರ್ಷದಿಂದ ನಡೆಯುತ್ತಿರುವ ಕಾರಂಜಾ ಸಂತ್ರಸ್ತರ ಸತ್ಯಾಗ್ರಹ ಅಂತ್ಯ

ಬೀದರ್ : ಕಾರಂಜಾ ಸಂತ್ರಸ್ತರು ವೈಜ್ಞಾನಿಕ ಪರಿಹಾರಕ್ಕಾಗಿ ಆಗ್ರಹಿಸಿ ಸುಮಾರು ಎರಡು ವರ್ಷಕ್ಕಿಂತ ಹೆಚ್ಚು ದಿನಗಳ ಕಾಲ ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿನ ಫುಟ್ ಪಾತ್ ಮೇಲೆ ನಡೆಸಿದ ಅಹೋರಾತ್ರಿ ಧರಣಿ ಸತ್ಯಾಗ್ರಹ ಇಂದು ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರ ಭರವಸೆ ಮೇರೆಗೆ ಕೈ ಬಿಡಲಾಯಿತು.

ಇಂದು ಅಹೋರಾತ್ರಿ ಧರಣಿ ಸತ್ಯಾಗ್ರಹ ಸ್ಥಗಿತ ಕಾರ್ಯಕ್ರಮದಲ್ಲಿ ಈಶ್ವರ್ ಖಂಡ್ರೆ ಅವರು ಮಾತನಾಡಿ, ಕಾರಂಜಾ ಜಲಾಶಯವು ಬೀದರ್, ಹುಮನಾಬಾದ್, ಚಿಟಗುಪ್ಪ ಹಾಗೂ ಭಾಲ್ಕಿ ಸೇರಿದಂತೆ ಜಿಲ್ಲಾದ್ಯಂತ ಜನರಿಗೆ ಕುಡಿಯುವ ನೀರು ಪೂರೈಸುತ್ತಿದೆ. ಇದು ನಮ್ಮ ಜಿಲ್ಲೆಯ ಜೀವ ಜಲಾಶಯವಾಗಿದೆ. ಈ ಜಲಾಶಯದಿಂದ ಜಿಲ್ಲೆಯ 18 ರಿಂದ 20 ಲಕ್ಷ ಜನರಿಗೆ ಸಹಾಯವಾಗುತ್ತಿದೆ ಎಂದು ಹೇಳಿದರು.

ಈ ಜಲಾಶಯದಲ್ಲಿ 7 ರಿಂದ 8 ಗ್ರಾಮಗಳು ಸಂಪೂರ್ಣವಾಗಿ ಮುಳುಗಿವೆ. 20 ಸಾವಿರ ಎಕರೆ ಭೂಮಿಯನ್ನು ಸ್ವಾಧಿನಪಡಿಸಿಕೊಳ್ಳಲಾಗಿತ್ತು. 1970 ರಿಂದ ಇಲ್ಲಿವರೆಗೆ ಹೋರಾಟಗಳು ನಡೆದಿವೆ. ಅದಾಗಲೇ ಕೆಲವೊಂದಿಷ್ಟು ಜನ ಕೋರ್ಟಿಗೆ ಹೋಗಿ ಪರಿಹಾರ ಪಡೆದಿದ್ದಾರೆ. ಆದರೆ ಮುಗ್ಧರು, ಯಾರಿಗೆ ಕೋರ್ಟ್ ಗೆ ಹೋಗುವುದಕ್ಕೆ ಆಗುವುದಿಲ್ಲವೋ ಅವರಿಗೆ ಪರಿಹಾರ ಸಿಕ್ಕಿಲ್ಲ ಎಂದರು.

ಮುಳುಗಡೆಯಾದ ಸಮಯದಲ್ಲಿ ಆ ಭೂಮಿಯ ಬೆಲೆ ಅತ್ಯಂತ ಕಡಿಮೆ ಇತ್ತು. ಆದರೆ ಅದಕ್ಕೆ ಇವಾಗ ಬೆಲೆ ಕಟ್ಟಲು ಆಗುವುದಿಲ್ಲ. ಕೋರ್ಟ್ ತೀರ್ಪಿನ ಆಧಾರದ ಮೇಲೆ ಅವರು ಪರಿಹಾರ ಪಡೆದ ಬೆಲೆಯೇ ಕೇಳುತಿದ್ದೀರಿ. ನಿಮ್ಮ ಬೇಡಿಕೆಯಲ್ಲಿ ಯಾವುದೇ ತಪ್ಪಿಲ್ಲ. ಈ ಸಮಸ್ಯೆ ಬಗೆಹರಿಸುವುದಕ್ಕೋಸ್ಕರ ಮುಖ್ಯಮಂತ್ರಿಗಳು ತಾಂತ್ರಿಕ ಸಮಿತಿ ರಚನೆ ಮಾಡಿದ್ದಾರೆ. ಆದಷ್ಟು ಬೇಗ ನಾವು ಈ ಸಮಿತಿಯ ವರದಿಯನ್ನು ಬಿಡುಗಡೆ ಮಾಡಿ ನಾವು ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುತ್ತೇವೆ ಎಂದು ಭರವಸೆ ನೀಡಿದರು.

ಸಚಿವರ ಭರವಸೆಯ ಮೇರೆಗೆ ಸತ್ಯಾಗ್ರಹ ಹಿಂಪಡೆಯುವ ಬಗ್ಗೆ ಈ ಹೋರಾಟಕ್ಕೆ ನಿರಂತರವಾಗಿ ಬೆಂಬಲಿಸಿದ ಕಲ್ಯಾಣ ಕರ್ನಾಟಕದ ಹಿರಿಯ ಹೋರಾಟಗಾರ ಡಾ.ಲಕ್ಷ್ಮಣ ದಸ್ತಿಯವರು ರೈತ ಹಿತರಕ್ಷಣಾ ಸಮಿತಿಗೆ ಮನವರಿಕೆ ಮಾಡಿದರು. ಇದಕ್ಕೆ ರೈತ ಸಂತ್ರಸ್ತರ ಪರವಾಗಿ ಸಮಿತಿಯ ಅಧ್ಯಕ್ಷರಾದ ಚಂದ್ರಶೇಖರ್ ಪಾಟೀಲ್ ಹುಚಕನಳ್ಳಿ ಅವರು ಸರ್ವ ಸಮಿತಿಯಿಂದ ಒಪ್ಪಿಗೆ ನೀಡಿ ಸತ್ಯಾಗ್ರಹ ಹಿಂಪಡೆಯುವ ಬಗ್ಗೆ ಪ್ರಕಟಿಸಿದರು.

ಈ ಸಂದರ್ಭದಲ್ಲಿ ಶಾಸಕ ಶೈಲೆಂದ್ರ ಬೆಲ್ದಾಳೆ, ಮಾಜಿ ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ್ ಅರಳಿ ಮುಖಂಡರಾದ ಬಸವರಾಜ ಜಾಬಶೆಟ್ಟಿ, ಬಸವರಾಜ ದೇಶಮುಖ್, ಪ್ರೊ.ಆರ್ ಕೆ ಹುಡಗಿ, ಪ್ರೊ. ಬಸವರಾಜ್ ಕುಮ್ನೂರ್, ಮನ್ನನ್ ಶೇಠ್, ಎಮ್ ಡಿ ಗೌಸ್, ವಿನಯ್ ಮಾಳಗೆ, ರೋಹನಕುಮಾರ್, ಕೇದಾರನಾಥ್ ಪಾಟೀಲ್, ಮಹೇಶ್ ಮೂಲಗೆ ಹಾಗೂ ಭೀಮರೆಡ್ಡಿ ಬೆಳ್ಳೋರ್ ಸೇರಿದಂತೆ ನೂರಾರು ಜನ ರೈತ ಸಂತ್ರಸ್ತರು ಉಪಸ್ಥಿತರಿದ್ದರು.

Tags

BidarKaranja
share
ವಾರ್ತಾಭಾರತಿ
ವಾರ್ತಾಭಾರತಿ
Next Story
X