Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಹೆಚ್‌ಐವಿ ಕುರಿತು ಹೆಚ್ಚು...

ಬೀದರ್ | ಹೆಚ್‌ಐವಿ ಕುರಿತು ಹೆಚ್ಚು ಅರಿವು ಮೂಡಿಸುವ ಕಾರ್ಯಕ್ರಮವಾಗಬೇಕು : ಡಾ.ಅನೀಲಕುಮಾರ್ ಚಿಂತಾಮಣಿ

ವಾರ್ತಾಭಾರತಿವಾರ್ತಾಭಾರತಿ9 Oct 2025 8:15 PM IST
share
ಬೀದರ್ | ಹೆಚ್‌ಐವಿ ಕುರಿತು ಹೆಚ್ಚು ಅರಿವು ಮೂಡಿಸುವ ಕಾರ್ಯಕ್ರಮವಾಗಬೇಕು : ಡಾ.ಅನೀಲಕುಮಾರ್ ಚಿಂತಾಮಣಿ

ಬೀದರ್ : ಸಾರ್ವಜನಿಕರಲ್ಲಿ ಮತ್ತು ಯುವಕರಲ್ಲಿ ಹೆಚ್‌ಐವಿ, ಏಡ್ಸ್ ಕುರಿತಂತೆ ಹೆಚ್ಚು ಅರಿವು ಮೂಡಿಸುವ ಕಾರ್ಯಕ್ರಮವಾಗಬೇಕು. ಆಗ ಮಾತ್ರ ಏಡ್ಸ್ ನಿಯಂತ್ರಿಸಲು ಸಾಧ್ಯ ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಅನೀಲಕುಮಾರ್ ಚಿಂತಾಮಣಿ ಅವರು ತಿಳಿಸಿದರು.

ಗುರುವಾರ ನಗರದ ಬರಿದ್‌ಶಾಹಿ ಉದ್ಯಾನವನದಲ್ಲಿ ಹೆಚ್ಐವಿ, ಏಡ್ಸ್ ಕುರಿತು ಅರಿವು ಮೂಡಿಸಲು ಯುವಜನೋತ್ಸವ ಕಾರ್ಯಕ್ರಮದ ನಿಮಿತ್ಯ ಕಾಲೇಜು ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಂದ ಹಮ್ಮಿಕೊಂಡಿದ್ದ ಮ್ಯಾರಾಥಾನ್‌ ಕಾರ್ಯಕ್ರಮಕ್ಕೆ ಹಸಿರು ಬಾವುಟ ತೋರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಎಚ್‌ಐವಿ, ಏಡ್ಸ್ ಸೋಂಕು ವ್ಯಾಪಿಸಲು ಆರೋಗ್ಯದ ತಿಳುವಳಿಕೆ ಕೊರತೆ ಮತ್ತು ಅದನ್ನು ಕಡೆಗಣಿಸುತ್ತಿರುವುದೇ ಪ್ರಮುಖ ಕಾರಣವಾಗಿದೆ. ಇದು ಮುಂದಿನ ಪೀಳಿಗೆಗೆ ಹರಡದಂತೆ ಜಾಗೃತರಾಗುವುದು ಅಗತ್ಯವಾಗಿದೆ ಎಂದರು.

ಪ್ರಾಸ್ತಾವಿಕವಾಗಿ ಜಿಲ್ಲಾ ಐಸಿಟಿಸಿ ಮೇಲ್ವಿಚಾರಕ ಸೂರ್ಯಕಾಂತ್ ಅವರು ಮಾತನಾಡಿ, ಹೆಚ್ಐವಿ, ಏಡ್ಸ್ ಮತ್ತು ಎಸ್‌ಟಿಐ ತಡೆಗಟ್ಟಲು ಅರಿವು ಮಾಸಾಚರಣೆಯ ಕುರಿತು ಮಾಹಿತಿ ನೀಡಿದರು.

ಒಟ್ಟು 110 ಜನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಮ್ಯಾರಾಥಾನ್‌ನಲ್ಲಿ ಭಾಗವಹಿಸಿದ್ದರು. ಈ ಮ್ಯಾರಾಥಾನವು ನಗರದ ಬರಿದ್‌ಶಾಹಿ ಉದ್ಯಾನವನದಿಂದ ಮಡಿವಾಳ ವೃತ್ತ, ಬಿರಾದರ್ ಆಸ್ಪತ್ರೆ, ಸಿದ್ದಾರ್ಥ ಕಾಲೇಜು ಎದುರುಗಡೆಯಿಂದ, ರಾಜೀವಗಾಂಧಿ ವೃತ್ತದ ಮೂಲಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯದವರೆಗೆ ನಡೆಯಿತು. ಮ್ಯಾರಾಥಾನಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಮತ್ತು ವಿದ್ಯಾರ್ಥಿನಿಯರಿಗೆ ಮೆಡಲ್, ಪ್ರಶಸ್ತಿ ಪತ್ರ ಮತ್ತು ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಟ್ರಾಫಿಕ್ ಪೊಲೀಸ್ ಎಎಸ್‌ಐ ವಿಜಯಕುಮಾರ್, ಬ್ರಿಮ್ಸ್ ಜಿಲ್ಲಾ ಆಸ್ಪತ್ರೆಯ ಐಸಿಟಿಸಿ(ಎ) ಕೇಂದ್ರದ ಪ್ರಯೋಗ ಶಾಲಾ ತಂತ್ರಜ್ಞಾರಾದ ಅರವಿಂದ, ಡ್ಯಾಪ್ಕು, ಐಸಿಟಿಸಿ, ಪಿಪಿಟಿಸಿಟಿ, ಎಆರ್‌ಟಿ, ಎಸ್ ಆರ್ ಎಲ್, ಡಿಎಸ್‌ಆರ್‌ಸಿ, ಶರಣ ತತ್ವ, ಪ್ರವರ್ಧ, ಎಲ್‌ಬಿಇಎಸ್ ಮತ್ತು ಬೆಳದಿಂಗಳು ನೆಟವರ್ಕ್ ಸಿಬ್ಬಂದಿಯವರು ಮತ್ತು ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಪಾಲ್ಗೊಂಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X