Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಪಾರಂಪರಿಕ ವೈದ್ಯರು ಸದಾ ಶೋಧನೆ...

ಬೀದರ್ | ಪಾರಂಪರಿಕ ವೈದ್ಯರು ಸದಾ ಶೋಧನೆ ಮಾಡುತ್ತಾ ಉತ್ತಮ ಚಿಕಿತ್ಸೆ ನೀಡಬೇಕು : ಡಾ.ವಿ.ಪಿ.ಸಿಂಗ್

15ನೇ ಪಾರಂಪರಿಕ ವೈದ್ಯ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ3 March 2025 5:44 PM IST
share
ಬೀದರ್ | ಪಾರಂಪರಿಕ ವೈದ್ಯರು ಸದಾ ಶೋಧನೆ ಮಾಡುತ್ತಾ ಉತ್ತಮ ಚಿಕಿತ್ಸೆ ನೀಡಬೇಕು : ಡಾ.ವಿ.ಪಿ.ಸಿಂಗ್

ಬೀದರ್ : ಪಾರಂಪರಿಕ ವೈದ್ಯ ಪದ್ಧತಿಗೆ ಭಾರತದಲ್ಲಿ ತನ್ನದೇ ಆದ ಶ್ರೀಮಂತ ಇತಿಹಾಸವಿದೆ. ವೈದ್ಯರು ಸದಾ ಶೋಧನೆ ಮಾಡುತ್ತಾ, ಜನತೆಗೆ ಉತ್ತಮ ಚಿಕಿತ್ಸೆ ನೀಡಬೇಕು ಎಂದು ತೋಟಗಾರಿಕಾ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ.ವಿ.ಪಿ.ಸಿಂಗ್ ತಿಳಿಸಿದರು.

ಇಂದು ಜಿಲ್ಲಾಡಳಿತ, ಕರ್ನಾಟಕ ಜೀವ ವೈವಿಧ್ಯ ಮಂಡಳಿ, ಪಾರಂಪರಿಕ ವೈದ್ಯ ಪರಿಷತ್ತು ಹಾಗೂ ಲಿಂಗಸುಗೂರಿನ ಕಲ್ಯಾಣ ಕರ್ನಾಟಕ ಪಾರಂಪರಿಕ ವೈದ್ಯ ಪರಿಷತ್ತು ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ನಡೆಯುತ್ತಿರುವ ʼ15ನೇ ಪಾರಂಪರಿಕ ವೈದ್ಯ ಸಮ್ಮೇಳನʼದಲ್ಲಿ ಅವರು ಔಷಧಿ ಸಸ್ಯಗಳನ್ನು ಬೆಳೆಸುವುದು ಮತ್ತು ಮಾರಾಟ ಮಾಡುವುದು ಹಾಗೂ ಔಷಧಿ ಸಸ್ಯಗಳ ಸಂರಕ್ಷಣೆ ಮಾಡುವ ಬಗ್ಗೆ ಮಾತನಾಡಿದರು.

ಔಷಧಿ ಸಸ್ಯಗಳು ಬೆಳೆಸುವುದು ಮತ್ತು ಮಾರಾಟ ಮಾಡುವುದರ ಜೊತೆಗೆ ಅವುಗಳನ್ನು ಸಂರಕ್ಷಣೆ ಮಾಡಬೇಕಾದ ಅವಶ್ಯಕತೆ ಇದೆ. ಸದ್ಯ ಪಾರಂಪರಿಕ ಔಷಧ ಕ್ಷೇತ್ರವು ಒಟ್ಟು 55 ಬಿಲಿಯನ್ ಡಾಲರ್ ವ್ಯವಹಾರ ಮಾಡುತ್ತಿದೆ ಎಂದರು.

ನಾಟಿ ವೈದ್ಯರು ಹೊಸ ಹೊಸ ಸಸ್ಯಗಳಾದ ಅಶ್ವಗಂಧ, ಮುಸ್ಲಿ ಗಿಡ, ನಾಗದಾಲಿ ಗಿಡ ಹಾಗೂ ಭೋಮಿ ಆವ್ಲಾ ಇವುಗಳ ಉಪಯೋಗ ಅರಿತು ಜನತೆಗೆ ಚಿಕಿತ್ಸೆ ನೀಡಬೇಕು. ಸದಾ ಸಂಶೋಧನಾ ಶೀಲರಾಗಿ ರಾಜ್ಯದ ಪಾರಂಪರಿಕ ವೈದ್ಯರೊಂದಿಗೆ ಸಂಪರ್ಕ ಸಾಧಿಸಿ ಉತ್ತಮ ವೈದ್ಯರಾಗಿ ಹೊರಹೊಮ್ಮಬೇಕು. ಹಲವು ದೀರ್ಘಕಾಲಿಕ ಕಾಯಿಲೆಗಳನ್ನು ಹೊಡೆದೋಡಿಸುವ ಶಕ್ತಿ ಆಯುರ್ವೇದಕ್ಕೆ ಇದೆ ಎಂದು ಡಬ್ಲುಎಚ್ಓ ಅಭಿಪ್ರಾಯಪಟ್ಟಿದೆ ಎಂದು ಅವರು ತಿಳಿಸಿದರು.

ಎನ್.ಕೆ.ಜಾಬಶೆಟ್ಟಿ ಆಯುರ್ವೇದ ಮೆಡಿಕಲ್ ಕಾಲೇಜಿನ ಉಪನ್ಯಾಸಕ ಡಾ.ಧೂಳಪ್ಪ ಅವರು ಮಾತನಾಡಿ, ಔಷಧ ಇಲ್ಲದ ಸಸ್ಯಗಳಿಲ್ಲ. ಅದನ್ನು ಯುಕ್ತಿಯಿಂದ ಬಳಸಿಕೊಳ್ಳುವ ಜಾಣ್ಮೆ ಪಾರಂಪರಿಕ ವೈದ್ಯರಲ್ಲಿ ಇರಬೇಕು. ತನ್ಮೂಲಕ ಆಯುರ್ವೇದಕ್ಕೆ ವೈಜ್ಞಾನಿಕ ಪರಿವರ್ತನೆ ಕೊಡಬಹುದು. ಜೀವ ಸಂರಕ್ಷಕ ಔಷಧಿಗಳನ್ನು ತಯಾರಿಸುವ ಚಾಕಚಕ್ಯತೆ ವೈದ್ಯರಲ್ಲಿ ಇರಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಕರ್ನಾಟಕ ಜೀವ ವೈವಿಧ್ಯ ಮಂಡಳಿ ಉಪನಿರ್ದೇಶಕಿ ಡಾ.ಪವಿತ್ರಾ, ಪಾರಂಪರಿಕ ವೈದ್ಯ ಪರಿಷತ್ತಿನ ಕಾರ್ಯದರ್ಶಿ ಅನುಗನಾಳು ಕೃಷ್ಣಮೂರ್ತಿ, ದಿನಕರರಾವ್ ಕುಲಕರ್ಣಿ, ವಿಶ್ವನಾಥ್ ವೈದ್ಯ, ರಮೇಶ್ ಮಹೇಂದ್ರಕರ್, ಪ್ರಕಾಶ್ ಬೀಳೂರ್, ವಿರೂಪಾಕ್ಷ ಕೋಡಿಹಾಳ್, ಸುಭಾಷ ನೇಳಗೆ, ವೈಜಿನಾಥ್ ಪಾಟೀಲ್, ಹಾಗೂ ಡಾ. ರಾಜಕುಮಾರ್ ಹೆಬ್ಬಾಳೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X