Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಕೋಮುಗಲಭೆಗೆ ಪ್ರಚೋದಿಸುವ...

ಬೀದರ್ | ಕೋಮುಗಲಭೆಗೆ ಪ್ರಚೋದಿಸುವ ಆರೆಸೆಸ್ಸ್‌, ಬಿಜೆಪಿ ವಿರುದ್ಧ ಒಗ್ಗಟ್ಟಾಗಿ ಹೋರಾಡಬೇಕು : ಬಾಬುರಾವ್ ಹೊನ್ನಾ

ವಾರ್ತಾಭಾರತಿವಾರ್ತಾಭಾರತಿ11 Aug 2025 6:30 PM IST
share
ಬೀದರ್ | ಕೋಮುಗಲಭೆಗೆ ಪ್ರಚೋದಿಸುವ ಆರೆಸೆಸ್ಸ್‌, ಬಿಜೆಪಿ ವಿರುದ್ಧ ಒಗ್ಗಟ್ಟಾಗಿ ಹೋರಾಡಬೇಕು : ಬಾಬುರಾವ್ ಹೊನ್ನಾ
ಭಾರತ ಕಮ್ಯೂನಿಸ್ಟ್ ಪಕ್ಷದ 25ನೇ ಜಿಲ್ಲಾ ಸಮ್ಮೇಳನ

ಬೀದರ್ : ಕೋಮುಗಲಭೆಗೆ ಪ್ರಚೋದಿಸುವ ಆರೆಸೆಸ್ಸ್‌ ಮತ್ತು ಬಿಜೆಪಿ ವಿರುದ್ಧ ಎಡಪಂಥೀಯ, ಪ್ರಜಾಪ್ರಭುತ್ವ ಹಾಗೂ ಜಾತ್ಯಾತೀತ ಶಕ್ತಿಗಳು ಒಂದಾಗಿ ಹೋರಾಡಬೇಕು ಎಂದು ಬಾಬುರಾವ್ ಹೊನ್ನಾ ಅವರು ಕರೆ ನೀಡಿದರು.

ನಗರದ ಸ್ಟಾರ್ ಲಾಡ್ಜ್ ಸಭಾಂಗಣದಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷದ ಬೀದರ ಜಿಲ್ಲಾ ಮಂಡಳಿಯ 25ನೇ ಜಿಲ್ಲಾ ಸಮ್ಮೇಳನದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಭಾರತದ ಆರ್ಥಿಕ ನೀತಿ ಸತ್ತಿದೆ ಎನ್ನುವ ಅಮೆರಿಕನ್ ಸಾಮ್ರಾಜ್ಯಶಾಹಿಯನ್ನು ತೀವ್ರವಾಗಿ ಖಂಡಿಸಿದ ಅವರು, ಪ್ರಸ್ತುತ ಭಾರತದ ಆರ್ಥಿಕತೆ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಪಕ್ಷದ ರಾಜ್ಯ ಸಹ ಕಾರ್ಯದರ್ಶಿ ಬಿ. ಅಮ್ಜದ್ ಅವರು ಮಾತನಾಡಿ, ಅಮೆರಿಕದ ಡೋನಾಲ್ಡ್ ಟ್ರಂಪ್ ಭಾರತಕ್ಕೆ ನೀಡಿದ ಆರ್ಥಿಕ ಬೆದರಿಕೆಗಳನ್ನು ಉಲ್ಲೇಖಿಸಿ, ಬಿಜೆಪಿ ಸರ್ಕಾರ ಇದಕ್ಕೆ ಸಮರ್ಪಕ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಆರೋಪಿಸಿದರು. ಸ್ವಾಮಿನಾಥನ್ ಆಯೋಗ ಶಿಫಾರಸ್ಸಿನಂತೆ ಎಂ.ಎಸ್.ಪಿ ಕಾನೂನು ಜಾರಿಗೆ ಮಾಡಬೇಕು ಎಂದು ಒತ್ತಾಯಿಸಿದರು.

ಅಖಿಲ ಭಾರತ ಕಿಸಾನ್ ಸಭಾ ರಾಜ್ಯಾಧ್ಯಕ್ಷ ಮೌಲಾಮುಲ್ಲಾ ಅವರು ಮಾತನಾಡಿದರು.

ಸಮ್ಮೇಳನದಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ಜಿಲ್ಲಾ ಮಂಡಳಿಗೆ 21 ಸದಸ್ಯರ ಆಯ್ಕೆ ಮಾಡಲಾಯಿತು. ಜಿಲ್ಲಾ ಕಾರ್ಯದರ್ಶಿಯಾಗಿ ನಝೀರ್ ಅಹ್ಮದ್, ಸಹ ಕಾರ್ಯದರ್ಶಿಗಳಾಗಿ ರಾಮಯ್ಯಾ ಮಠಪತಿ ಮತ್ತು ಎಂ.ಡಿ ಶಫಾಯತ್ ಅಲಿ, ಖಜಾಂಚಿಯಾಗಿ ಜೈಶೀಲ್, ಸದಸ್ಯರಾಗಿ ಬಾಬುರಾವ್ ಹೊನ್ನಾ, ಸಿಂಧು ತಾಯಿ ಮಾನೆ ಹಾಗೂ ಸೂರ್ಯಕಾಂತ್ ಮದಕಟ್ಟಿ ಸೇರಿದಂತೆ ಪ್ರಮುಖ ಪದಾಧಿಕಾರಿಗಳ ಪಟ್ಟಿ ಪ್ರಕಟಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X