Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ |ನೆರೆ ಹೊರೆಯವರ ಸುಖ, ದುಃಖದಲ್ಲಿ...

ಬೀದರ್ |ನೆರೆ ಹೊರೆಯವರ ಸುಖ, ದುಃಖದಲ್ಲಿ ಭಾಗಿಯಾಗಬೇಕು : ಅಮೀನುಲ್ ಹಸನ್

ವಾರ್ತಾಭಾರತಿವಾರ್ತಾಭಾರತಿ25 Nov 2025 9:30 PM IST
share
ಬೀದರ್ |ನೆರೆ ಹೊರೆಯವರ ಸುಖ, ದುಃಖದಲ್ಲಿ ಭಾಗಿಯಾಗಬೇಕು : ಅಮೀನುಲ್ ಹಸನ್
ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ನೆರೆ ಹೊರೆಯವರ ಹಕ್ಕುಗಳು ಅಭಿಯಾನ ಕಾರ್ಯಕ್ರಮ

ಬೀದರ್ : ವೈಯಕ್ತಿಕ ಜೀವನ ಸಾಗಿಸುತ್ತಿರುವ ಮನುಷ್ಯನನ್ನು ಸಾಮಾಜಿಕ ಜೀವನದತ್ತ ಕರೆ ತರುವ ಅಗತ್ಯವಿದೆ ಎಂದು ಜಮಾಅತೆ ಇಸ್ಲಾಮಿ ಹಿಂದ್ ಅಖಿಲ ಭಾರತ ಉಪಾಧ್ಯಕ್ಷ ಎಸ್. ಅಮೀನುಲ್ ಹಸನ್ ಅವರು ಹೇಳಿದರು.

ನಗರದ ಜಾಮಾ ಮಸೀದಿಯಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ನಡೆದ ನೆರೆ ಹೊರೆಯವರ ಹಕ್ಕುಗಳ ಕುರಿತು ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಎಸ್. ಅಮೀನುಲ್ ಹಸನ್, ಹಿಂದೆ ನೆರೆ ಹೊರೆಯವರ ಮಧ್ಯ ಒಂದೇ ಗೋಡೆ ಇರುತ್ತಿತ್ತು. ಅದರ ಕಿಟಕಿಯಿಂದಲೇ ವಸ್ತುಗಳ ವಿನಿಮಯ, ಯೋಗಕ್ಷೇಮ ವಿಚಾರಣೆ ಆಗುತ್ತಿತ್ತು. ನಗರದಲ್ಲಷ್ಟೇ ಕಾಣುತ್ತಿದ್ದ ಅಪರಿಚಿತ ಸಂಬಂಧಗಳು ಈಗ ಹಳ್ಳಿಗಳಲ್ಲೂ ಕಾಣ ಸಿಗುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.

ಇಂದು ಸಣ್ಣ ಸಣ್ಣ ವಿಷಯಗಳಿಗಾಗಿ ಪರಸ್ಪರರ ಮಧ್ಯ ಜಗಳಗಳು ಆಗುತ್ತಿವೆ. ನೆರೆ ಹೊರೆಯವರಿಂದ ದೂರ ಇರುವುದರಿಂದ ಮನುಷ್ಯ ನೈತಿಕ, ಆಧ್ಯಾತ್ಮಿಕ ಅಧಃಪತನ ಹಾಗೂ ಮನೋರೋಗಕ್ಕೆ ತುತ್ತಾಗುತ್ತಾನೆ. ನೆರೆ ಹೊರೆಯವರಿಗೆ ತೊಂದರೆ ಕೊಡಬಾರದು. ಅವರೊಂದಿಗೆ ಸದ್ವರ್ತನೆ ತೋರಬೇಕು. ಅವರಿಗೆ ಸಹಾಯ ಮಾಡಬೇಕು. ಅವರ ತಪ್ಪನ್ನು ಕ್ಷಮಿಸಬೇಕು. ಸುಖ, ದುಃಖದಲ್ಲಿ ಭಾಗಿಯಾಗಬೇಕು. ಅವರಿಗೆ ಕಾಣಿಕೆಗಳನ್ನು ನೀಡಬೇಕು. ಇದರಿಂದ ಪರಸ್ಪರರ ಮಧ್ಯೆ ಪ್ರೀತಿ ಹೆಚ್ಚುತ್ತದೆ ಎಂದು ಎಸ್.ಅಮೀನುಲ್ ಹಸನ್ ತಿಳಿಸಿದರು.

ಜಮಾಅತೆ ಇಸ್ಲಾಮಿ ಹಿಂದ್ ಸ್ಥಳೀಯ ಘಟಕದ ಅಧ್ಯಕ್ಷ ಮುಹಮ್ಮದ್ ಮೌಅಝಮ್ ಮಾತನಾಡಿ, ಮಾದರಿ ನೆರೆ ಹೊರೆ, ಮಾದರಿ ಸಮಾಜ ಘೋಷ ವಾಕ್ಯದೊಂದಿಗೆ ಅಭಿಯಾನ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮುಹಮ್ಮದ್ ತಾಹಾ ಕಲೀಮುಲ್ಲಾಹ ಕುರ್‌ಆನ್‌ ಪಠಣ ಮಾಡಿದರು. ಮುಹಮ್ಮದ್ ಆಸಿಫುದ್ದೀನ್, ಡಾ. ಇರ್ಷಾದ್ ನವೀದ್ ಸಲಾವುದ್ದೀನ್, ಎಹತೆಶಾಮ್, ಮುಹಮ್ಮದ್ ನಿಝಾಮುದ್ದೀನ್ ಉಪಸ್ಥಿತರಿದ್ದರು. ಮುಹಮ್ಮದ್ ಆರಿಫುದ್ದೀನ್ ಅವರು ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X