ಬೀದರ್ | ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಡಾ.ಅಂಬೇಡ್ಕರ್ ಫೋಟೋ ಇಡದಿದಕ್ಕೆ ಮಹಿಳೆಯರಿಂದ ಪ್ರತಿಭಟನೆ

ಬೀದರ್ : ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದಲ್ಲಿ ಇಂದು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ವಂದೇ ಮಾತರಂ ಎನ್ನುವ ಖಾಸಗಿ ಶಾಲೆಯಲ್ಲಿ ಡಾ.ಅಂಬೇಡ್ಕರ್ ಫೋಟೋ ಇಡದೆ ಅವಮಾನ ಮಾಡಲಾಗಿದೆ ಎಂದು ಗ್ರಾಮದ ಮಹಿಳೆಯರು ಪ್ರತಿಭಟನೆ ನಡೆಸಿದರು.
ಸ್ವಾತಂತ್ರ್ಯ ದಿನಾಚರಣೆಯಂದು ಕಡ್ಡಾಯವಾಗಿ ಅಂಬೇಡ್ಕರ್ ಫೋಟೋ ಇಡಬೇಕು ಎನ್ನುವ ನಿಯಮವಿದ್ದರೂ ಕೂಡ, ಅಂಬೇಡ್ಕರ್ ಅವರ ಫೋಟೋ ಇಡಲಿಲ್ಲ ಎಂದು ಆರೋಪಿಸಿದ್ದಾರೆ
ಇದರ ಬಗ್ಗೆ ತಾಲೂಕು ಶಿಕ್ಷಣಾಧಿಕಾರಿಗಳಿಗೆ ತಿಳಿಸಿದರೆ, ಸಿ ಆರ್ ಪಿ ಅವರಿಗೆ ಕಳುಹಿಸುತ್ತೇನೆ ಎಂದು ಹೇಳಿದ್ದಾರೆ. ಡಿಡಿಪಿಐ ಅವರಿಗೆ ಕರೆ ಮಾಡಿ ತಿಳಿಸಿದರೆ, ಅಂಬೇಡ್ಕರ್ ಅವರ ಫೋಟೋ ಇಡುವುದು ಸರಕಾರದ ಆದೇಶವಿದೆ. ನಾನು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮಾತನಾಡಿ ಪ್ರಕರಣ ದಾಖಲಿಸಲು ಹೇಳುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂದು ಪ್ರತಿಭಟನಾಕಾರರೊಬ್ಬರು ತಿಳಿಸಿದ್ದಾರೆ.
ಮಧ್ಯಾಹ್ನದಿಂದ ಸಾಯಂಕಾಲದ ವರೆಗೆ ಮಹಿಳೆಯರು ಶಾಲೆಯಲ್ಲಿಯೇ ಕುಳಿತುಕೊಂಡು ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.
Next Story





