Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಶೈಕ್ಷಣಿಕವಾಗಿ, ಆರ್ಥಿಕವಾಗಿ ಸಬಲರಾದಾಗ...

ಶೈಕ್ಷಣಿಕವಾಗಿ, ಆರ್ಥಿಕವಾಗಿ ಸಬಲರಾದಾಗ ಮಾತ್ರ ಆದಿವಾಸಿಗಳ ಸಮಗ್ರ ಅಭಿವೃದ್ಧಿ ಸಾಧ್ಯ : ಮಾಣಿಕ್ ನೇಳಗಿ

ವಾರ್ತಾಭಾರತಿವಾರ್ತಾಭಾರತಿ9 Aug 2026 7:42 PM IST
share
ಶೈಕ್ಷಣಿಕವಾಗಿ, ಆರ್ಥಿಕವಾಗಿ ಸಬಲರಾದಾಗ ಮಾತ್ರ ಆದಿವಾಸಿಗಳ ಸಮಗ್ರ ಅಭಿವೃದ್ಧಿ ಸಾಧ್ಯ : ಮಾಣಿಕ್ ನೇಳಗಿ

ಬೀದರ್ : ಬುಡಕಟ್ಟು ಸಮುದಾಯಗಳು ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಸಬಲರಾದಾಗ ಮಾತ್ರ ಆದಿವಾಸಿಗಳ ಸಮಗ್ರ ಅಭಿವೃದ್ಧಿ ಸಾಧ್ಯ. ಹೀಗಾಗಿ ಸಮುದಾಯದ ಯುವಜನರು ಉನ್ನತ ಶಿಕ್ಷಣ ಪಡೆಯುವತ್ತ ಹೆಚ್ಚಿನ ಗಮನಹರಿಸಬೇಕು ಎಂದು ಹಿರಿಯ ಸಾಹಿತಿ ಮಾಣಿಕ್ ನೇಳಗಿ ಅವರು ಅಭಿಪ್ರಾಯಪಟ್ಟರು.

ನಗರದ ಬೋಮಗೊಂಡೇಶ್ವರ್ ವೃತ್ತದಲ್ಲಿ ರವಿವಾರ ಆಯೋಜಿಸಿದ್ದ ವಿಶ್ವ ಆದಿವಾಸಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬೀದರ್ ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿ ಬುಡಕಟ್ಟು ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದು, ಅವರ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಹಾಗೂ ಸಮಾಜ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಜಿಲ್ಲಾ ಆದಿವಾಸಿ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿಜಯಕುಮಾರ್ ಡುಮ್ಮೆ ಅವರು ಮಾತನಾಡಿ, ದಕ್ಷಿಣ ಭಾರತದ ಟ್ರೈಬಲ್ ಐಕಾನ್ ಮಹಾತ್ಮ ಬೊಮ್ಮಗೊಂಡರು ಬೀದರ್ ಜಿಲ್ಲೆಯ ನೆಲದಲ್ಲಿ ಜನಿಸಿರುವುದು ಹೆಮ್ಮೆಯ ಸಂಗತಿಯಾಗಿದೆ. ಅವರ ಜನ್ಮಸ್ಥಳ ಚಿದ್ರಿಯಲ್ಲಿರುವುದರಿಂದ ಇಲ್ಲಿನ ವಿಮಾನ ನಿಲ್ದಾಣಕ್ಕೆ ಬೊಮ್ಮಗೊಂಡರ ಹೆಸರಿಡಬೇಕು. ಬೀದರ್ ಕೋಟೆಯಲ್ಲಿರುವ ಅವರ ಸಮಾಧಿ ಸ್ಥಳವನ್ನು ಅಭಿವೃದ್ಧಿಪಡಿಸುವುದರ ಜೊತೆಗೆ ಅವರ ಹೆಸರಿನ ಕೆರೆಯನ್ನೂ ಅಭಿವೃದ್ಧಿಪಡಿಸಬೇಕು ಎಂದು ಒತ್ತಾಯಿಸಿದರು.

ಗೊಂಡ, ಕೋಲ್, ಮುಂಡಾ, ಭಿಲ್, ಸಂತಾಲ್ ಸೇರಿದಂತೆ ದೇಶದ ವಿವಿಧ ಬುಡಕಟ್ಟು ಸಮುದಾಯಗಳ ಇತಿಹಾಸವನ್ನು ಸ್ಮರಿಸದೆ ಭಾರತದ ಆದಿವಾಸಿ ಇತಿಹಾಸ ಪೂರ್ಣವಾಗುವುದಿಲ್ಲ ಎಂದು ಅವರು ಪ್ರತಿಪಾದಿಸಿದರು.

ಜಿಲ್ಲೆಯಲ್ಲಿರುವ ಆದಿವಾಸಿ ಹಾಗೂ ಬುಡಕಟ್ಟು ಸಮುದಾಯಗಳ ಇತಿಹಾಸ, ಸಂಸ್ಕೃತಿ ಮತ್ತು ಪರಂಪರೆಯನ್ನು ಪರಿಚಯಿಸುವ ಟ್ರೈಬಲ್ ಮ್ಯೂಸಿಯಂ ಅನ್ನು ಬೀದರ್ ನಲ್ಲಿ ನಿರ್ಮಿಸಬೇಕು ಎಂದು ಬೀದರ್ ಜಿಲ್ಲಾ ಆದಿವಾಸಿ ರಕ್ಷಣಾ ಪರಿಷತ್ತು ಹಾಗೂ ಜಿಲ್ಲಾ ಆದಿವಾಸಿ ಸಾಹಿತ್ಯ ಪರಿಷತ್ತಿನಿಂದ ಈ ವೇಳೆ ಆಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ಗೊಂಡ ಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ತುಕಾರಾಮ್ ಚಿಮಕೋಡ್, ಜಿಲ್ಲಾ ಟೋಕರೆ ಕೋಳಿ ಸಮಾಜದ ಉಪಾಧ್ಯಕ್ಷ ಸುನೀಲ್ ಕಾಶಂಪೂರ್, ರವಿ ಢೋಣೆ, ಪ್ರಭು ಮೇತ್ರೆ, ಸಂಗೊಳ್ಳಿ ರಾಯಣ್ಣ ಯುವ ಗರ್ಜನೆಯ ಪ್ರಧಾನ ಕಾರ್ಯದರ್ಶಿ ಕುಮಾರ್ ಹಜ್ಜರಗಿ, ಆದಿವಾಸಿ ಸಮುದಾಯದ ಮುಖಂಡರಾದ ರಮೇಶ್ ಬಾಲೆಬಾಯಿ, ವಿವೇಕ್ ರಾಜಗೊಂಡ್ ಹಾಗೂ ಮಹೇಶ್ ಮೇದಾ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags

developmenttribalsManik Nelagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X