Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್‌ನ ಶಾಹೀನ್ ಸಂಸ್ಥೆಯ ಡಾ.ಅಬ್ದುಲ್...

ಬೀದರ್‌ನ ಶಾಹೀನ್ ಸಂಸ್ಥೆಯ ಡಾ.ಅಬ್ದುಲ್ ಖದೀರ್ ಅವರಿಗೆ ‘ಸರ್ ಸೈಯದ್ ನ್ಯಾಷನಲ್ ಎಕ್ಸಲೆನ್ಸ್ ಪ್ರಶಸ್ತಿ’ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ17 Oct 2025 9:06 PM IST
share
ಬೀದರ್‌ನ ಶಾಹೀನ್ ಸಂಸ್ಥೆಯ ಡಾ.ಅಬ್ದುಲ್ ಖದೀರ್ ಅವರಿಗೆ ‘ಸರ್ ಸೈಯದ್ ನ್ಯಾಷನಲ್ ಎಕ್ಸಲೆನ್ಸ್ ಪ್ರಶಸ್ತಿ’ ಪ್ರದಾನ

ಅಲಿಗಢ : ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ನಡೆದ ಸರ್ ಸೈಯದ್ ಅಹ್ಮದ್ ಖಾನ್ ಅವರ ಜನ್ಮದಿನ ಸ್ಮರಣಾರ್ಥ ಸಮಾರಂಭದಲ್ಲಿ, ಬೀದರ್‌ನ ಶಾಹೀನ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಅಬ್ದುಲ್ ಖದೀರ್ ಅವರಿಗೆ 2025ನೇ ಸಾಲಿನ ‘ಸರ್ ಸೈಯದ್ ನ್ಯಾಷನಲ್ ಎಕ್ಸಲೆನ್ಸ್ ಪ್ರಶಸ್ತಿ’ ಪ್ರದಾನ ಮಾಡಲಾಯಿತು.

ಶಿಕ್ಷಣ ಕ್ಷೇತ್ರದಲ್ಲಿ ನೀಡಿದ ಅಪಾರ ಕೊಡುಗೆ, ಅಂಚಿನ ಸಮುದಾಯಗಳ ಸಬಲೀಕರಣದ ಪ್ರಯತ್ನಗಳನ್ನು ಪರಿಗಣಿಸಿ ಈ ಗೌರವ ಪ್ರದಾನ ಮಾಡಲಾಗಿದೆ.

ಜಪಾನ್‌ನಲ್ಲಿ ಇಂಜಿನಿಯರ್ ಆಗಿ ವೃತ್ತಿ ಆರಂಭಿಸಿದ ಡಾ.ಅಬ್ದುಲ್ ಖದೀರ್ ಅವರು ನಂತರ ತಮ್ಮ ತವರು ಬೀದರ್‌ಗೆ ಮರಳಿ, ಅಲ್ಲಮಾ ಇಕ್ಬಾಲ್ ಶೈಕ್ಷಣಿಕ ಸೊಸೈಟಿಯನ್ನು ಸ್ಥಾಪಿಸಿದರು. ಬಳಿಕ ಅದು ಶಾಹೀನ್ ಸಮೂಹ ಶಿಕ್ಷಣ ಸಂಸ್ಥೆಯಾಗಿ ಬೆಳೆದಿದ್ದು, ಕೇವಲ 18 ವಿದ್ಯಾರ್ಥಿಗಳಿಂದ ಆರಂಭವಾದ ಈ ಸಂಸ್ಥೆ ಇಂದಿಗೆ ದೇಶದ 13 ರಾಜ್ಯಗಳಲ್ಲಿ ತನ್ನ ಶಾಖೆಗಳನ್ನು ಹೊಂದಿ, 20,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ 500ಕ್ಕೂ ಹೆಚ್ಚು ಬೋಧಕ ಸಿಬ್ಬಂದಿಯನ್ನು ಒಳಗೊಂಡಿದೆ.

ಧಾರ್ಮಿಕ ಮತ್ತು ಆಧುನಿಕ ಶಿಕ್ಷಣದ ಸಮನ್ವಯದ ಮೂಲಕ, ಸಾಂಪ್ರದಾಯಿಕ ಹಿನ್ನೆಲೆಯ ವಿದ್ಯಾರ್ಥಿಗಳಿಗೆ ಮುಖ್ಯವಾಹಿನಿ ಶಿಕ್ಷಣದತ್ತ ದಾರಿತೋರಿಸಲು ಡಾ.ಅಬ್ದುಲ್ ಖದೀರ್ ಮಹತ್ತರ ಪಾತ್ರ ವಹಿಸಿದ್ದಾರೆ. ಅವರ ಶಿಕ್ಷಣ ತತ್ವಗಳು ಸರ್ ಸೈಯದ್ ಅಹ್ಮದ್ ಖಾನ್ ಅವರ ಆಧುನಿಕ ಶಿಕ್ಷಣದ ದೃಷ್ಟಿಕೋನವನ್ನು ಪ್ರತಿಧ್ವನಿಸುತ್ತವೆ ಎಂದು ವಿಶ್ವವಿದ್ಯಾಲಯ ಶ್ಲಾಘಿಸಿದೆ.

ಶಾಹೀನ್ ಸಂಸ್ಥೆ NEET, JEE, UPSC ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವುದರೊಂದಿಗೆ, ಹಿಫ್ಝುಲ್- ಕುರ್‌ಆನ್ ಪ್ಲಸ್ ಮತ್ತು ಮದ್ರಸಾ ಪ್ಲಸ್ ಎಂಬ ವಿಶಿಷ್ಟ ಸಂಯೋಜಿತ ಪಠ್ಯಕ್ರಮಗಳನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದೆ. ಬೀದರ್‌ನ ಐತಿಹಾಸಿಕ ಶಿಕ್ಷಣ ಪರಂಪರೆಯನ್ನು ಪುನರುಜ್ಜೀವನಗೊಳಿಸುವಲ್ಲಿ ಡಾ.ಅಬ್ದುಲ್ ಖದೀರ್ ಅವರ ಕೊಡುಗೆ ವಿಶಿಷ್ಟವಾಗಿದೆ.

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ʼಸರ್ ಸೈಯದ್ ಎಕ್ಸಲೆನ್ಸ್ ಪ್ರಶಸ್ತಿʼಗಳು ರಾಷ್ಟ್ರದ ಅತ್ಯುನ್ನತ ಗೌರವಗಳಲ್ಲಿ ಒಂದಾಗಿದ್ದು, ಅಂತರರಾಷ್ಟ್ರೀಯ ಪ್ರಶಸ್ತಿಗೆ 2 ಲಕ್ಷ ರೂಪಾಯಿ ಮತ್ತು ರಾಷ್ಟ್ರೀಯ ಪ್ರಶಸ್ತಿಗೆ 1 ಲಕ್ಷ ರೂಪಾಯಿ ನಗದು ಬಹುಮಾನ ನೀಡಲಾಗುತ್ತದೆ. ಈ ಪ್ರಶಸ್ತಿಗಳನ್ನು ಸೈಯದ್ ಅಧ್ಯಯನಗಳು, ದಕ್ಷಿಣ ಏಶ್ಯ ಅಧ್ಯಯನಗಳು, ಉರ್ದು ಸಾಹಿತ್ಯ, ಇತಿಹಾಸ, ಸಾಮಾಜಿಕ ಸುಧಾರಣೆ, ಕೋಮು ಸೌಹಾರ್ದತೆ, ಪತ್ರಿಕೋದ್ಯಮ ಮತ್ತು ಸರ್ವಧರ್ಮ ಸಂವಾದ ಕ್ಷೇತ್ರಗಳಲ್ಲಿ ಮಹತ್ವದ ಕೊಡುಗೆ ನೀಡಿದವರಿಗೆ ಪ್ರದಾನ ಮಾಡಲಾಗುತ್ತದೆ.

ಈ ವರ್ಷದ ಪ್ರಶಸ್ತಿ ವಿಜೇತರ ಆಯ್ಕೆಯನ್ನು ಪ್ರೊ.ಅಝಾರ್ಮಿ ದುಖ್ತ್ ಸಫಾವಿ ಅವರ ನೇತೃತ್ವದ ಆಯ್ಕೆ ಸಮಿತಿಯು ಮಾಡಿತು. ಪ್ರೊ.ಅನಿಸುರ್ ರೆಹ್ಮಾನ್, ಪ್ರೊ.ಎ.ಆರ್.ಕಿದ್ವಾಯಿ, ಪ್ರೊ.ಇಮ್ತಿಯಾಝ್ ಹಸ್ನೈನ್ ಹಾಗೂ ಪ್ರೊ.ಶಫಿ ಕಿದ್ವಾಯಿ ಸಮಿತಿಯ ಸದಸ್ಯರಾಗಿದ್ದರು. ಈ ಆಯ್ಕೆಯನ್ನು ಉಪಕುಲಪತಿ ಪ್ರೊ.ನೈಮಾ ಖಾತೂನ್ ಅನುಮೋದಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X