Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಹುಲಸೂರ್ | ವೇದ ಸಂಗೀತ ಪರಂಪರೆಗೆ...

ಹುಲಸೂರ್ | ವೇದ ಸಂಗೀತ ಪರಂಪರೆಗೆ ವಿರೂಪಾಕ್ಷಯ್ಯ ಸ್ವಾಮಿಗಳ ಕೊಡುಗೆ ಅಪಾರ: ಸೋಮನಾಥ್ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ20 May 2026 8:47 PM IST
share
ಹುಲಸೂರ್ | ವೇದ ಸಂಗೀತ ಪರಂಪರೆಗೆ ವಿರೂಪಾಕ್ಷಯ್ಯ ಸ್ವಾಮಿಗಳ ಕೊಡುಗೆ ಅಪಾರ: ಸೋಮನಾಥ್ ಪಾಟೀಲ್

ಹುಲಸೂರ್ : ದೇಶದ ವೇದ ಸಂಗೀತ ಪರಂಪರೆಗೆ ವಿರೂಪಾಕ್ಷಯ್ಯ ಸ್ವಾಮಿ ಅವರ ಕೊಡುಗೆ ಅಪಾರವಾಗಿದೆ ಎಂದು ಬೀದರ್ ಜಿಲ್ಲಾ ಬಿಜೆಪಿ ಅಧ್ಯಕ್ಷ ಸೋಮನಾಥ್ ಪಾಟೀಲ್ ಹೇಳಿದರು.

ತಾಲ್ಲೂಕಿನ ಗೋರಟಾ ಗ್ರಾಮದಲ್ಲಿ ನಡೆದ ಸಂಗೀತ ರುದ್ರೇಶ್ವರ 4ನೇ ಜಾತ್ರಾ ಮಹೋತ್ಸವ, ವಿರೂಪಾಕ್ಷಯ್ಯ ಸ್ವಾಮಿಗಳ 14ನೇ ಹಾಗೂ ಪೂಜ್ಯ ವೀರಮ್ಮ ತಾಯಿಯವರ 9ನೇ ಪುಣ್ಯಾರಾಧನೆ, ಕಲ್ಯಾಣ ಕರ್ನಾಟಕ 7ನೇ ಪ್ರಾಂತೀಯ ಸಂಗೀತ ಸಮ್ಮೇಳನ ಮತ್ತು ‘ಪಂ. ವಿರೂಪಾಕ್ಷ ಸಮ್ಮಾನ್’ ರಾಷ್ಟ್ರೀಯ ಹಾಗೂ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ವೇದದ ರುದ್ರಮಂತ್ರಗಳಿಗೆ ಸಂಗೀತ ಸಂಯೋಜಿಸಿ ದೇಶಾದ್ಯಂತ ರುದ್ರ ಸಂಗೀತ ಕಾರ್ಯಕ್ರಮಗಳನ್ನು ನೀಡುವ ಮೂಲಕ ವಿರೂಪಾಕ್ಷಯ್ಯ ಸ್ವಾಮಿಗಳು ಜಿಲ್ಲೆ ಮತ್ತು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ ಎಂದು ಹೇಳಿದರು.

1948ರ ಗೋರಟಾ ರಜಾಕಾರ ಹತ್ಯಾಕಾಂಡ ಕುರಿತು ‘ಭುಲಾಯಿ ಪದ’ ಗ್ರಂಥ ರಚಿಸಿ ಹುತಾತ್ಮರ ಬಗ್ಗೆ ಜನಜಾಗೃತಿ ಮೂಡಿಸಿದ್ದರು. ಗೋರಟಾ ಹುತಾತ್ಮ ಸ್ಮಾರಕ ನಿರ್ಮಾಣಕ್ಕೂ ಅವರು ಪ್ರೇರಕರಾಗಿದ್ದರು ಎಂದು ಸ್ಮರಿಸಿದರು.

‘ಪಂ. ವಿರೂಪಾಕ್ಷ ಸಮ್ಮಾನ್’ ರಾಷ್ಟ್ರೀಯ ಪ್ರಶಸ್ತಿ ಸ್ವೀಕರಿಸಿದ ಹಾರ್ಮೋನಿಯಂ ಕಲಾವಿದ ರಾಜೇಂದ್ರ ಸಿಂಗ್ ಪವಾರ್ ಮಾತನಾಡಿ, “ಶ್ರೀ ರುದ್ರಕ್ಕೆ ಸಂಗೀತ ಸಂಯೋಜಿಸಿದ ದೇಶದ ಮೊದಲ ಕಲಾವಿದ ವಿರೂಪಾಕ್ಷಯ್ಯ ಸ್ವಾಮಿಗಳು. ಅವರ ರುದ್ರ ಸಂಗೀತ ಕೇಳುತ್ತಲೇ ನಾವು ಬೆಳೆದವರು” ಎಂದರು.

1960ರ ದಶಕದಲ್ಲಿ ಗೋರಟಾದಲ್ಲಿ ಶಾರದಾ ಸಂಗೀತ ವಿದ್ಯಾಲಯ ಸ್ಥಾಪಿಸಿ ನೂರಾರು ಮಂದಿಗೆ ಸಂಗೀತ ಶಿಕ್ಷಣ ನೀಡಿದ್ದರು. 1958ರಲ್ಲಿ ಹೈದರಾಬಾದ್ ಕರ್ನಾಟಕ ಪ್ರಾಂತೀಯ ಸಂಗೀತ ಸಮ್ಮೇಳನ ಆಯೋಜಿಸಿ ಈ ಭಾಗಕ್ಕೆ ವಿಶೇಷ ಕೀರ್ತಿ ತಂದಿದ್ದರು ಎಂದು ಹೇಳಿದರು.

ಸಂಸ್ಥಾನದ ಅಧಿಪತಿ ರಾಜಶೇಖರ್ ಶಿವಾಚಾರ್ಯ ಸ್ವಾಮಿ ಮಾತನಾಡಿ, ಗೋರಟಾ ಕಲ್ಯಾಣ ಚಾಲುಕ್ಯರ ಕಾಲದಲ್ಲಿ ಪ್ರಮುಖ ವಿದ್ಯಾಕೇಂದ್ರವಾಗಿತ್ತು. ವಿರೂಪಾಕ್ಷಯ್ಯ ಸ್ವಾಮಿಗಳ ಸಂಕಲ್ಪದಂತೆ ಸಂಗೀತ ರುದ್ರೇಶ್ವರ ದೇವಾಲಯ ಹಾಗೂ 81 ಅಡಿ ಎತ್ತರದ ಗೋಪುರ ನಿರ್ಮಿಸಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶ್ರೀಶೈಲದ ಕರುಣಾದೇವಿ ಮಾತಾ ದಿವ್ಯ ಸಾನ್ನಿಧ್ಯ ವಹಿಸಿದ್ದರು. ಡಾ. ಸಿದ್ದರಾಮಯ್ಯ ಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ‘ಪಂ. ವಿರೂಪಾಕ್ಷ ಸಮ್ಮಾನ್’ ರಾಷ್ಟ್ರೀಯ ಪ್ರಶಸ್ತಿಯನ್ನು ರಾಜೇಂದ್ರ ಸಿಂಗ್ ಪವಾರ್ ಅವರಿಗೆ ಹಾಗೂ ರಾಜ್ಯ ಪ್ರಶಸ್ತಿಯನ್ನು ರೇವಪ್ಪ ಪಾಂಚಾಳ್ ಅವರಿಗೆ ಪ್ರದಾನಿಸಲಾಯಿತು.

ಈ ಸಂದರ್ಭದಲ್ಲಿ ಕರುಣಾದೇವಿ, ರಾಜಶೇಖರ್ ಸ್ವಾಮೀಜಿ, ಡಾ, ಸಿದ್ದರಾಮಯ್ಯ ಸ್ವಾಮಿ, ಸಂಗಮೇಶ್ ಬಿರಾದಾರ್, ಕರಬಸಪ್ಪ ಅಕ್ಕಣ್ಣ ಮುಂತಾದವರು ಇದ್ದರು. ಪ್ರೊ. ರುದ್ರೇಶ್ವರ್ ಸ್ವಾಮಿ ವಂದಿಸಿದರು. ಬಸವರಾಜ್ ಹಾಲಹಳ್ಳಿ ನಿರೂಪಿಸಿದರು.

Tags

Hulasur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X