Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಹುಮನಾಬಾದ್ | ಶಾಸಕ ಡಾ.ಸಿದ್ಧು ಪಾಟೀಲ್...

ಹುಮನಾಬಾದ್ | ಶಾಸಕ ಡಾ.ಸಿದ್ಧು ಪಾಟೀಲ್ ನೇತೃತ್ವದಲ್ಲಿ ‘ಬಿಎಸ್‌ಎಸ್‌ಕೆ ಬಚಾವ್ ಪಾದಯಾತ್ರೆ’

ಹಳ್ಳಿಖೇಡ್ (ಬಿ) ಸಕ್ಕರೆ ಕಾರ್ಖಾನೆಗೆ ಲೀಸ್ ನೀಡಿ ಪುನರಾರಂಭಿಸುವಂತೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ16 Sept 2026 8:37 PM IST
share
ಹುಮನಾಬಾದ್ | ಶಾಸಕ ಡಾ.ಸಿದ್ಧು ಪಾಟೀಲ್ ನೇತೃತ್ವದಲ್ಲಿ ‘ಬಿಎಸ್‌ಎಸ್‌ಕೆ ಬಚಾವ್ ಪಾದಯಾತ್ರೆ’

ಹುಮನಾಬಾದ್: ಸಾಲದ ಸುಳಿಯಲ್ಲಿ ಸಿಲುಕಿ ಸ್ಥಗಿತಗೊಂಡಿರುವ ಹಳ್ಳಿಖೇಡ್ (ಬಿ) ಬಿಎಸ್‌ಎಸ್‌ಕೆ ಸಕ್ಕರೆ ಕಾರ್ಖಾನೆಯನ್ನು ಪುನರಾರಂಭಿಸುವಂತೆ ಒತ್ತಾಯಿಸಿ ಶಾಸಕ ಡಾ.ಸಿದ್ಧು ಪಾಟೀಲ್ ನೇತೃತ್ವದಲ್ಲಿ ನಗರದಿಂದ ಕಾರ್ಖಾನೆವರೆಗೆ ‘ಬಿಎಸ್‌ಎಸ್‌ಕೆ ಬಚಾವ್ ಪಾದಯಾತ್ರೆ’ ಬುಧವಾರ ನಡೆಯಿತು.

ನಗರದ ವೀರಭದ್ರೇಶ್ವರ ದೇವಸ್ಥಾನದಿಂದ ಆರಂಭವಾದ ಪಾದಯಾತ್ರೆ ಸುಮಾರು 35 ಕಿ.ಮೀ. ಸಂಚರಿಸಿ ಸಂಜೆ ಬಿಎಸ್‌ಎಸ್‌ಕೆ ಸಕ್ಕರೆ ಕಾರ್ಖಾನೆ ತಲುಪಿತು. ಪಾದಯಾತ್ರೆಯಲ್ಲಿ ರೈತರು, ಬಿಜೆಪಿ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಾ.ಸಿದ್ಧು ಪಾಟೀಲ್, ರೈತರು ತೋರಿದ ಬೆಂಬಲಕ್ಕೆ ಕೃತಜ್ಞತೆ ಸಲ್ಲಿಸಿ, “ರೈತರು ನನಗೆ ಆಶೀರ್ವಾದ ನೀಡಿದರೆ ಬಿಎಸ್‌ಎಸ್‌ಕೆ ಕಾರ್ಖಾನೆಯನ್ನು ಪುನರಾರಂಭ ಮಾಡಿಸುತ್ತೇನೆ” ಎಂದು ಹೇಳಿದರು.

ಬಿಎಸ್‌ಎಸ್‌ಕೆ ಕಾರ್ಖಾನೆ ಮತ್ತು ರೈತರ ಸಂಬಂಧ ತಾಯಿ–ಮಗನ ಬಾಂಧವ್ಯದಂತಿದೆ. ಕಾರ್ಖಾನೆಯನ್ನು ಲೀಸ್‌ಗೆ ನೀಡಿ ಪುನರಾರಂಭಿಸಬೇಕು. ಅಗತ್ಯವಿದ್ದರೆ ವಿಧಾನಸೌಧದ ಒಳಗೂ ಹೊರಗೂ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಲಬುರಗಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಖಾನೆ ಸಮಸ್ಯೆಯ ಬಗ್ಗೆ ಅವರ ಗಮನಕ್ಕೂ ತರುವುದಾಗಿ ಹೇಳಿದರು.

ಕಾರ್ಖಾನೆಯ ಸ್ಥಾಪನೆ ಕುರಿತು ಮಾತನಾಡಿದ ಶಾಸಕ ಸಿದ್ಧು ಪಾಟೀಲ್, ಭೀಮಣ್ಣ ಖಂಡ್ರೆ ಹಾಗೂ ಗುರುಬಸಪ್ಪ ಖೇಣಿ ಹೆಸರುಗಳನ್ನು ಉಲ್ಲೇಖಿಸಿ, ಕಾರ್ಖಾನೆಯನ್ನು ಮಾರಾಟ ಮಾಡುವ ಯಾವುದೇ ಪ್ರಯತ್ನಕ್ಕೆ ವಿರೋಧ ವ್ಯಕ್ತಪಡಿಸಿದರು.

ಮಾಜಿ ಕೇಂದ್ರ ಸಚಿವ ಭಗವಂತ್ ಖೂಬಾ ಮಾತನಾಡಿ, ಕಾರ್ಖಾನೆಯನ್ನು ಲೀಸ್‌ಗೆ ನೀಡದಿದ್ದರೆ ಡಿಸಿಸಿ ಬ್ಯಾಂಕ್ ಆಡಳಿತದ ವಿರುದ್ಧವೂ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪಾದಯಾತ್ರೆಯಲ್ಲಿ ಶಾಸಕ ಶೈಲೇಂದ್ರ ಬೆಲ್ದಾಳೆ, ವಿಧಾನ ಪರಿಷತ್ ಸದಸ್ಯ ಎಂ.ಜಿ. ಮೂಳೆ, ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ್ ಪಾಟೀಲ್, ಈಶ್ವರ್ ಸಿಂಗ್ ಠಾಕೂರ್ ಸೇರಿದಂತೆ ಅನೇಕ ಮುಖಂಡರು ಹಾಗೂ ರೈತರು ಭಾಗವಹಿಸಿದ್ದರು.

ಬೆಂಬಲ ವಾಪಸ್ ಪಡೆದ ಆಮ್ ಆದ್ಮಿ ಪಕ್ಷ :

ಕೆಲವು ದಿನಗಳ ಹಿಂದೆ ಈ ಪಾದಯಾತ್ರೆ ಪಕ್ಷಾತೀತ ಹೋರಾಟವಾಗಿರುತ್ತದೆ ಎಂದು ಶಾಸಕ ಡಾ. ಸಿದ್ಧು ಪಾಟೀಲ್ ಘೋಷಿಸಿದ್ದರು. ಇದಕ್ಕೆ ಬೆಂಬಲ ಸೂಚಿಸಿದ್ದ ಆಮ್ ಆದ್ಮಿ ಪಕ್ಷದ ಮುಖಂಡ ಬ್ಯಾಂಕ್ ರೆಡ್ಡಿ ಹಾಗೂ ಜನರ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷ ಅಂಕುಶ್ ಗೋಖಲೆ ಹೋರಾಟದಲ್ಲಿ ಭಾಗವಹಿಸುವುದಾಗಿ ತಿಳಿಸಿದ್ದರು. ಆದರೆ ಪಾದಯಾತ್ರೆಯಲ್ಲಿ ಬಿಜೆಪಿ ಧ್ವಜಗಳು ಪ್ರಮುಖವಾಗಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇದು ಪಕ್ಷಾತೀತ ಹೋರಾಟವಲ್ಲ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷ ತನ್ನ ಬೆಂಬಲವನ್ನು ವಾಪಸ್ ಪಡೆದುಕೊಂಡಿತು.

ಪಕ್ಷಾತೀತ ಹೋರಾಟ ಎಂದು ಹೇಳಿ ನಂತರ ಬಿಜೆಪಿ ಧ್ವಜಗಳನ್ನು ಮುನ್ನೆಲೆಗೆ ತಂದಿದ್ದಾರೆ. ಕೊಟ್ಟ ಮಾತಿನಂತೆ ನಡೆದುಕೊಳ್ಳಲಿಲ್ಲ. ಈ ಹೋರಾಟದಿಂದ ದೂರ ಉಳಿದಿದ್ದೇವೆ. ಮುಂದಿನ ದಿನಗಳಲ್ಲಿ ಪತ್ರಿಕಾಗೋಷ್ಠಿ ನಡೆಸಿ ನಮ್ಮ ನಿಲುವು ತಿಳಿಸುತ್ತೇವೆ.

-ಬ್ಯಾಂಕ್ ರೆಡ್ಡಿ, ಆಮ್ ಆದ್ಮಿ ಪಕ್ಷದ ಮುಖಂಡ

Tags

Dr.Siddu PatilBSSK Bachao PadayatraHumnabad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X