Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಕಾರುಣ್ಯ ಸಂಘವು ಬಡವರ, ಸಣ್ಣ ವ್ಯಾಪಾರಿಗಳ...

ಕಾರುಣ್ಯ ಸಂಘವು ಬಡವರ, ಸಣ್ಣ ವ್ಯಾಪಾರಿಗಳ ಆರ್ಥಿಕ ಅಭಿವೃದ್ಧಿಗೆ ನೆರವಾಗುತ್ತಿದೆ : ಸಚಿವ ರಹೀಂ ಖಾನ್

ವಾರ್ತಾಭಾರತಿವಾರ್ತಾಭಾರತಿ5 Aug 2025 7:16 PM IST
share
ಕಾರುಣ್ಯ ಸಂಘವು ಬಡವರ, ಸಣ್ಣ ವ್ಯಾಪಾರಿಗಳ ಆರ್ಥಿಕ ಅಭಿವೃದ್ಧಿಗೆ ನೆರವಾಗುತ್ತಿದೆ : ಸಚಿವ ರಹೀಂ ಖಾನ್

ಬೀದರ್ : ಕಾರುಣ್ಯ ಸಂಘವು ಬಡವರ, ಸಣ್ಣ ವ್ಯಾಪಾರಿಗಳ ಆರ್ಥಿಕ ಅಭಿವೃದ್ಧಿಗೆ ನೆರವಾಗುತ್ತಿದೆ ಎಂದು ಪೌರಾಡಳಿತ ಸಚಿವ ರಹೀಂ ಖಾನ್ ಅವರು ತಿಳಿಸಿದರು.

ಕಾರುಣ್ಯ ಸೌಹಾರ್ದ ಸಹಕಾರಿ ಸಂಘ ನಿಯಮಿತ ವತಿಯಿಂದ ನಗರದ ಮೊಘಲ್ ಗಾರ್ಡನ್ ಸಭಾಂಗಣದಲ್ಲಿ ಆಯೋಜಿಸಿದ್ದ ಸಮುದಾಯ ಸಂಪರ್ಕ, ಮಿಷನ್ ಮತ್ತು ವಿಜನ್ ಕುರಿತ ಸಭೆಯಲ್ಲಿ ಅವರು ಮಾತನಾಡಿದರು.

ಬೀದರ್ ಕಾರುಣ್ಯ ಸಂಘವು ಕಡಿಮೆ ಅವಧಿಯಲ್ಲಿಯೇ ಅಭಿವೃದ್ಧಿ ಸಾಧಿಸಿರುವುದು ಆಶ್ಚರ್ಯ ಹಾಗೂ ಸಂತಸ ಉಂಟು ಮಾಡಿದೆ. ಈ ಸಂಘವು ಬಡವರ ಹಾಗೂ ಸಣ್ಣ ವ್ಯಾಪಾರಿಗಳ ಆರ್ಥಿಕ ಅಭಿವೃದ್ಧಿಗೆ ನೆರವಾಗುತ್ತಿದೆ ಎಂದು ಹೇಳಿದರು.

ಸಹುಲತ್ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕ ಅಬ್ದುಲ್ ಜಬ್ಬಾರ್ ಸಿದ್ದಿಕಿ ಅವರು ಮಾತನಾಡಿ, ಬಡ ಜನರಲ್ಲಿ ಪ್ರಾಮಾಣಿಕತೆ ಹೆಚ್ಚಿರುತ್ತದೆ. ಬೀದರ್ ಕಾರುಣ್ಯ ಸಹಕಾರಿ ಸಂಸ್ಥೆಯ ಬಡವರು ಹಾಗೂ ಸಣ್ಣ ವ್ಯಾಪಾರಿಗಳ ಸಾಲ ಮರು ಪಾವತಿ ಪ್ರಮಾಣ ಶೇ.98 ರಷ್ಟಿದೆ ಎಂದು ತಿಳಿಸಿದರು.

ದೇಶದಲ್ಲಿ ಬಡ್ಡಿ ರಹಿತ ಸಹಕಾರ ಸಂಘಗಳು 14 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿವೆ. ಒಟ್ಟು 47 ಶಾಖೆಗಳಿದ್ದು, 1.25 ಲಕ್ಷ ಕುಟುಂಬಗಳು ಈ ಸಂಸ್ಥೆಗಳೊಂದಿಗೆ ಸಂಬಂಧ ಹೊಂದಿವೆ. ಪ್ರತಿನಿತ್ಯ ಈ ಸಂಸ್ಥೆಗಳು ಸುಮಾರು 1.5 ಕೋಟಿ ರೂ. ನಷ್ಟು ಸಾಲ ನೀಡುತ್ತಿವೆ ಎಂದು ಮಾಹಿತಿ ನೀಡಿದ ಅವರು, ಬಡವರ ಹೆಚ್ಚಿನ ಆದಾಯದ ಪ್ರಮಾಣ ಇತರ ಬ್ಯಾಂಕ್‍ ಗಳಿಗೆ ಬಡ್ಡಿ ರೂಪದಲ್ಲಿ ಹೋಗುತ್ತದೆ. ಆದರೆ ನಮ್ಮ ಸಹಕಾರಿ ಸಂಘಗಳು ಬಡವರಿಗೆ ಬಡ್ಡಿ ರಹಿತವಾಗಿ ಸಾಲ ನೀಡುತ್ತಿವೆ ಎಂದರು.

ಸಂಘದ ವ್ಯವಸ್ಥಾಪಕ ಮಂಡಳಿ ಅಧ್ಯಕ್ಷ ಮುಜ್ತಬಾ ಖಾನ್ ಅವರು ಮಾತನಾಡಿ, ಸಂಘವು 7 ವರ್ಷಗಳ ಅವಧಿಯಲ್ಲಿ ಸಣ್ಣ ವ್ಯಾಪಾರಿಗಳಿಗೆ 60 ಕೋಟಿ ರೂ. ಹಾಗೂ 40 ಲಕ್ಷ ರೂ. ವೈಯಕ್ತಿಕ ಸಾಲ ವಿತರಿಸಿದೆ. 3,500 ಕುಟುಂಬಗಳು ಸಂಘದೊಂದಿಗೆ ಜೋಡಣೆಯಾಗಿವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಮುಹಮ್ಮದ್ ರಫೀಕ್ ಅಹಮ್ಮದ್, ಡಿಸಿಸಿ ಬ್ಯಾಂಕ್ ನಿವೃತ್ತ ಅಧಿಕಾರಿ ಬಿ.ಎಸ್. ಕುದುರೆ, ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ. ಅಬ್ದುಲ್ ಖದೀರ್, ಜಮಾ ಅತೆ ಇಸ್ಲಾಮಿ ಹಿಂದ್ ಬೀದರ್ ಘಟಕದ ಅಧ್ಯಕ್ಷ ಮುಹಮ್ಮದ್ ಮೌಝಂ, ರಹಮತ್ ಉಲ್ಲಾ ಖಾನ್, ಪ್ರಾಚಾರ್ಯ ಮುಹಮ್ಮದ್ ನಿಜಾಮುದ್ದೀನ್, ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಸಂಘದ ಉಪಾಧ್ಯಕ್ಷ ಎಹ್ತೆಶಾಮ್ ಉಲ್ ಹಕ್, ಸಿಇಒ ಮಹಮ್ಮದ್ ಮಸಿಯುದ್ದೀನ್, ಡಾ. ಸೈಯದ್ ಹುಸಾಮುದ್ದೀನ್ ಉಜೇರ್, ಪ್ರಮುಖರಾದ ಮಹಮ್ಮದ್ ಆಸಿಫುದ್ದೀನ್, ಶೇಖರ್ ಚೌವ್ಹಾಣ್, ಅಬ್ದುಲ್ ಸಲಾಂ, ಮುಬಾಶಿರ್ ಸಿಂದೆ, ಮಹಮ್ಮದ್ ಅಕ್ರಂ ಅಲಿ, ಅಶ್ಫಾಕ್ ಅಹಮ್ಮದ್, ಅಸ್ಮಾ, ಸಬಿಯಾ ಖಾನಂ, ಅಹಮ್ಮದ್ ಸೇಠ್ ಹಾಗೂ ಶೇಖ್ ಸಿರಾಜುದ್ದೀನ್ ಸೇರಿದಂತೆ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X