Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಪಿಡಿಒಗಳು ಗ್ರಾಮೀಣ ಪ್ರದೇಶದ ಜನತೆಯ...

ಪಿಡಿಒಗಳು ಗ್ರಾಮೀಣ ಪ್ರದೇಶದ ಜನತೆಯ ಸಮಸ್ಯೆಗಳಿಗೆ ಸ್ಪಂದನಶೀಲರಾಗಿ ಪ್ರತಿಕ್ರಿಯಿಸಬೇಕು : ಸಿಇಓ ಡಾ.ಗಿರೀಶ್ ಬದೋಲೆ

ವಾರ್ತಾಭಾರತಿವಾರ್ತಾಭಾರತಿ11 Sept 2025 6:51 PM IST
share
ಪಿಡಿಒಗಳು ಗ್ರಾಮೀಣ ಪ್ರದೇಶದ ಜನತೆಯ ಸಮಸ್ಯೆಗಳಿಗೆ ಸ್ಪಂದನಶೀಲರಾಗಿ ಪ್ರತಿಕ್ರಿಯಿಸಬೇಕು : ಸಿಇಓ ಡಾ.ಗಿರೀಶ್ ಬದೋಲೆ

ಬೀದರ್ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಗ್ರಾಮೀಣ ಜನರೊಂದಿಗೆ ನಿತ್ಯ ವ್ಯವಹರಿಸುವ ಇಲಾಖೆಯಾಗಿದ್ದು, ಪಿಡಿಒಗಳು ಗ್ರಾಮೀಣ ಪ್ರದೇಶದ ಜನತೆಯ ಸಮಸ್ಯೆಗಳಿಗೆ ಸ್ಪಂದನಶೀಲರಾಗಿ ಪ್ರತಿಕ್ರಿಯಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಅವರು ಹೇಳಿದರು.

ಇಂದು ಔರಾದ್ ತಾಲೂಕು ಪಂಚಾಯತಿಯ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಔರಾದ್ ಮತ್ತು ಕಮಲನಗರ್ ತಾಲೂಕುಗಳ ಪಿಡಿಒ ಮತ್ತು ಅನುಷ್ಠಾನ ಇಲಾಖೆಯ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಗ್ರಾಮ ಪಂಚಾಯತಿಗಳು ಜನರ ಪಾಲ್ಗೊಳ್ಳುವಿಕೆಯ ಜನಾಡಳಿತದ ಕೇಂದ್ರಗಳಾಗಬೇಕು. ಗ್ರಾಮೀಣ ಪ್ರದೇಶದ ಪ್ರತಿಯೊಬ್ಬರೂ ಗ್ರಾಮ ಪಂಚಾಯತಿಯ ಬಗ್ಗೆ ನಮ್ಮ ಪಂಚಾಯತ್‌ ನಮ್ಮ ಹೆಮ್ಮೆ ಎಂದು ಭಾವಿಸುವಂತೆ ಜನಸ್ನೇಹಿಗಳಾಗಿ ಕರ್ತವ್ಯ ನಿರ್ವಹಿಸಬೇಕು. ತೆರಿಗೆ ವಸೂಲಾತಿಯ ಸಂದರ್ಭದಲ್ಲಿ ಗ್ರಾಮೀಣ ಜನತೆಯ ಕಷ್ಟ ಸುಖಗಳನ್ನು ಅರ್ಥಮಾಡಿಕೊಂಡು ತೆರಿಗೆ ವಸೂಲಿ ಮಾಡಬೇಕು. ಮಳೆಯ ಕಾರಣದಿಂದ ಕೆಲಸ ಇಲ್ಲದೆ ಇರುವ ಬಡವರು ತೆರಿಗೆ ಕಟ್ಟಲು ಕಾಲಾವಕಾಶ ಕೇಳಿದರೆ ಅದಕ್ಕೆ ಸ್ಪಂದಿಸಬೇಕು. ಕಾರ್ಖಾನೆಗಳು, ಸಣ್ಣ ಉದ್ಯಮ, ಅಂಗಡಿ, ಹೊಟೆಲ್‌, ವೈನ್ ಶಾಪ್ ಅಂತಹ ವಾಣಿಜ್ಯ ಸಂಸ್ಥೆಗಳಿಂದ ತೆರಿಗೆ ವಸೂಲು ಮಾಡಬೇಕು. ವಸೂಲಾದ ತೆರಿಗೆಯಲ್ಲಿ ಗ್ರಂಥಾಲಯ ಸೆಸ್ ತುಂಬಬೇಕು ಎಂದರು.

ನರೇಗಾ ಯೋಜನೆಯಡಿ ಕೂಲಿಕಾರರಿಗೆ ಕೆಲಸ ನೀಡಬೇಕು. ಎನ್ ಎಂ ಎಂ ಎಸ್ ಫೋಟೋಗಳು ದುರ್ಬಳಕೆ ಆಗಬಾರದು. ಕಾಮಗಾರಿಗಳ ಪೂರ್ಣಗೊಂಡ ಸರ್ಟಿಫಿಕೇಟ್ ಹಾಕಬೇಕು. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಬಾಕಿ ಫಲಾನುಭವಿಗಳ ಆಯ್ಕೆ ಮತ್ತು ಜಿಪಿಎಸ್ ಪ್ರಕ್ರಿಯೆಗಳನ್ನು ತ್ವರಿತವಾಗಿ ಮುಗಿಸಬೇಕು. ಸ್ವಚ್ಛ ಭಾರತ ಯೋಜನೆಯಡಿ ಪ್ರಗತಿಯಲ್ಲಿ ಇರುವ ವೈಯಕ್ತಿಕ ಶೌಚಾಲಯಗಳನ್ನು ಶೀಘ್ರವಾಗಿ ಮುಕ್ತಾಯಗೊಳಿಸಬೇಕು. ಬೂದು ನೀರು ನಿರ್ವಹಣಾ ಘಟಕಗಳ ಕಾಮಗಾರಿಗಳನ್ನು ಬೇಗ ಪ್ರಾರಂಭಿಸಬೇಕು. ಪ್ಲಾಸ್ಟಿಕ್ ವೇಸ್ಟ್ ಮ್ಯಾನೇಜ್ಮೆಂಟ್, ಮಲತ್ಯಾಜ್ಯ ವಿಲೇವಾರಿ ಘಟಕಗಳ ನಿರ್ಮಾಣ ಕಾರ್ಯ ಕಾಲಮಿತಿಯಲ್ಲಿ ಮುಗಿಸಬೇಕು ಎಂದು ಪಿಡಿಒಗಳಿಗೆ ಸೂಚಿಸಿದರು.

ಸಭೆಯಲ್ಲಿ ಉಪಕಾರ್ಯದರ್ಶಿ ಮುಕ್ಕಣ್ಣ ಕರಿಗಾರ್, ಯೋಜನಾ ನಿರ್ದೇಶಕ ಸೂರ್ಯಕಾಂತ್ ಬಿರಾದಾರ್, ಸಹಾಯಕ ಕಾರ್ಯದರ್ಶಿ ಬೀರೇಂದ್ರಸಿಂಗ್ ಠಾಕೂರ್, ಆಡಳಿತ ವಿಭಾಗದ ಸಹಾಯಕ ನಿರ್ದೇಶಕ ಜಯಪ್ರಕಾಶ್ ಚೌವ್ಹಾಣ್, ಔರಾದ್ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಕಿರಣ್ ಪಾಟೀಲ್, ಕಮಲನಗರ್ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಹನುಮಂತ್ರಾಯ್ ಕೌಟಗೆ, ಸಹಾಯಕ ನಿರ್ದೇಶಕ ಶಿವಕುಮಾರ್ ಘಾಟೆ, ನರೇಗಾ ಎಡಿಪಿಸಿ ದೀಪಕ್ ಕಡಿಮನಿ, ಪಂಚಾಯತ್ ರಾಜ್ ಇಂಜನಿಯರಿಂಗ್, ಗ್ರಾಮೀಣ ಕುಡಿಯುವ ನೀರು ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ವಿವಿಧ ಇಲಾಖೆಗಳ ತಾಲೂಕಾ ಮಟ್ಟದ ಅಧಿಕಾರಿ, ತಾಲೂಕುಗಳ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X