Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಸಮಾನತೆಯನ್ನು ಬೋಧಿಸಿ ಪ್ರಾಯೋಗಿಕವಾಗಿ...

ಸಮಾನತೆಯನ್ನು ಬೋಧಿಸಿ ಪ್ರಾಯೋಗಿಕವಾಗಿ ಜಾರಿಗೊಳಿಸಿದ ಪ್ರವಾದಿ ಮುಹಮ್ಮದ್ (ಸ) : ಪ್ರೊ. ಪರಮೇಶ್ವರ

ವಾರ್ತಾಭಾರತಿವಾರ್ತಾಭಾರತಿ22 Sept 2024 6:46 PM IST
share
ಸಮಾನತೆಯನ್ನು ಬೋಧಿಸಿ ಪ್ರಾಯೋಗಿಕವಾಗಿ ಜಾರಿಗೊಳಿಸಿದ ಪ್ರವಾದಿ ಮುಹಮ್ಮದ್ (ಸ) : ಪ್ರೊ. ಪರಮೇಶ್ವರ

ಬೀದರ್: ಭಾರತದಲ್ಲಿ ಪ್ರಚಲಿತವಿದ್ದ ಜಾತಿ ಪದ್ದತಿಯ ರೀತಿಯಲ್ಲಿ ಅರಬ್ ದೇಶದಲ್ಲಿ ಜಾರಿಯಲ್ಲಿದ್ದ ಮೇಲು ಕೀಳು ಬುಡಕಟ್ಟುಗಳ ಭೇದವನ್ನು ಸಂಪೂರ್ಣವಾಗಿ ತೊಡೆದು ಹಾಕಿ ಎಲ್ಲಾ ಮಾನವರು ಒಂದೇ ತಂದೆಯ ಮಕ್ಕಳು ಎಂಬ ಸಂದೇಶ ನೀಡಿ ಸಮಾನತೆ ಬೋಧಿಸಿ ನಮಾಝ್ ಮತ್ತು ಒಂದೇ ತಟ್ಟೆಯಲ್ಲಿ ಊಟ ಮಾಡುವ ಪದ್ದತಿ ಜಾರಿ ಮಾಡಿದ ಸಮಾನತೆಯ ಹರಿಕಾರ ಪ್ರವಾದಿ ಮುಹಮ್ಮದ್ ಎಂದು ಬೀದರ್ ವಿಶ್ವ ವಿದ್ಯಾಲಯದ ಕುಲಸಚಿವ ಪ್ರೊ. ಪರಮೇಶ್ವರ ನಾಯಕ ನುಡಿದರು.

ಅವರು ಬೀದರ್ ನಗರದ ರಂಗ ಮಂದಿರದಲ್ಲಿ ʼಪ್ರವಾದಿ ಮುಹಮ್ಮದ (ಸ) ಮಹಾನ್ ಚಾರಿತ್ರ್ಯವಂತʼ ಎನ್ನುವ ವಿಷಯದ ಮೇಲೆ ಏರ್ಪಡಿಸಿದ ವಿಚಾರಗೋಷ್ಠಿಯಲ್ಲಿ ಮಾತನಾಡಿ, ಹೆಣ್ಣು ಮಕ್ಕಳಿಗೆ ಶಿಕ್ಷಣ, ಆಸ್ತಿಯಲ್ಲಿ ಪಾಲು ನೀಡಿ 6ನೇ ಶತಮಾನಯದಲ್ಲಿಯೇ ಮಹಿಳಾ ಹಕ್ಕುಗಳನ್ನು ನೀಡಿ ಗೌರವ ನೀಡಿದರು ಎಂದು ಹೇಳಿದರು.

ಇನ್ನೋರ್ವ ಅತಿಥಿ ಪತ್ರಕರ್ತ ಬಾಲಾಜಿ ಕುಂಬಾರ ಮಾತನಾಡುತ್ತ, ಪ್ರವಾದಿ ಪ್ರೀತಿಯ ಸಂದೇಶ ಸಾರಿ ಜನರ ಮಧ್ಯ ಪ್ರೀತಿಯ ಸೇತುವೆ ಕಟ್ಟಿದರು. ಕ್ಷಮಾದಾನ, ಸಹನೆ, ವಿನಮೃತೆ ಪ್ರವಾದಿಯವರ ಪ್ರಮುಖ ಗುಣಗಳು ಎಂದು ಅವರ ಜೀವನದ ಘಟನೆಗಳೊಂದಿಗೆ ತಿಳಿಸಿದರು. ಎಲ್ಲಾ ಪ್ರವಾದಿಗಳು ಹಾಗೂ ಮಹಾಪುರುಷರಂತೆ ಪ್ರವಾದಿಯವರು ವೈರಿಯನ್ನು ಪ್ರೀತಿಸಿ ಎಂಬ ಸಂದೇಶ ನೀಡಿದ್ದಾರೆ ಇದು ನಮ್ಮ ಇಂದಿನ ಅವಶ್ಯಕತೆ ಎಂದು ಹೇಳಿ ಜನರಿಗೆ ಪಾಲಿಸಲು ತಿಳಿಸಿದರು.

ಮುಖ್ಯ ಅತಿಥಿಯಾಗಿದ್ದ ಹಜ್ ಸಚಿವ ಹಾಗೂ ಪೌರಾಡಳಿತ ಸಚಿವ ರಹೀಂ ಖಾನ್ ಅವರು ” ಪ್ರವಾದಿ ಮುಹಮ್ಮದ್ ಲೇಖನ ಸಂಕಲನ" ಪುಸ್ತಕ ಬಿಡುಗಡೆ ಮಾಡಿ ಮಾತನಾಡುತ್ತ‌, ಪ್ರವಾದಿ ನುಡಿದಂತೆ ನಾವೇಲ್ಲ ನಡೆಯಬೇಕು ಎಂದು ಸಲಹೆ ನೀಡಿದರು. ಸ್ವರ್ಗ ಒಳ್ಳೆಯ ಸಂಕಲ್ಪದೊಂದಿಗೆ ಮಾಡಿದ್ದ ಉತ್ತಮ ಕರ್ಮಗಳಿಂದ ಸಿಗುತ್ತದೆ ಎಂದು ಹೇಳಿ ಸತ್ಕರ್ಮಗಳನ್ನು ಮಾಡಲು ಜನರಿಗೆ ಪ್ರೇರೆಪಿಸಿದರು ಇದೇ ಸಂದರ್ಭದಲ್ಲಿ ಸ್ವರಿಡಾಲಿಟಿ ಯುಥ್ ಮುಮೆಂಟ್ ನ ಪೋಸ್ಟರ ಬಿಡುಗಡೆ ಮಾಡಿದರು

ಜಮಾತೆ ಇಸ್ಲಾಮಿ ಹಿಂದ್ ಕರ್ನಾಟಕದ ರಾಜ್ಯ ಕಾರ್ಯದರ್ಶಿ ಜನಾಬ್ ಅಕ್ಬರ್ ಅಲಿ ಅದ್ಯಕ್ಷತೆ ವಹಿಸಿ ಮಾತನಾಡುತ್ತ‌, ಪ್ರವಾದಿ ಅವರು ನಮ್ಮೇಲ್ಲರ ದೇವರ ಸ್ಪಷ್ಟವಾದ ಪರಿಚಯ ಮಾಡಿಸಿದ್ದಾರೆ. ಅವನೊಬ್ಬನೆ ನಮ್ಮ ಸೃಷ್ಠಿಕರ್ತ ಹಾಗೂ ಪ್ರಭು ಆಗಿದ್ದಾನೆ ಎಂದು ಏಕ ದೇವ ಸಂದೇಶ ನೀಡಿದರು. ಪ್ರವಾದಿ ಅವರು ಜನರ ಜೋತೆ ನಮ್ಮ ವರ್ತನೆ ಹೇಗಿರಬೇಕು ಎಂದು ತಿಳಿಸಿದ್ದಾರೆ ಎಂದು ಅವರು ಹೇಳಿದರು.

ಮೌಲ್ವಿ ಮಹ್ಮದ್ ಫಿಹಿಮೋದ್ದಿನ್, ಗೀತಾ ಪಂಡಿತರಾವ ಚಿದ್ರಿ ಮಾತನಾಡಿದರು. ‌ಮುಹಮ್ಮದ್ ಮೌಝಮ್ ಪ್ರಾಸ್ತಾವಿಕ ಬಾಷಣ ಮಾಡಿದರು. ವಿಚಾರಗೋಷ್ಠಿ ಸೈಯದ್ ಅತಿಕುಲ್ಲ ಅವರ ಕುರ್‌ ಆನ್ ಪಠಣದಿಂದ ಪ್ರಾರಂಭಿಸಲಾಯಿತು.‌ ಇದರ ಕನ್ನಡ ಅನುವಾದ ಸೈಯದ್ ಫುರ್ಖಾನ್ ಪಾಷಾ ಮಾಡಿದರು. ಮುಹಮ್ಮದ್ ನಿಝಾಮುದ್ದಿನ್ ಅತಿಥಿಗಳ ಸ್ವಾಗತ ಹಾಗೂ ನಿರೂಪಣೆ ಮಾಡಿದರು.

ವೇದಿಕೆಯಲ್ಲಿ ಮೇಲೆ ಡಿಡಿಪಿಐ ಸಲಿಂ ಪಾಷಾ, ಡಾ. ಉಸಾಮುದ್ದಿನ್ ಉಜೇರ್, ನಗರಸಬೆ ಅಧ್ಯಕ್ಷ ಮುಹಮ್ಮದ್ ಗೌಸ್, ಡಾ. ಕುಮಾರ ದೇಶಮುಖ, ಕಸಪ ಅಧ್ಯಕ್ಷ ಸುರೇಶ ಚನ್ನಶೆಟ್ಟಿ, ಗುರುನಾಥ ಗಡ್ಡೆ, ಎಂಸ್ ಮನೋಹರ, ಓಂಪ್ರಕಾಶ ರೊಟ್ಟೆ, ಡಾ. ಸಂಜೀವಕುಮಾರ ಅತಿವಾಳೆ, ವೀರಭದ್ರಪ್ಪ ಉಪ್ಪನ್ ಉಪಸ್ಥಿತರಿದ್ದರು. ವಿವಿಧ ಧರ್ಮದ ನೂರಾರು ಮಂದಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X