Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಓದುವಿಕೆಯಿಂದ ಜಗತ್ತಿನ ಅರಿವು ಸಾಧ್ಯ:...

ಓದುವಿಕೆಯಿಂದ ಜಗತ್ತಿನ ಅರಿವು ಸಾಧ್ಯ: ರಶ್ಮಿ ಎಸ್.

ವಾರ್ತಾಭಾರತಿವಾರ್ತಾಭಾರತಿ31 July 2026 11:59 PM IST
share
ಓದುವಿಕೆಯಿಂದ ಜಗತ್ತಿನ ಅರಿವು ಸಾಧ್ಯ: ರಶ್ಮಿ ಎಸ್.

ಬೀದರ್ : ಓದುವ ಹವ್ಯಾಸ ಕಡಿಮೆಯಾಗುತ್ತಿದೆ. ಅದರಿಂದ ಜನರ ನೆಮ್ಮದಿ ಕಳೆದು ಹೋಗುತ್ತಿದೆ. ಪತ್ರಿಕೆಗಳು ಸೇರಿ ಒಟ್ಟು ಏನನ್ನಾದರೂ ಓದುವಿಕೆ ಇದ್ದರೆಯೇ ಅಂತಃಕರಣದ ಸಮಾಜ ರೂಪಿಸಲು ಸಾಧ್ಯ ಎಂದು ಹಿರಿಯ ಪತ್ರಕರ್ತೆ ರಶ್ಮಿ ಎಸ್ ಅವರು ಹೇಳಿದರು.

ಬಸವಕಲ್ಯಾಣ ನಗರದ ಬಿಕೆಡಿಬಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ತಾಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಹಮ್ಮಿಕೊಂಡಿರುವ ಪತ್ರಿಕಾ ದಿನಾಚರಣೆ ಹಾಗೂ ಶಂಕರ ಪ್ರಸಾದ ದುಬೆ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.

ಕಲ್ಯಾಣದಲ್ಲಿ ಹನ್ನೆರಡನೇ ಶತಮಾನದಲ್ಲಿಯೇ ಸಿಟಿಜನ್ ಜರ್ನಲಿಸಂ ಆರಂಭವಾಗಿತ್ತು. ಸಮಾಜದ ಓರೆ ಕೋರೆಗಳನ್ನು ಗುರುತಿಸುವ, ಸಮಸ್ಯೆಗಳನ್ನು ಗ್ರಹಿಸುವ, ಪರಿಹಾರ ಕಂಡುಕೊಳ್ಳುವ, ಪ್ರಭುತ್ವ ಪ್ರಶ್ನಿಸುವ ಕೆಲಸ ವಚನಕಾರರು ಅಂದೇ ಮಾಡಿದ್ದರು. ಹಾಗೆಯೇ ಅವರು ಸಾತ್ವಿಕ ಮಾರ್ಗ ಅನುಸರಿಸಿದ್ದರು ಎಂದರು.

ಸಹನಾಭೂತಿ ಒಂದೇ ನಮ್ಮನ್ನು ಪಶುಗಳಿಂದ, ಪಕ್ಷಿಗಳಿಂದ ಬೇರ್ಪಡಿಸಿ ಮನುಷ್ಯನನ್ನಾಗಿಸಿದೆ. ಸ್ವಾವಲಂಬನೆಗೆ, ಸ್ವಯಂಭೂಗಾಗಿ, ಸಾಮುದಾಯಿಕ ಹಿತಕ್ಕೆ ಪತ್ರಿಕೆ ಓದಬೇಕು ಎಂದು ಅವರು ತಿಳಿಸಿದರು.

ಶಾಸಕ ಶರಣು ಸಲಗರ್ ಅವರು ಮಾತನಾಡಿ, ರಾಜಕಾರಣಿಗಳ ಬಗ್ಗೆ ನಂಬಿಕೆ ಕಡಿಮೆಯಾಗಿರಬಹುದು, ಪತ್ರಿಕೆಗಳ ಮೇಲೆ ಜನರ ನಂಬಿಕೆ ಗಾಢವಾಗಿದೆ. ಸಮಾಜದ ಅಂಕು ಡೊಂಕು ತಿದ್ದುವ ಕೆಲಸ ಮಾಧ್ಯಮಗಳು ಮಾಡುತ್ತವೆ. ರಾಜಕಾರಣಿಗಳಿಂದ ಆಗದ ಕೆಲಸಗಳು ಮಾಧ್ಯಮದಿಂದ ಸಾಧ್ಯವಾಗಿವೆ ಎಂದು ಹೇಳಿದರು.

ಪತ್ರಿಕಾ ಭವನಕ್ಕೆ ನಿವೇಶನವಿದ್ದರೆ ಅದಕ್ಕೆ ಬೇಕಾದ ಅನುದಾನವನ್ನು ಕೆಕೆಆರ್‌ಡಿಬಿಯಿಂದ ಬಿಡುಗಡೆಗೊಳಿಸಿ ಪತ್ರಿಕಾ ಭವನ ನಿರ್ಮಿಸುವ ಭರವಸೆ ನೀಡಿದ ಅವರು,

ಪತ್ರಕರ್ತರು ಅನೇಕ ಸಂಗತಿಗಳನ್ನು ಬರೆದು ನಮ್ಮ ಗಮನಕ್ಕೆ ತಂದಿದ್ದಾರೆ. ನಾನು ಅವುಗಳನ್ನು ಸಕಾರಾತ್ಮಕವಾಗಿ ಸ್ವೀಕರಿಸಿದ್ದೆನೆ ಎಂದರು.

ವಿಧಾನ ಪರಿಷತ್ ಸದಸ್ಯ ಎಂ.ಜಿ. ಮುಳೆ ಮಾತನಾಡಿ, ದೇಶದ ಸ್ವಾತಂತ್ರ್ಯದಲ್ಲಿ , ಕರ್ನಾಟಕ ಏಕೀಕರಣದಲ್ಲಿ ಪತ್ರಿಕೆಗಳ ಪಾತ್ರ ದೊಡ್ಡದು. ಪತ್ರಿಕೆಗಳು ಸಮಾಜದ ಕನ್ನಡಿ. ಹಲವು ಸಮಸ್ಯೆಗಳನ್ನು ಅಧಿಕಾರದಲ್ಲಿರುವವರ ಎದುರಿಗೆ ತಂದು ಇಡುವ ಕೆಲಸ ಮಾಡುತ್ತವೆ ಎಂದು ಅಭಿಪ್ರಾಯಪಟ್ಟರು.

ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಆನಂದ್ ದೇವಪ್ಪ ಅವರು ಮಾತನಾಡಿ, ಸಾಮಾಜಿಕ ಬೆಳವಣಿಗೆಗೆ ಮಾಧ್ಯಮ ಹೆಚ್ಚು ಒತ್ತು ನೀಡಿದೆ. ಆಡಳಿತಾತ್ಮಕ ಸುಧಾರಣೆ, ಪ್ರಭುತ್ವದ ಪ್ರಜ್ಞಾಪೂರ್ವಕ ಕೆಲಸಕ್ಕೆ ಅಣಿಯಾಗಲು ಎಚ್ಚರಿಸುತ್ತದೆ. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಪತ್ರಿಕಾ ಭವನ ನಿರ್ಮಾಣ ಮತ್ತು ಪತ್ರಕರ್ತರಿಗೆ ಸರ್ಕಾರದ ಸೌಲಭ್ಯಗಳನ್ನು ಒದಗಿಸಲು ಮೊದಲ ಆದ್ಯತೆಗೆ ಶ್ರಮಿಸುವೆ ಎಂದು ನುಡಿದರು.

ತಾಲೂಕಿನ ಎಲ್ಲಾ ಪತ್ರಕರ್ತರಿಗೆ, ವಿದ್ಯುನ್ಮಾನ ಮತ್ತು ಸಾಮಾಜಿಕ ಮಾಧ್ಯಮದವರಿಗೆ ಹಾಗೂ ಪತ್ರಿಕಾ ಎಜೆಂಟರಿಗೂ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಪ್ರಕಾಶ್ ಕುದರಿ, ಡಿವೈಎಸ್ಪಿ ಮಡೋಳಪ್ಪ, ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯದರ್ಶಿ ಶಶಿಕಾಂತ್ ಶೆಂಬೆಳ್ಳಿ, ಬಿಡಿಪಿಸಿ ಅಧ್ಯಕ್ಷ ಅನಿಲಕುಮಾರ್ ರಗಟೆ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಾಲಾ ಬಿ ನಾರಾಯಣರಾವ್, ಕಾಡಾ ಅಧ್ಯಕ್ಷ ಬಾಬು ಹೊನ್ನಾನಾಯಕ್ ಹಾಗೂ ಸರ್ಕಾರಿ ನೌಕರರ ತಾಲೂಕಾಧ್ಯಕ್ಷ ದಿಲೀಪಕುಮಾರ್ ಉತ್ತಮ್ ಸೇರಿದಂತೆ ಅನೇಕ ಪತ್ರಕರ್ತರು ಉಪಸ್ಥಿತರಿದ್ದರು. ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕಾಧ್ಯಕ್ಷ ಮಾರ್ಥಂಡ್ ಜ್ಯೋಷಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಉದಯಕುಮಾರ್ ಮುಳೆ ಪ್ರಶಸ್ತಿ ಪತ್ರ ವಾಚಿಸಿದರು. ಎಂ ಡಿ ನೈಮೋದ್ದಿನ್ ವಂದಿಸಿದರು.




Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X