Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೋಧಗಯಾಕ್ಕೆ ಸಾವಿರಾರು ಕೋಟಿ ರೂ. ಹಣ...

ಬೋಧಗಯಾಕ್ಕೆ ಸಾವಿರಾರು ಕೋಟಿ ರೂ. ಹಣ ಬರುತ್ತಿರುವುದರಿಂದ ಮನುವಾದಿಗಳು ಅದನ್ನು ಬೌದ್ಧರಿಗೆ ಬಿಡುತ್ತಿಲ್ಲ : ಭಂತೆ ಸಂಘರಖ್ಖೀತ್

ವಾರ್ತಾಭಾರತಿವಾರ್ತಾಭಾರತಿ21 Oct 2025 5:38 PM IST
share
ಬೋಧಗಯಾಕ್ಕೆ ಸಾವಿರಾರು ಕೋಟಿ ರೂ. ಹಣ ಬರುತ್ತಿರುವುದರಿಂದ ಮನುವಾದಿಗಳು ಅದನ್ನು ಬೌದ್ಧರಿಗೆ ಬಿಡುತ್ತಿಲ್ಲ : ಭಂತೆ ಸಂಘರಖ್ಖೀತ್
ಅ.24 ರಂದು ವಿನಯಚಾರ್ಯ ಭಂತೆಜಿ ಬೀದರ್ ಗೆ ಆಗಮನ, ಬೃಹತ್ ಕಾರ್ಯಕ್ರಮ

ಬೀದರ್ : ಸುಮಾರು ವರ್ಷಗಳಿಂದ ಬೌದ್ಧರ ಬೋಧಗಯಾ ಆಂದೋಲನ ಇಡೀ ದೇಶ್ಯಾದ್ಯಂತ ನಡೆಯುತ್ತಿದೆ. ಆದರೆ ಬೋಧಗಯಾಕ್ಕೆ ಸಾವಿರಾರು ಕೋಟಿ ರೂ. ಹಣ ಬರುತ್ತಿದ್ದು, ಸಹಜವಾಗಿ ಮನುವಾದಿಗಳು ಅಲ್ಲಿ ಬರುವ ಹಣಕ್ಕೆ ಆಸೆಪಟ್ಟು ಇದನ್ನು ಬೌದ್ಧರಿಗೆ ಬಿಟ್ಟುಕೊಡುತ್ತಿಲ್ಲ ಎಂದು ಆಣದೂರಿನ ಭಂತೆ ಸಂಘರಖ್ಖೀತ್ ಆರೋಪಿಸಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೋಧಗಯಾ ಕುರಿತ ಮನುವಾದಿಗಳ ಷಡ್ಯಂತ್ರದಲ್ಲಿ ಸ್ಥಳೀಯ ಸರ್ಕಾರ ಹಾಗೂ ಆಡಳಿತವೂ ಭಾಗಿಯಾಗಿವೆ ಎಂದು ದೂರಿದರು. ಪ್ರತಿಭಟನೆ ನಡೆಸಿ ಹಕ್ಕು ಕೇಳುವುದು ಅಪರಾಧವಲ್ಲ, ಆದರೆ ವಿನಯಚಾರ್ಯ ಭಂತೆಜಿಯವರ ಮೇಲೆ ಸುಳ್ಳು ಆರೋಪ ಮಾಡಿ ಅವರನ್ನು ಜೈಲಿಗೆ ಕಳುಹಿಸುವ ಮೂಲಕ ಬೌದ್ಧ ಪರಂಪರೆಗೆ ಅವಮಾನ ಮಾಡಲಾಗಿದೆ ಎಂದು ಅವರು ಆರೋಪಿಸಿದರು.

ಕೋರ್ಟ್ ನಲ್ಲಿಯೂ ಕೂಡ ವಿಚಾರಣೆ ನಡೆಯುತ್ತಿದೆ. ರಾಮ ಮಂದಿರದ ತೀರ್ಪು ನ್ಯಾಯಾಲಯವೇ ನೀಡಿದೆ. ಆದರೆ ಬೋಧಗಯಾದಲ್ಲಿ ಬುದ್ಧರಿರುವುದು ಖಚಿತವಿದೆ. ಅದನ್ನು ಬೌದ್ಧರಿಗೆ ನೀಡುವುದಕ್ಕೆ ವಿಚಾರಣೆಯ ದಿನಾಂಕ ಪದೇ ಪದೇ ಮುಂದುಡುತ್ತಿದ್ದಾರೆ. ಇದರಿಂದಾಗಿ ನ್ಯಾಯಾಲಯದಲ್ಲಿಯೂ ಕೂಡ ಮನುವಾದವಿದೆ ಎನ್ನುವುದು ಸ್ಪಷ್ಟವಾಗಿ ಗೊತ್ತಾಗುತ್ತದೆ ಎಂದು ನ್ಯಾಯಾಂಗ ವ್ಯವಸ್ಥೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಬೌದ್ಧರ ಓಟಿನ ಸಂಖ್ಯೆ ಕಡಿಮೆ ಇರುವ ಕಾರಣಕ್ಕೆ ಕರ್ನಾಟಕದ ನಮ್ಮ ಸಮಾಜದ ಜನ ಪ್ರತಿನಿಧಿಗಳು ಈ ಹೋರಾಟಕ್ಕೆ ಬೆಂಬಲ ಕೂಡ ನೀಡುವುದಿಲ್ಲ. ಇವರಿಗೆ ನಮ್ಮ ಸಮಾಜದ ಜನರು ತಕ್ಕ ಪಾಠ ಕಲಿಸಬೇಕು. ಇಲ್ಲದಿದ್ದರೆ ಅವರು ಜನರನ್ನು ತಮಗೆ ಬೇಕಾದ ಹಾಗೆ ಉಪಯೋಗ ಮಾಡಿಕೊಳ್ಳುತ್ತಾರೆ. ಯಾರು ಹೋರಾಟ ಮಾಡುತಿದ್ದಾರೋ ಅವರಿಗೆ ನಮ್ಮ ಸಮಾಜ ಸಹಾಯ ಮಾಡಬೇಕು ಎಂದು ಸ್ವಂತ ಸಮಾಜದ ಜನಪ್ರತಿನಿಧಿಗಳ ವಿರುದ್ಧ ಹರಿಹಾಯ್ದರು.

ಬೋಧಗಾಯ ಮುಕ್ತಿ ಆಂದೋಲನದ ಪ್ರತಿಭಟನೆಗೆ ಅಲ್ಲಿನ ರಾಜ್ಯ ಹಾಗೂ ಕೇಂದ್ರ ಸರ್ಕಾರ ಬೆಲೆ ನೀಡದೆ ಅನ್ಯಾಯ ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ. ಹಾಗಾಗಿ ಫೆ.12ರ, 2026 ರಂದು ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ. ಆದರ ಪೂರ್ವಭಾವಿ ಸಭೆಯಂತೆ ಅ.24ರ, 2025 ರಂದು ಬೀದರ್ ನಲ್ಲಿ ಬೃಹತ್ ಕಾರ್ಯಕ್ರಮ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ವಿನಯಚಾರ್ಯ ಭಂತೆಜಿ ಅವರು ಭಾಗವಹಿಸುತ್ತಿದ್ದಾರೆ. ಹಾಗಾಗಿ ಜಿಲ್ಲೆಯ ಬಹುತೇಕ ಸಂಖ್ಯೆಯ ಜನರು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದರು.

ರಾಜಪ್ಪ ಗೂನ್ನಳ್ಳಿಕರ್ ಅವರು ಮಾತನಾಡಿ, ಅ. 24 ರಂದು ಬೋಧಗಯಾ ಮುಕ್ತಿ ಆಂದೋಲನದ ನಿಮಿತ್ಯವಾಗಿ ಬೌದ್ಧ ಧಮ್ಮಧ್ವಜ ಪಥ ಸಂಚಲನ ಹಾಗೂ ವರ್ಷವಾಸ ಸಮಾರೋಪ ಸಮಾರಂಭ ಕೂಡ ನಡೆಯಲಾಗುವುದು. ಪಥ ಸಂಚಲನವು ಸಾಯಂಕಾಲ 4 ಗಂಟೆಗೆ ಶಿವನಗರ್ ವಾಕಿಂಗ್ ಸ್ಪಾಟ್ ನಿಂದ ಪ್ರಾರಂಭವಾಗಿ ಕೇಂದ್ರ ಬಸ್ ನಿಲ್ದಾಣ, ಮಡಿವಾಳ ವೃತ್ತದ ಮೂಲಕ ಅಂಬೇಡ್ಕರ್ ವೃತ್ತಕ್ಕೆ ತಲುಪುವುದು. ಅಂಬೇಡ್ಕರ್ ವೃತ್ತದಲ್ಲಿ ಸಾಯಂಕಾಲ 5 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯುವುದು. ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ ಮೈಸೂರಿನ ಬೌದ್ಧ ಸಾಹಿತಿ, ಚಿಂತಕ ಹನಸೋಗೆ ಸೋಮಶೇಖರ್ ಭಾಗವಹಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಹಾಲಹಳ್ಳಿಯ ಭಂತೆ ಧಮ್ಮದೀಪ ದೇವನಾಮಪ್ರೀಯ, ಬೀದರ್ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ವಿಠಲದಾಸ್ ಪ್ಯಾಗೆ, ವಿಜಯಕುಮಾರ್ ಗಾಯಕವಾಡ್, ಬುದ್ಧ ಬೆಳಕು ಟ್ರಸ್ಟ್ ನ ಅಧ್ಯಕ್ಷ ಮಹೇಶ್ ಗೋರನಾಳಕರ್, ಸೂರ್ಯಕಾಂತ್ ಚಿದ್ರಿ, ಸುರೇಶ್ ಜೊಜನಾಕರ್, ಚಂದ್ರಕಲಾ ಜೆ. ಬಡಿಗೇರ್, ಮಂಜುಳಾ ಭಾವಿದೊಡ್ಡಿ, ಸಂತೋಷ್ ಫುಲೆ, ಗೋವಿಂದ್ ಪೂಜಾರಿ, ನರಸಪ್ಪಾ ಮೇಟಿ, ಜಗನಾಥ್ ಕಾಂಬಳೆ ಹಾಗೂ ಶಿವಮೂರ್ತಿ ಸುಬಾನೆ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X