Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ತಾಲಿಬಾನ್ ಮತ್ತು ಮನುಸ್ಮೃತಿಗೆ ಏನೂ...

ತಾಲಿಬಾನ್ ಮತ್ತು ಮನುಸ್ಮೃತಿಗೆ ಏನೂ ವ್ಯತ್ಯಾಸವಿಲ್ಲ : ಸಚಿವ ಸಂತೋಷ್ ಲಾಡ್

ವಾರ್ತಾಭಾರತಿವಾರ್ತಾಭಾರತಿ14 Oct 2025 7:18 PM IST
share
ತಾಲಿಬಾನ್ ಮತ್ತು ಮನುಸ್ಮೃತಿಗೆ ಏನೂ ವ್ಯತ್ಯಾಸವಿಲ್ಲ : ಸಚಿವ ಸಂತೋಷ್ ಲಾಡ್

ಬೀದರ್ : ಹೆಣ್ಣುಮಕ್ಕಳಿಗೆ ಯಾವುದು ಶೈಕ್ಷಣಿಕವಾಗಿ ಅವಕಾಶ ನೀಡದೆ ಮಹಿಳೆಯರ ವಿರುದ್ಧವಾಗಿರುವ ತಾಲಿಬಾನ್ ಮತ್ತು ಮನುಸ್ಮೃತಿಗೆ ಯಾವುದೇ ರೀತಿಯ ವ್ಯತ್ಯಾಸವಿಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.

ಇಂದು ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿಯವರ 11 ವರ್ಷದ ಸಾಧನೆ ಏನೆಂದರೆ ನರೇಂದ್ರ ಮೋದಿ ಅವರು ಒಂದೇ ಒಂದು ಪತ್ರಿಕಾಗೋಷ್ಠಿ ನಡೆಸಲಿಲ್ಲ. ತಾಲಿಬಾನಿಗಳಿಗೆ ಕರೆಸಿ ಇಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದೇ ಅವರ ದೊಡ್ಡ ಹೆಗ್ಗಳಿಕೆಯಾಗಿದೆ. ಎಲ್ಲಕ್ಕಿಂತ ನಾಚಿಕೆಗೇಡಿನ ಸಂಗತಿ ಎಂದರೆ ತಾಲಿಬಾನಿಗಳು ಇಲ್ಲಿಗೆ ಬಂದು, ತಾವು ನಡೆಸುವ ಪತ್ರಿಕಾಗೋಷ್ಠಿಯಲ್ಲಿ ಮಹಿಳೆಯರಿಗೆ ಅವಕಾಶ ಮಾಡಬಾರದು ಎನ್ನುತ್ತಾರಲ್ಲ ಇದು ಬಿಜೆಪಿಯವರ ಕೊಡುಗೆಯಾಗಿದೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.

ತಾಲಿಬಾನ್ ಮತ್ತು ಮನುಸ್ಮೃತಿಗೆ ಏನೂ ವ್ಯತ್ಯಾಸವಿಲ್ಲ. ಅದು ಬಿಜೆಪಿಯವರ ಐಡಿಯಾಲಜಿಯಾಗಿದೆ. ನದಿ, ದೇವರು, ಸರಸ್ವತಿ, ಕಾವೇರಿ ಎಲ್ಲವೂ ಹೆಣ್ಣು ಮಕ್ಕಳ ಹೆಸರ ಮೇಲೆಯೇ ಇರುವುದು. ಇವರು ಎಷ್ಟು ಮಹಿಳೆಯರಿಗೆ ಗೌರವ ನೀಡಿದ್ದಾರೆ ಎಂದರೆ, ಹೆಣ್ಣುಮಕ್ಕಳಿಗೆ ಯಾವುದು ಶೈಕ್ಷಣಿಕವಾಗಿ ಅವಕಾಶ ನೀಡದೆ ಮಹಿಳೆಯರ ವಿರುದ್ಧವಾಗಿರುತ್ತದೆಯೋ ಆ ತಾಲಿಬಾನಿಗಳಿಗೆ ಇಲ್ಲಿಗೆ ಕರೆಸಿ ಸನ್ಮಾನ ಮಾಡಲಾಗುತ್ತದೆ. ತಾಲಿಬಾನಿಗಳನ್ನು ಯಾಕೆ ಬೈಕಾಟ್ ಮಾಡುತ್ತಿಲ್ಲ. ಕಾಂಗ್ರೆಸ್ ನವರನ್ನು ತಾಲಿಬಾನ್ ಎಂದು ಬಯ್ಯುವ್ ಇವರು, ತಾಲಿಬಾನಿಗಳನ್ನು ಕರೆಸಿ ಪ್ರೊಟೋಕಾಲ್ ಪ್ರಕಾರ ಅವರಿಗೆ ಸೆಲ್ಯೂಟ್ ಹೊಡೆಯುತ್ತಿದ್ದಾರೆ ಎಂದು ಹೇಳಿದರು.

ವಾಜಪೇಯಿ, ಅಡ್ವಾಣಿ ಹಾಗೆಯೇ ಮೋದಿ ಕೂಡ ಪಾಕಿಸ್ತಾನಕ್ಕೆ ಹೋಗಿ ಬಂದರು. ಪಾಕಿಸ್ತಾನ ಜೊತೆಗೆ ಕ್ರಿಕೆಟ್ ಮ್ಯಾಚ್ ಆಡಿಸಿದರು. ಈಗ ತಾಲಿಬಾನಿಗಳನ್ನು ಕರೆಸಿದ್ದಾರೆ. ಈ ವಿಷಯಗಳ ಬಗ್ಗೆ ಚರ್ಚೆಯೇ ಮಾಡುವುದಿಲ್ಲ ಎಂದರು.

ಈ ಸರ್ಕಾರದಲ್ಲಿ ಭಾರತದಾದ್ಯಂತ ಅದೆಷ್ಟೋ ಪತ್ರಕರ್ತರನ್ನು ಕೊಲೆ ಮಾಡಲಾಗಿದೆ. ಯಾರು ಸರ್ಕಾರದ ವಿರುದ್ಧವಾಗಿ ಮಾತನಾಡಿದ್ದಾರೂ ಅವರು ಕೊಲೆಯಾಗಿದ್ದಾರೆ. ಗೌರಿ ಲಂಕೇಶ್, ಕಲ್ಬುರ್ಗಿ ಅವರನ್ನು ಹತ್ಯೆ ಮಾಡಲಾಯಿತು. ವ್ಯಾಪಂ ಪ್ರಕರಣದಲ್ಲಿರುವ ಸುಮಾರು 44 ಸಾಕ್ಷಿಗಳನ್ನು ಕೊಲೆ ಮಾಡಲಾಗಿದೆ. ಇದರ ಬಗ್ಗೆ ಯಾವುದೇ ರೀತಿಯ ಚರ್ಚೆಯಾಗುವುದಿಲ್ಲ. ಯಾವುದೇ ರೀತಿಯ ತನಿಖೆ ನಡೆಯುವುದಿಲ್ಲಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಪೌರಾಡಳಿತ ಮತ್ತು ಹಜ್ ಸಚಿವ ರಹೀಮ್ ಖಾನ್, ಮಹಾನಗರ ಪಾಲಿಕೆಯ ಅಧ್ಯಕ್ಷ ಮುಹಮ್ಮದ್ ಗೌಸ್, ಅನಿಲ್ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ್ ಅರಳಿ ಸೇರಿದಂತೆ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X